AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಯಾರ್ಕ್‌ನಿಂದ ದೆಹಲಿಗೆ ಆಗಮಿಸಿದ ಪುನೀತ್‌ ರಾಜ್‌ಕುಮಾರ್ ಪುತ್ರಿ; ಸಂಜೆ ವೇಳೆಗೆ ಬೆಂಗಳೂರಿಗೆ

ಧೃತಿ ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನ ಏರಿದ್ದಾರೆ. ಸಂಜೆ 4.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೃತಿ ಆಗಮಿಸಲಿದ್ದಾರೆ.

ನ್ಯೂಯಾರ್ಕ್‌ನಿಂದ ದೆಹಲಿಗೆ ಆಗಮಿಸಿದ ಪುನೀತ್‌ ರಾಜ್‌ಕುಮಾರ್ ಪುತ್ರಿ; ಸಂಜೆ ವೇಳೆಗೆ ಬೆಂಗಳೂರಿಗೆ
ಧೃತಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 30, 2021 | 2:27 PM

Share

ನ್ಯೂಯಾರ್ಕ್​ನಲ್ಲಿ ಅಧ್ಯಯನ ಮಾಡುತ್ತಿರುವ ಪುನೀತ್​ ರಾಜ್​ಕುಮಾರ್​ ಮಗಳು ಧೃತಿ ಅವರು ಇಂದು (ಅಕ್ಟೋಬರ್​ 30) ಮಧ್ಯಾಹ್ನ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನ ಏರಿದ್ದಾರೆ. ಸಂಜೆ 4.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಧೃತಿ ಆಗಮಿಸಲಿದ್ದಾರೆ. ಏರ್‌ಪೋರ್ಟ್‌ನಿಂದ ನೇರವಾಗಿ ಕಂಠೀರವ ಸ್ಟೇಡಿಯಂಗೆ ಅವರು ಬರಲಿದ್ದಾರೆ. ಎರಡು ತಿಂಗಳ ಹಿಂದಷ್ಟೇ ಅವರು ಅಮೆರಿಕಕ್ಕೆ ತೆರಳಿದ್ದರು.

ದೆಹಲಿಯಲ್ಲಿ ಧೃತಿ ವಿಮಾನ ಬದಲಾವಣೆಗೆ ಕರ್ನಾಟಕ ಭವನದ ಅಧಿಕಾರಿಗಳ ಸಹಾಯ ಮಾಡಿದ ಬಗ್ಗೆ ವರದಿ ಆಗಿದೆ. ಬೆಂಗಳೂರಿಗೆ ತೆರಳಲು ಅಧಿಕಾರಿಗಳು ಧೃತಿಗೆ ಬೋರ್ಡಿಂಗ್ ಪಾಸ್ ರೆಡಿ ಮಾಡಿದ್ದರು. ಒಡೋಡಿ ಬಂದು ಧೃತಿ ಬೆಂಗಳೂರು ವಿಮಾನ ಹತ್ತಿದ್ದಾರೆ ಎಂದು ತಿಳಿದು ಬಂದಿದೆ.

ಅಂತ್ಯಕ್ರಿಯೆ ಯಾವಾಗ?

ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ಇಚಾರದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿ ಆಗಿದ್ದವು. ಇಂದು (ಅಕ್ಟೋಬರ್​ 30) ಸಂಜೆಯೇ ಅವರ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿತ್ತು. ಆದರೆ, ಈಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಿದ್ದು, ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.

ಜಿಮ್​ನಲ್ಲಿ ವರ್ಕೌಟ್ ಮಾಡಿದ ಬಳಿಕ ಹೃದಯಾಘಾತದಿಂದಾಗಿ ವಿಧಿವಶರಾಗಿರುವ ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಇಡೀ ದಿನ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಪುನೀತ್ ಅವರ ಅಭಿಮಾನಿಗಳು ಈ ದುಃಖಕರ ಸನ್ನಿವೇಶದಲ್ಲಿ ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬಾರದು. ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ