AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್​ ರಾಜ್​ಕುಮಾರ್​ ಪುಣ್ಯ ಸ್ಮರಣೆ; ಅಪ್ಪು ಸಮಾಧಿಗೆ ಅಣ್ಣಾವ್ರ ಕುಟುಂಬದಿಂದ ಪೂಜೆ

Puneeth Rajkumar Death Anniversary: ಗಾಜನೂರಿನಿಂದಲೂ ಅನೇಕ ಬಂಧುಗಳು ಸದಾಶಿವನಗರದಲ್ಲಿನ ಪುನೀತ್​ ಅವರ ಮನೆಗೆ ಆಗಮಿಸಿದ್ದಾರೆ. ಮನೆ ಮುಂದಿನ ಗಣೇಶನಿಗೆ ಅಭಿಷೇಕ ಮಾಡಿ ಪೂಜೆ ಸಲ್ಲಿಸಲಾಗಿದೆ.

Puneeth Rajkumar: ಪುನೀತ್​ ರಾಜ್​ಕುಮಾರ್​ ಪುಣ್ಯ ಸ್ಮರಣೆ; ಅಪ್ಪು ಸಮಾಧಿಗೆ ಅಣ್ಣಾವ್ರ ಕುಟುಂಬದಿಂದ ಪೂಜೆ
ಪುನೀತ್​ ರಾಜ್​ಕುಮಾರ್ ಸಮಾಧಿ
TV9 Web
| Edited By: |

Updated on:Oct 29, 2022 | 9:03 AM

Share

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ (Puneeth Rajkumar) ನಿಧನರಾಗಿ ಒಂದು ವರ್ಷ ಕಳೆದಿದೆ. ಇಂದು (ಅ.29) ಮೊದಲ ವರ್ಷದ ಪುಣ್ಯ ಸ್ಮರಣೆ (Puneeth Rajkumar Death Anniversary) ಪ್ರಯುಕ್ತ ಅಪ್ಪು ಸಮಾಧಿಗೆ ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರು ಪೂಜೆ ಸಲ್ಲಿಸುತ್ತಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಅಪಾರ ಸಂಖ್ಯೆಯಲ್ಲಿ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ಕೂಡ ಸಮಾಧಿಗೆ (Puneeth Rajkumar Samadhi) ಭೇಟಿ ನೀಡಿ, ನಮನ ಸಲ್ಲಿಸುತ್ತಿದ್ದಾರೆ. ಬೆಳಗ್ಗೆ 9 ಗಂಟೆಗೆ ಕುಟುಂಬದವರು ಸಮಾಧಿಗೆ ಪೂಜೆ ಮಾಡಲಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​, ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಇದರಲ್ಲಿ ಭಾಗಿ ಆಗಲಿದ್ದಾರೆ. ಅಲ್ಲದೇ, ಅಪ್ಪು ಆಪ್ತರು ಮತ್ತು ಸ್ನೇಹಿತರು ಕೂಡ ಜೊತೆಗೆ ಇರಲಿದ್ದಾರೆ.

ಸಮಾಧಿ ಬಳಿ ಪೂಜೆ ಮುಗಿದ ನಂತರ ಪುನೀತ್​ ರಾಜ್​ಕುಮಾರ್​ ನಿವಾಸದಲ್ಲಿ ವರ್ಷದ ಕಳಸ ಪೂಜೆ ನಡೆಯಲಿದೆ. ಅಪ್ಪುಗೆ ಇಷ್ಟವಾದ ತಿನಿಸುಗಳನ್ನು ಇಟ್ಟು ಪೂಜೆ ನೆರವೇರಿಸಲಾಗುತ್ತದೆ. ಪೂಜೆ ಸಲುವಾಗಿ ಶಿವಣ್ಣ ಮತ್ತು ಗೀತಕ್ಕ ಅವರು ಮುಂಜಾನೆಯೇ ಅಪ್ಪು ನಿವಾಸಕ್ಕೆ ಬಂದು ಹೋಗಿದ್ದಾರೆ. ಡಾ. ರಾಜ್​ಕುಮಾರ್​ ಹುಟ್ಟೂರಾದ ಗಾಜನೂರಿನಿಂದಲೂ ಅನೇಕ ಬಂಧುಗಳು ಸದಾಶಿವನಗರದಲ್ಲಿರುವ ಪುನೀತ್​ ಮನೆಗೆ ಆಗಮಿಸಿದ್ದಾರೆ. ಮನೆ ಮುಂದಿನ ಗಣೇಶನಿಗೆ ಅಭಿಷೇಕ ಮಾಡಿ ಪೂಜೆ ಸಲ್ಲಿಸಲಾಗಿದೆ.

ಅಪ್ಪುಗಾಗಿ ಹಿರಿಯ ಜೀವದ ಮಂಡಕ್ಕಿ ಹಾರ:

ಇದನ್ನೂ ಓದಿ
Image
Gandhada Gudi: ಗಳಗಳನೆ ಕಣ್ಣೀರು ಹಾಕಿದ ಅನುಶ್ರೀ; ‘ಗಂಧದ ಗುಡಿ’ಯಲ್ಲಿ ಅಪ್ಪು​ ನೋಡಿದ ಬಳಿಕ ನಿರೂಪಕಿ ಭಾವುಕ ಮಾತು
Image
Gandhada Gudi: ‘ಗಂಧದ ಗುಡಿ’ ಗೆಲುವಿಗೆ ಪ್ರಾರ್ಥನೆ; ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಅಮೋಘವರ್ಷ ಪೂಜೆ
Image
Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​
Image
Gandhada Gudi: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ

ಅಪ್ಪು ಪುಣ್ಯ ಸ್ಮರಣೆ ಅಂಗವಾಗಿ ಅಭಿಮಾನಿಗಳು ಬೇರೆ ಬೇರೆ ಊರುಗಳಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ಸಮಾಧಿಗೆ ನಮಿಸುತ್ತಿದ್ದಾರೆ. ಸುಮಿತ್ರಾ ಬಾಯಿ ಎಂಬ ವೃದ್ಧೆಯೊಬ್ಬರು ಅಪ್ಪುಗಾಗಿ ಮಂಡಕ್ಕಿ ಹಾರ ತಂದಿದ್ದಾರೆ. ಪುನೀತ್ ನಿಧನರಾದಾಗ ಹಾಗೂ ತಿಥಿ ಸಮಯದಲ್ಲಿ ಕೂಡ ಮಂಡಕ್ಕಿ ಹಾರ ತಂದಿದ್ದರು. ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಈ ಹಾರ ನೀಡಬೇಕು ಎಂದು ಸುಮಿತ್ರಾ ಬಾಯಿ ಕಾಯುತ್ತಿದ್ದಾರೆ.

ಕಂಠೀರವ ಸ್ಟುಡಿಯೋ ಬಳಿ ರಾರಾಜಿಸಿದ ಕಟೌಟ್​:

ಪುನೀತ್​ ರಾಜ್​ಕುಮಾರ್​ ಸಮಾಧಿ ಇರುವ ಕಂಠೀರವ ಸ್ಟುಡಿಯೋ ಹೊರಗೆ ಅಪ್ಪು ಅವರ ವಿಶೇಷವಾದ ಕಟೌಟ್‌ಗಳನ್ನ ಹಾಕಲಾಗಿದೆ. ಪುನೀತ್ ಅಭಿನಯದ ಸಿನಿಮಾಗಳ ಕಟೌಟ್ ಜೊತೆಯಲ್ಲಿ ಡಾ. ರಾಜ್​ಕುಮಾರ್ ಹಾಗೂ ಪಾರ್ವತಮ್ಮ ಅವರ ಕಟೌಟ್​ಗಳನ್ನೂ ಹಾಕುವ ಮೂಲಕ ಅಭಿಮಾನ ಮೆರೆಯಲಾಗಿದೆ.

ನೆಲಕ್ಕುರುಳಿದ ವಿದ್ಯುತ್ ಕಂಬ:

ನಟ ಪುನೀತ್​ ನಿವಾಸದ ಬಳಿ ಇರುವ ವಿದ್ಯುತ್ ಕಂಬ ನೆಲಕ್ಕೆ ಉರುಳಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಪುನೀತ್ ಮನೆ ಎದುರು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬ್ಯಾರಿಕೇಡ್​ ಹಾಕಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:03 am, Sat, 29 October 22

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!