AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಯಾರ್ಕ್‌ನಿಂದ ದೆಹಲಿಗೆ ಆಗಮಿಸಿದ ಪುನೀತ್‌ ರಾಜ್‌ಕುಮಾರ್ ಪುತ್ರಿ; ಸಂಜೆ ವೇಳೆಗೆ ಬೆಂಗಳೂರಿಗೆ

ಧೃತಿ ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನ ಏರಿದ್ದಾರೆ. ಸಂಜೆ 4.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೃತಿ ಆಗಮಿಸಲಿದ್ದಾರೆ.

ನ್ಯೂಯಾರ್ಕ್‌ನಿಂದ ದೆಹಲಿಗೆ ಆಗಮಿಸಿದ ಪುನೀತ್‌ ರಾಜ್‌ಕುಮಾರ್ ಪುತ್ರಿ; ಸಂಜೆ ವೇಳೆಗೆ ಬೆಂಗಳೂರಿಗೆ
ಧೃತಿ
TV9 Web
| Edited By: |

Updated on: Oct 30, 2021 | 2:27 PM

Share

ನ್ಯೂಯಾರ್ಕ್​ನಲ್ಲಿ ಅಧ್ಯಯನ ಮಾಡುತ್ತಿರುವ ಪುನೀತ್​ ರಾಜ್​ಕುಮಾರ್​ ಮಗಳು ಧೃತಿ ಅವರು ಇಂದು (ಅಕ್ಟೋಬರ್​ 30) ಮಧ್ಯಾಹ್ನ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನ ಏರಿದ್ದಾರೆ. ಸಂಜೆ 4.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೃತಿ ಆಗಮಿಸಲಿದ್ದಾರೆ. ಏರ್‌ಪೋರ್ಟ್‌ನಿಂದ ನೇರವಾಗಿ ಕಂಠೀರವ ಸ್ಟೇಡಿಯಂಗೆ ಅವರು ಬರಲಿದ್ದಾರೆ. ಎರಡು ತಿಂಗಳ ಹಿಂದಷ್ಟೇ ಅವರು ಅಮೆರಿಕಕ್ಕೆ ತೆರಳಿದ್ದರು.

ದೆಹಲಿಯಲ್ಲಿ ಧೃತಿ ವಿಮಾನ ಬದಲಾವಣೆಗೆ ಕರ್ನಾಟಕ ಭವನದ ಅಧಿಕಾರಿಗಳ ಸಹಾಯ ಮಾಡಿದ ಬಗ್ಗೆ ವರದಿ ಆಗಿದೆ. ಬೆಂಗಳೂರಿಗೆ ತೆರಳಲು ಅಧಿಕಾರಿಗಳು ಧೃತಿಗೆ ಬೋರ್ಡಿಂಗ್ ಪಾಸ್ ರೆಡಿ ಮಾಡಿದ್ದರು. ಒಡೋಡಿ ಬಂದು ಧೃತಿ ಬೆಂಗಳೂರು ವಿಮಾನ ಹತ್ತಿದ್ದಾರೆ ಎಂದು ತಿಳಿದು ಬಂದಿದೆ.

ಅಂತ್ಯಕ್ರಿಯೆ ಯಾವಾಗ?

ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ಇಚಾರದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿ ಆಗಿದ್ದವು. ಇಂದು (ಅಕ್ಟೋಬರ್​ 30) ಸಂಜೆಯೇ ಅವರ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿತ್ತು. ಆದರೆ, ಈಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಿದ್ದು, ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.

ಜಿಮ್​ನಲ್ಲಿ ವರ್ಕೌಟ್ ಮಾಡಿದ ಬಳಿಕ ಹೃದಯಾಘಾತದಿಂದಾಗಿ ವಿಧಿವಶರಾಗಿರುವ ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಇಡೀ ದಿನ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಪುನೀತ್ ಅವರ ಅಭಿಮಾನಿಗಳು ಈ ದುಃಖಕರ ಸನ್ನಿವೇಶದಲ್ಲಿ ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬಾರದು. ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ