AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ಸಂಭ್ರಮಕ್ಕೆ ಪುನೀತ್​​ ರಾಜ್​ಕುಮಾರ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಪೋಸ್ಟರ್​ ರಿಲೀಸ್​

Puneeth Rajkumar: ‘ಲಕ್ಕಿ ಮ್ಯಾನ್​’ ಸಿನಿಮಾದ ಕಲಾವಿದರು ಈ ಪೋಸ್ಟರ್​ ಅನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರನ್ನು ಎಲ್ಲರೂ ತುಂಬ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ನ್ಯೂ ಇಯರ್​ ಸಂಭ್ರಮಕ್ಕೆ ಪುನೀತ್​​ ರಾಜ್​ಕುಮಾರ್​ ಹೊಸ ಚಿತ್ರ ‘ಲಕ್ಕಿ ಮ್ಯಾನ್​’ ಪೋಸ್ಟರ್​ ರಿಲೀಸ್​
‘ಲಕ್ಕಿ ಮ್ಯಾನ್​’ ಚಿತ್ರದ ಪೋಸ್ಟರ್​
Follow us
TV9 Web
| Updated By: ಮದನ್​ ಕುಮಾರ್​

Updated on: Dec 31, 2021 | 12:56 PM

ಹೊಸ ವರ್ಷದ ಸ್ವಾಗತಕ್ಕೆ ಇಡೀ ಪ್ರಪಂಚ ಸಜ್ಜಾಗಿದೆ. ಅನೇಕ ಸಿನಿಮಾಗಳು ಈ ಸಂದರ್ಭದಲ್ಲಿ ಪೋಸ್ಟರ್​ ರಿಲೀಸ್​ ಮೂಲಕ ಸಿನಿಪ್ರಿಯರಿಗೆ ವಿಶ್​ ಮಾಡಲಿವೆ. ಅದೇ ರೀತಿ ಪುನೀತ್​ ರಾಜ್​ಕುಮಾರ್​ ನಟನೆಯ ‘ಲಕ್ಕಿ ಮ್ಯಾನ್​’ (Lucky Man Movie) ಸಿನಿಮಾದ ಪೋಸ್ಟರ್​ ಬಿಡುಗಡೆ ಆಗಿದೆ. ಇದರಲ್ಲಿ ಪುನೀತ್​ ಅವರನ್ನು ಕಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ಸಿನಿಮಾದಲ್ಲಿ ‘ಲವ್​ ಮಾಕ್ಟೇಲ್​’ ಖ್ಯಾತಿಯ ಡಾರ್ಲಿಂಗ್​ ಕೃಷ್ಣ (Darling Krishna), ಸಂಗೀತಾ ಶೃಂಗೇರಿ, ರೋಷಿನಿ ಪ್ರಕಾಶ್​, ನಾಗಭೂಷಣ ಮುಂತಾದವರು ಅಭಿನಯಿಸಿದ್ದಾರೆ. ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ನಿಧನರಾಗುವುದಕ್ಕೂ ಮುನ್ನ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಆದರೆ ಆ ಚಿತ್ರದ ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ. ಅಪ್ಪು ನಟಿಸುತ್ತಿದ್ದ ಸಿನಿಮಾಗಳ ಪೈಕಿ ‘ಲಕ್ಕಿ ಮ್ಯಾನ್​’ ಚಿತ್ರ ಕೂಡ ಪ್ರಮುಖವಾದದ್ದು.

ಕೆಲವೇ ದಿನಗಳ ಹಿಂದೆ ಈ ಚಿತ್ರದ ಕೆಲವು ಫೋಟೋಗಳು ಲಭ್ಯವಾಗಿದ್ದವು. ಪುನೀತ್​ ರಾಜ್​ಕುಮಾರ್​ ಅವರು ಪ್ರಭುದೇವ ಜತೆ ಡ್ಯಾನ್ಸ್​ ಮಾಡುತ್ತಿದ್ದ ಫೋಟೋಗಳನ್ನು ಕಂಡು ಅಭಿಮಾನಿಗಳು ಖುಷಿಪಟ್ಟಿದ್ದರು. ಈಗ ಈ ಸಿನಿಮಾದ ಹೊಸ ಪೋಸ್ಟರ್​ ಬಿಡುಗಡೆಯಾಗಿ ನಿರೀಕ್ಷೆ ಮೂಡಿಸಿದೆ.

‘ಲಕ್ಕಿ ಮ್ಯಾನ್​’ ಸಿನಿಮಾದ ಕಲಾವಿದರು ಈ ಪೋಸ್ಟರ್​ ಅನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಪ್ಪು ಅಭಿಮಾನಿಗಳು ಕಮೆಂಟ್​ಗಳ ಮೂಲಕ ಕಾತರ ವ್ಯಕ್ತಪಡಿಸುತ್ತಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರನ್ನು ಎಲ್ಲರೂ ತುಂಬ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಪ್ರಭುದೇವ ಅವರ ಸಹೋದರ ಎಸ್​. ನಾಗೇಂದ್ರ ಪ್ರಸಾದ್​ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ತಮಿಳಿನ ‘ಓಹ್ ಮೈ ಕಡವುಳೆ’ ಸಿನಿಮಾದ ರಿಮೇಕ್​ ಇದು. ಈ ಚಿತ್ರದಲ್ಲಿ ಪುನೀತ್​​ ರಾಜ್​ಕುಮಾರ್​ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಬರುವ ವಿಶೇಷ ಹಾಡಿನಲ್ಲಿ ಪ್ರಭುದೇವ ಮತ್ತು ಪುನೀತ್​ ರಾಜ್​ಕುಮಾರ್​ ಒಟ್ಟಿಗೆ ಹೆಜ್ಜೆ ಹಾಕಿದ್ದಾರೆ. ಡಾ. ರಾಜ್​ಕುಮಾರ್​ ಅವರ ಕುರಿತು ಈ ಸಾಂಗ್​ ರಚಿತವಾಗಿದೆ ಎಂಬುದು ವಿಶೇಷ.

‘ಲಕ್ಕಿ ಮ್ಯಾನ್​’ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​​ ಕೆಲಸಗಳು ನಡೆಯುತ್ತಿವೆ. ಡಬ್ಬಿಂಗ್ ಮಾಡುವ ವೇಳೆ ಪುನೀತ್​ ಅವರನ್ನು ಡಾರ್ಲಿಂಗ್​ ಕೃಷ್ಣ ತುಂಬ ಮಿಸ್​ ಮಾಡಿಕೊಂಡರು. ಡಬ್ಬಿಂಗ್​ ಸಮಯದ ಒಂದು ವಿಡಿಯೋ ತುಣುಕನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಅದನ್ನು ಕಂಡು ಅಭಿಮಾನಿಗಳು ಎಮೋಷನಲ್​ ಆಗಿದ್ದರು. ಪರ್ಸಾ ಪಿಕ್ಚರ್ಸ್ ಬ್ಯಾನರ್​ ಮೂಲಕ ಈ ಸಿನಿಮಾ ಮೂಡಿಬರುತ್ತಿದೆ. ಆದಷ್ಟು ಬೇಗ ಪುನೀತ್​ ರಾಜ್​ಕುಮಾರ್​​ ಅವರನ್ನು ಬೆಳ್ಳಿಪರದೆ ಮೇಲೆ ನೋಡಬೇಕು ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ:

ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ಹೆಸರಿಟ್ಟ ದಂಪತಿ; ಅಪ್ಪು ಮೇಲಿನ ಅಭಿಮಾನಕ್ಕೆ ಸಾಟಿಯೇ ಇಲ್ಲ

ಅಪ್ಪು ಇಲ್ಲದೇ 2 ತಿಂಗಳು: ಪುನೀತ್​​ ನಿಧನದ ಬಳಿಕ ನಡೆದ 10 ಪ್ರಮುಖ ಘಟನೆಗಳೇನು?

ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ