AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನ ಅಂತಿಮ ದರ್ಶನ ಪಡೆದ ಧೃತಿ; ಪುನೀತ್​ ತಲೆ ಸವರಿ ಬಿಕ್ಕಿಬಿಕ್ಕಿ ಅತ್ತ ಮಗಳು

ಧೃತಿ ಅವರು ಇಂದು (ಅಕ್ಟೋಬರ್​ 30) ಮಧ್ಯಾಹ್ನ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನ ಏರಿದರು. ಸಂಜೆ 4 ಗಂಟೆ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೃತಿ ಆಗಮಿಸಿದರು.

ಅಪ್ಪನ ಅಂತಿಮ ದರ್ಶನ ಪಡೆದ ಧೃತಿ; ಪುನೀತ್​ ತಲೆ ಸವರಿ ಬಿಕ್ಕಿಬಿಕ್ಕಿ ಅತ್ತ ಮಗಳು
ಧೃತಿ
TV9 Web
| Edited By: |

Updated on:Oct 30, 2021 | 6:17 PM

Share

ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಧೃತಿಗೆ ತಂದೆ ಪುನೀತ್​ ರಾಜ್​ಕುಮಾರ್​ ಮೃತಪಟ್ಟಿರುವ ವಿಚಾರ ನಿಜಕ್ಕೂ ಶಾಕಿಂಗ್​ ಆಗಿದೆ. ತಂದೆ ಮೃತಪಟ್ಟ ಸುದ್ದಿ ಕೇಳುತ್ತಲೇ ಅವರು ವಿಮಾನ ಏರಿ ಬೆಂಗಳೂರಿಗೆ ಬಂದಿದ್ದಾರೆ. 24 ಗಂಟೆಗೂ ಅಧಿಕ ಕಾಲ ಪ್ರಯಾಣ ಬೆಳೆಸಿ ಬೆಂಗಳೂರು ತಲುಪಿದ್ದಾರೆ. ವಿಮಾನ ನಿಲ್ದಾಣದಿಂದ ಅವರು ನೇರವಾಗಿ ಕಂಠೀರವ ಸ್ಟೇಡಿಯಂ ತಲುಪಿದರು. ಅಪ್ಪನ ತಲೆ ಸವರಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ದೊಡ್ಡಪ್ಪ ಶಿವರಾಜ್​ಕುಮಾರ್​ ಅವರು ಧೃತಿಯನ್ನು ಸಂತೈಸುವ ಪ್ರಯತ್ನ ಮಾಡಿದರು.

ಧೃತಿ ಅವರು ಇಂದು (ಅಕ್ಟೋಬರ್​ 30) ಮಧ್ಯಾಹ್ನ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನ ಏರಿದರು. ಸಂಜೆ 4 ಗಂಟೆ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೃತಿ ಆಗಮಿಸಿದರು. ಏರ್‌ಪೋರ್ಟ್‌ನಿಂದ ನೇರವಾಗಿ ಕಂಠೀರವ ಸ್ಟೇಡಿಯಂಗೆ ಅವರು ಆಗಮಿಸಿದ್ದಾರೆ. ಎರಡು ತಿಂಗಳ ಹಿಂದಷ್ಟೇ ಅವರು ಅಮೆರಿಕಕ್ಕೆ ತೆರಳಿದ್ದರು.

ಅಂತ್ಯಕ್ರಿಯೆ ಯಾವಾಗ?

ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ಇಚಾರದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿ ಆಗಿದ್ದವು. ಇಂದು (ಅಕ್ಟೋಬರ್​ 30) ಸಂಜೆಯೇ ಅವರ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿತ್ತು. ಆದರೆ, ಈಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಿದ್ದು, ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.

ಜಿಮ್​ನಲ್ಲಿ ವರ್ಕೌಟ್ ಮಾಡಿದ ಬಳಿಕ ಹೃದಯಾಘಾತದಿಂದಾಗಿ ವಿಧಿವಶರಾಗಿರುವ ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಇಡೀ ದಿನ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಪುನೀತ್ ಅವರ ಅಭಿಮಾನಿಗಳು ಈ ದುಃಖಕರ ಸನ್ನಿವೇಶದಲ್ಲಿ ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬಾರದು. ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಾಯುವ ಕೆಲವೇ ಗಂಟೆಗಳ ಮುನ್ನ ಪುನೀತ್​ ರಾಜ್​ಕುಮಾರ್​ ಮಾತನಾಡಿದ್ದೇನು? ಆಡಿಯೋ ಕ್ಲಿಪ್ ವೈರಲ್​

‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

Published On - 6:14 pm, Sat, 30 October 21

Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ