AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್ ರಾಜ್​ಕುಮಾರ್ ಇಲ್ಲದೆ ಕಳೆಯಿತು ಎರಡು ವರ್ಷ; ಇನ್ನೂ ಕಡಿಮೆ ಆಗಿಲ್ಲ ದುಃಖ

Puneeth Rajkumar Death Anniversary: ಅಕ್ಟೋಬರ್ 28ನೇ ತಾರಿಕು ಗುರುಕಿರಣ್ ಅವರ ಜನ್ಮದಿನ. ಈ ಪಾರ್ಟಿಗೆ ಪುನೀತ್ ಕೂಡ ಹಾಜರಿ ಹಾಕಿದ್ದರು. ನಂತರ ಅವರು ಮರಳಿ ಮನೆ ಸೇರಿದರು. ಮುಂಜಾನೆ ಅವರು ವರ್ಕೌಟ್ ಮಾಡಿದರು ಎಂದು ಕೆಲವರು ಹೇಳುತ್ತಾರೆ. ಇನ್ನೂ ಕೆಲವರು ಅವರು ವರ್ಕೌಟ್ ಮಾಡಿಲ್ಲ ಎನ್ನುತ್ತಾರೆ. ಆದರೆ, ಆ ಬಗ್ಗೆ ಯಾರೂ ಸ್ಪಷ್ಟ ಮಾಹಿತಿ ನೀಡಿಲ್ಲ.

Puneeth Rajkumar: ಪುನೀತ್ ರಾಜ್​ಕುಮಾರ್ ಇಲ್ಲದೆ ಕಳೆಯಿತು ಎರಡು ವರ್ಷ; ಇನ್ನೂ ಕಡಿಮೆ ಆಗಿಲ್ಲ ದುಃಖ
ಪುನೀತ್
Follow us
ರಾಜೇಶ್ ದುಗ್ಗುಮನೆ
|

Updated on: Oct 29, 2023 | 6:30 AM

ಅದು 2021ರ ಅಕ್ಟೋಬರ್ 29ನೇ ತಾರೀಕು. ಶಿವರಾಜ್​ಕುಮಾರ್ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್ ಆಗಿತ್ತು. ಎ. ಹರ್ಷ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಗ್ಗೆ ಸಖತ್ ನಿರೀಕ್ಷೆ ಇತ್ತು. ಚಿತ್ರಕ್ಕೆ ಗೆಲುವು ಸಿಗಲಿ ಎಂದು ಎಲ್ಲರೂ ಹಾರೈಸಿದರು. ಪುನೀತ್ ರಾಜ್​ಕುಮಾರ್ ಕೂಡ ಟ್ವೀಟ್ ಮಾಡುವ ಮೂಲಕ ಚಿತ್ರಕ್ಕೆ ಆಲ್​ ದಿ ಬೆಸ್ಟ್ ಹೇಳಿದರು. ಇದೇ ಅವರ ಕೊನೆಯ ಟ್ವೀಟ್ ಆಗುತ್ತದೆ ಎಂದು ಯಾರೆಂದರೆ ಯಾರೂ ಊಹಿಸಿರಲಿಲ್ಲ. ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ನಡೆದಿದ್ದು ಮಾತ್ರ ದುರಂತ. ಅವರಿಗೆ ಹೃದಯಾಘಾತ ಆಯಿತು. ಸೂರ್ಯ ನೆತ್ತಿಯ ಮೇಲೆ ಬರುವ ಮೊದಲೇ ಪುನೀತ್ ರಾಜ್​ಕುಮಾರ್ (Puneeth Rajkumar) ಇನ್ನಿಲ್ಲ ಎನ್ನುವ ಸುದ್ದಿ ಎಲ್ಲ ಕಡೆಗಳಲ್ಲೂ ಹರಿದಾಡಿತು. ಇದು ಅಪ್ಪು ಅಭಿಮಾನಿಗಳನ್ನು ಆತಂಕಕ್ಕೆ ಈಡು ಮಾಡಿತು. ಇದು ಸುಳ್ಳಾಗಲಿ ಎಂದು ಫ್ಯಾನ್ಸ್ ಕೊರಿಕೊಂಡರು. ಆದರೆ, ಈ ಸುದ್ದಿ ನಿಜವಾಯಿತು. ಪುನೀತ್ ಕೊನೆಯುಸಿರು ಎಳೆದರು. ಅವರಿಲ್ಲದೆ ಎರಡು ವರ್ಷ ಕಳೆದಿದೆ.

ಅಕ್ಟೋಬರ್ 28ನೇ ತಾರಿಕು ಗುರುಕಿರಣ್ ಅವರ ಜನ್ಮದಿನ. ಈ ಪಾರ್ಟಿಗೆ ಪುನೀತ್ ಕೂಡ ಹಾಜರಿ ಹಾಕಿದ್ದರು. ನಂತರ ಅವರು ಮರಳಿ ಮನೆ ಸೇರಿದರು. ಮುಂಜಾನೆ ಅವರು ವರ್ಕೌಟ್ ಮಾಡಿದರು ಎಂದು ಕೆಲವರು ಹೇಳುತ್ತಾರೆ. ಇನ್ನೂ ಕೆಲವರು ಅವರು ವರ್ಕೌಟ್ ಮಾಡಿಲ್ಲ ಎನ್ನುತ್ತಾರೆ. ಆದರೆ, ಆ ಬಗ್ಗೆ ಯಾರೂ ಸ್ಪಷ್ಟ ಮಾಹಿತಿ ನೀಡಿಲ್ಲ. ಬೆಳಗ್ಗೆಯೇ ಪುನೀತ್ ಅವರಿಗೆ ಹೃದಯಾಘಾತ ಸಂಭವಿಸಿತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಯಾವುದೇ ಪ್ರಯೋಜನ ಆಗಿಲ್ಲ. ಈ ಕಹಿ ಘಟನೆ ನಡೆದು ಎರಡು ವರ್ಷ ಕಳೆದಿದೆ. ಪುನೀತ್ ಅಭಿಮಾನಿಗಳಿಗೆ ಕುಟುಂಬದವರಿಗೆ ಈ ನೋವು ಎಂದಿಗೂ ಮರೆಯಾಗುವಂಥದ್ದಲ್ಲ.

ಪುನೀತ್ ರಾಜ್​ಕುಮಾರ್ ಅವರನ್ನು ಸ್ಮರಿಸಿಕೊಳ್ಳುವ ಕೆಲಸ ಆಗುತ್ತಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗಿದೆ. ಬಿಳಿ ಬಣ್ಣದ ಮಾರ್ಬಲ್ ಬಳಕೆ ಮಾಡಿ ಈ ಸ್ಮಾರಕ ಸಿದ್ಧಗೊಂಡಿದೆ. ಇದರ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಪ್ರತಿವರ್ಷ ಹುಟ್ಟುಹಬ್ಬಕ್ಕೆ ಪುನೀತ್ ರಾಜ್​ಕುಮಾರ್ ಕೊಡುತ್ತಿದ್ದ ಉಡುಗೊರೆಗಳೇನು? ನೆನಪಿಸಿಕೊಂಡ ರಾಘಣ್ಣ

ಪುನೀತ್ ರಾಜ್​ಕುಮಾರ್ ಸ್ಮಾರಕಕ್ಕೆ ಅಶ್ವಿನಿ, ರಾಘವೇಂದ್ರ ರಾಜ್​ಕುಮಾರ್ ಸೇರಿದಂತೆ ರಾಜ್​ಕುಮಾರ್ ಕುಟುಂಬದ ಎಲ್ಲರೂ ಆಗಮಿಸಿ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ಅಭಿಮಾನಿಗಳು ಕೂಡ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಹಲವು ಸಾಮಾಜಿಕ ಕೆಲಸಗಳನ್ನು ಮಾಡಲಾಗುತ್ತಿದೆ. ಪುನೀತ್ ಹೆಸರಲ್ಲಿ ರಕ್ತದಾನ ಹಾಗೂ ಅನ್ನದಾನ ಕಾರ್ಯಕ್ರಮಗಳು ನಡೆಯಲಿವೆ. ಪುನೀತ್ ನಿರ್ಮಾಣದ ‘ಗಂಧದಗುಡಿ’ ಸಾಕ್ಷ್ಯಚಿತ್ರ ಇಂದು ಸಂಜೆ 5 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ