AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Death: ಭಾನುವಾರ ಬೆಳಗ್ಗೆ 6 ಗಂಟೆಯಿಂದ ಪುನೀತ್ ಅಂತಿಮಯಾತ್ರೆ

Puneeth Raj last Rites: ಸ್ಯಾಂಡಲ್​ವುಡ್ ನಟ ಪುನೀತ್ ರಾಜಕುಮಾರ್ ನಿನ್ನೆ (ಅಕ್ಟೋಬರ್ 29) ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಪ್ರಸ್ತುತ ಅಭಿಮಾನಿಗಳು ಅವರ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Puneeth Rajkumar Death: ಭಾನುವಾರ ಬೆಳಗ್ಗೆ 6 ಗಂಟೆಯಿಂದ ಪುನೀತ್ ಅಂತಿಮಯಾತ್ರೆ
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on:Jan 26, 2023 | 10:26 AM

Share

ಸ್ಯಾಂಡಲ್​ವುಡ್ ನಟ, ಅಭಿಮಾನಿಗಳಿಂದ ಅಪ್ಪು ಎಂದು ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜಕುಮಾರ್ ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಪುನೀತ್ ನಿಧನಕ್ಕೆ ದೇಶವೇ ಕಂಬನಿ ಮಿಡಿದಿದ್ದು, ಅಭಿಮಾನಿಗಳು ತೀವ್ರ ಶೋಕದಲ್ಲಿ ಮುಳುಗಿದ್ದಾರೆ. ಪುನೀತ್ ರಾಜಕುಮಾರ್ ಅವರಿಗೆ ಸಕಲ ಸರ್ಕಾರಿ​ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಡಾ.ರಾಜ್​​ ಹಾಗೂ ಪಾರ್ವತಮ್ಮ ಸಮಾಧಿ ಪಕ್ಕದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಪುನೀತ್ ನಿಧನಕ್ಕೆ ದೇಶದ ವಿವಿಧ ಭಾಷೆಗಳ ಚಿತ್ರರಂಗಗಳು, ಕಲಾವಿದರು ಸಂತಾಪ ಸೂಚಿಸಿದ್ದಾರೆ. ಇಂದು ಅಂತಿಮ ದರ್ಶನ ಪಡೆಯಲು ಟಾಲಿವುಡ್ ನಟರು ಆಗಮಿಸುವ ನಿರೀಕ್ಷೆ ಇದೆ. ರಾಜ್ಯದ ವಿವಿದೆಡೆಯಿಂದ ಅಭಿಮಾನಿಗಳು ಆಗಮಿಸುತ್ತಿದ್ದು, ಕಂಠೀರವ ಸ್ಟೇಡಿಯಂ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರೈಲ್ವೆ ನಿಲ್ದಾಣ, ಮೆಜೆಸ್ಟಿಕ್​ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ನಾಳೆ ನಟ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ಮಾಡುವುದಕ್ಕೆ ನಿರ್ಧಾರ ಮಾಡಿದ್ದೇವೆ. ಈ ಬಗ್ಗೆ ರಾಜ್‌ಕುಮಾರ್ ಕುಟುಂಬಸ್ಥರ ಜತೆ ಚರ್ಚಿಸಿದ್ದೇವೆ. ಇಂದು ಇಡೀ ದಿನ ದರ್ಶನ ಪಡೆಯುವುದಕ್ಕೆ ಅವಕಾಶವಿದೆ. ಅಭಿಮಾನಿಗಳು ಶಾಂತಿಯುತವಾಗಿ ಬಂದು ದರ್ಶನ ಪಡೆಯಿರಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. 

Published On - 7:45 am, Sat, 30 October 21

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?