Puneeth Rajkumar: ನವೆಂಬರ್​ 1ಕ್ಕಾಗಿ ಕಾದಿದ್ದ ಪುನೀತ್; ಮಹತ್ವದ ದಿನ ಬರೋದಕ್ಕೂ ಮುನ್ನವೇ ವಿಧಿವಶ: ಸಿಎಂ ಹೇಳಿದ್ದೇನು?

Puneeth Rajkumar Death: ‘ಪುನೀತ್ ರಾಜ್​ಕುಮಾರ್​​ ನಿಧನದಿಂದ ಕಲಾರಂಗಕ್ಕೆ ಬಹಳ ದೊಡ್ಡ ನಷ್ಟ ಆಗಿದೆ. ಚಿತ್ರರಂಗದಲ್ಲಿ ನಾಯಕತ್ವ ಗುಣ ಇರುವ ಒಬ್ಬ ನಟನನ್ನು ನಾವಿಂದು ಕಳೆದುಕೊಂಡಿದ್ದೇವೆ’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Puneeth Rajkumar: ನವೆಂಬರ್​ 1ಕ್ಕಾಗಿ ಕಾದಿದ್ದ ಪುನೀತ್; ಮಹತ್ವದ ದಿನ ಬರೋದಕ್ಕೂ ಮುನ್ನವೇ ವಿಧಿವಶ: ಸಿಎಂ ಹೇಳಿದ್ದೇನು?
ಪುನೀತ್​ ರಾಜ್​ಕುಮಾರ್​, ಬಸವರಾಜ ಬೊಮ್ಮಾಯಿ
Follow us
| Updated By: ಮದನ್​ ಕುಮಾರ್​

Updated on:Oct 29, 2021 | 4:26 PM

ಪುನೀತ್​ ರಾಜ್​ಕುಮಾರ್​ ಅವರ ನಿಧನದಿಂದ ಇಡೀ ರಾಜ್ಯವೇ ಶೋಕದಲ್ಲಿ ಮುಳುಗಿದೆ. ಹೃದಯಾಘಾತದಿಂದ ಅಪ್ಪು ಮೃತರಾಗಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಪುನೀತ್​ ರಾಜ್​ಕುಮಾರ್​ ಅವರನ್ನು ದಾಖಲು ಮಾಡಿದ್ದ ವಿಕ್ರಂ ಆಸ್ಪತ್ರೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು ಪುನೀತ್​ ಜೊತೆಗಿನ ತಮ್ಮ ಒಡನಾಟವನ್ನು ಮೆಲುಕು ಹಾಕಿದರು. ಗುರುವಾರವಷ್ಟೇ (ಅ.28) ಪುನೀತ್​ ಮತ್ತು ಬಸವರಾಜ ಬೊಮ್ಮಾಯಿ ಅವರು ದೂರವಾಣಿ ಮೂಲಕ ಮಾತನಾಡಿದ್ದರು.

‘ನನಗೆ ನಿನ್ನೆ ಫೋನ್​ ಮಾಡಿ ಪುನೀತ್​ ರಾಜ್​ಕುಮಾರ್​ ಮಾತನಾಡಿದ್ದರು. ಅವರನ್ನು ಭೇಟಿ ಮಾಡಲು ಇವತ್ತು ಸಮಯ ನಿಗದಿ ಆಗಿತ್ತು. ನವೆಂಬರ್​ 1ರಂದು ಅವರ ವೆಬ್​ಸೈಟ್​ ಉದ್ಘಾಟನೆ ಮಾಡಬೇಕು ಎಂದು ಆಹ್ವಾನ ನೀಡಲು ಬರಬೇಕಿತ್ತು. ಆದರೆ ವಿಧಿ ಅವರನ್ನು ಬೇರೆ ಕಡೆಗೆ ಕರೆದುಕೊಂಡು ಹೋಗಿದೆ. ಬಹಳ ದೊಡ್ಡ ಆಘಾತ ಆಗಿದೆ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

‘ಪುನೀತ್​ ನಿಧನದಿಂದ ಕಲಾರಂಗಕ್ಕೆ ಬಹಳ ದೊಡ್ಡ ನಷ್ಟ ಆಗಿದೆ. ಚಿತ್ರರಂಗದಲ್ಲಿ ನಾಯಕತ್ವ ಗುಣ ಇರುವ ಒಬ್ಬ ನಟನನ್ನು ನಾವಿಂದು ಕಳೆದುಕೊಂಡಿದ್ದೇವೆ. ಡಾ. ರಾಜ್​ಕುಮಾರ್​ ಅವರ ಸಂಸ್ಕಾರದಲ್ಲಿ ಪುನೀತ್​ ಬೆಳೆದಿದ್ದರು. ಅವರ ನಡೆ, ನುಡಿ ಎಲ್ಲವೂ ರಾಜ್​ಕುಮಾರ್​ ರೀತಿಯೇ ಅತ್ಯಂತ ವಿನಯಪೂರ್ವಕವಾಗಿತ್ತು. ಎಲ್ಲರಿಗೂ ಅವರ ವ್ಯಕ್ತಿತ್ವ ಮಾದರಿ ಆಗಿತ್ತು. ನಾನು ಎರಡು ತಿಂಗಳ ಹಿಂದೆ ಅವರು ಕರೆದು ಒಂದು ಸಭೆಗೆ ಹೋಗಿ ಎಜುಕೇಷನ್​ ಆ್ಯಪ್​ ಉದ್ಘಾಟನೆ ಮಾಡಿದ್ದೆ. ಅದಾದ ಬಳಿಕವೂ ಭೇಟಿ ಆಗಿದ್ದೆ. ಅವರು ಕುಟುಂಬದ ಜೊತೆ ನನಗೆ ಬಹಳ ವರ್ಷದಿಂದಲೂ ಒಡನಾಟ ಇದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಸ್ತುತ ಹಲವು ಸಿನಿಮಾ ಕೆಲಸಗಳಲ್ಲಿ ಅಪ್ಪು ತೊಡಗಿಕೊಂಡಿದ್ದರು. ಪವನ್​ ಕುಮಾರ್​ ನಿರ್ದೇಶನದ ‘ದ್ವಿತ್ವ’, ಚೇತನ್​ಕುಮಾರ್​ ನಿರ್ದೇಶನದ ‘ಜೇಮ್ಸ್​’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿದ್ದವು. ಆದರೆ ಎಲ್ಲವನ್ನೂ ಬಿಟ್ಟು ಪುನೀತ್ ಇಹಲೋಕ ತ್ಯಜಿಸಿದ್ದಾರೆ. ಶಿವರಾಜ್​ಕುಮಾರ್​ಗೆ ನಿರ್ದೇಶನ ಮಾಡಬೇಕು ಎಂದು ಕೂಡ ಪುನೀತ್​ ಆಸೆ ಇಟ್ಟುಕೊಂಡಿದ್ದರು. ಆದರೆ ಅದು ಕೂಡ ನೆರವೇರಲೇ ಇಲ್ಲ.

ಇದನ್ನೂ ಓದಿ:

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

Puneeth Rajkumar Obituary: ಹೃದಯ ಬಡಿತ ನಿಲ್ಲಿಸುವುದಕ್ಕೂ ಮುನ್ನ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಪುನೀತ್

Published On - 4:23 pm, Fri, 29 October 21

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?