AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ ಸಾವಿನಲ್ಲೂ ಲಾಭ ಪಡೆದ ರಣಹದ್ದುಗಳು; ಆಕ್ರೋಶ ಹೊರ ಹಾಕಿದ ಅಭಿಮಾನಿಗಳು

ಪುನೀತ್​ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಘಟನೆ ನಂತರದಲ್ಲಿ ಯುವ ಜನತೆ ತಮ್ಮ ಹೃದಯದ ಆರೋಗ್ಯದ ಬಗ್ಗೆ ಹೆಚ್ಚು ಗಮನ ವಹಿಸಬೇಕು ಎನ್ನುವ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ.

ಪುನೀತ್​ ರಾಜ್​ಕುಮಾರ್​ ಸಾವಿನಲ್ಲೂ ಲಾಭ ಪಡೆದ ರಣಹದ್ದುಗಳು; ಆಕ್ರೋಶ ಹೊರ ಹಾಕಿದ ಅಭಿಮಾನಿಗಳು
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 02, 2021 | 9:41 PM

Share

ಪುನೀತ್​ ರಾಜ್​ಕುಮಾರ್​ ಅವರು ಮೃತಪಟ್ಟು ಇಂದಿಗೆ (ನವೆಂಬರ್​ 2) ಐದು ದಿನ ಕಳೆದಿದೆ. ಅವರು ಇಲ್ಲ ಎನ್ನುವ ನೋವನ್ನು ಯಾರಿಂದಲೂ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಆದಾಗ್ಯೂ, ಇದನ್ನು ಒಪ್ಪಿಕೊಳ್ಳಲೇಬೇಕು. ಇದು ಸೃಷ್ಟಿಯ ನಿಯಮ. ಪುನೀತ್​ ಸಾವು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ಆದರೆ, ಕೆಲ ಕಿಡಿಗೇಡಿಗಳು ಪುನೀತ್​ ಸಾವಿನಿಂದ ಲಾಭ ಪಡೆಯೋಕೆ ಮುಂದಾಗಿದ್ದಾರೆ. ಇವರ ವಿರುದ್ಧ ಅನೇಕರು ಕಿಡಿಕಾರುತ್ತಿದ್ದಾರೆ. ಈ ರೀತಿಯ ದುಷ್ಟ ಆಲೋಚನೆಗಳು ನಿಲ್ಲಬೇಕು ಎಂದು ಕೆಲವರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

​ದೇಶದಲ್ಲಿ ಮೊದಲ ಬಾರಿಗೆ ಕೊವಿಡ್ ಕಾಣಿಸಿಕೊಂಡಾಗ ಸಾಕಷ್ಟು ಆತಂಕ ಮೂಡಿತ್ತು. ಈ ವೇಳೆ ವೈದ್ಯರು ಸಾಬೂನು ಹಚ್ಚಿ ಕೈ ತೊಳೆದುಕೊಳ್ಳುವಂತೆ ಸೂಚಿಸಿದ್ದರು. ಇದರ ಲಾಭ ಪಡೆಯೋಕೆ ಮುಂದಾದ ಸಾಬೂನು ಕಂಪೆನಿಗಳು, ನಮ್ಮ ಸೋಪ್​ನಿಂದ ವೈರಸ್​ ನಾಶವಾಗುತ್ತದೆ ಎನ್ನುವ ಜಾಹೀರಾತು ನೀಡೋಕೆ ಆರಂಭಿಸಿದ್ದರು. ಈ ಮೂಲಕ ತಮ್ಮ ಬ್ರ್ಯಾಂಡ್​ಗೆ ಪ್ರಚಾರ ನೀಡಿದ್ದರು. ಖಂಡಿತವಾಗಿಯೂ ಇದು ತಪ್ಪಲ್ಲ. ಆದರೆ, ಪುನೀತ್​ ಸಾವಿನ ವಿಚಾರದಲ್ಲೂ ಇದೇ ರೀತಿ ಮಾಡಿರುವುದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಪುನೀತ್​ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಘಟನೆ ನಂತರದಲ್ಲಿ ಯುವ ಜನತೆ ತಮ್ಮ ಹೃದಯದ ಆರೋಗ್ಯದ ಬಗ್ಗೆ ಹೆಚ್ಚು ಗಮನ ವಹಿಸಬೇಕು ಎನ್ನುವ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ಮಧ್ಯೆ ಕೆಲ ಡೈಗ್ನಾಸ್ಟಿಕ್ಸ್​ ಕೇಂದ್ರಗಳು ಪುನೀತ್​ ನಿಧನ ಸುದ್ದಿಯಿಂದ ಪ್ರಚಾರ ಪಡೆಯಲು ಮುಂದಾಗಿವೆ. ಮೇಲ್ಭಾಗದಲ್ಲಿ ಪುನೀತ್​ಗೆ ಶ್ರದ್ಧಾಂಜಲಿ ಅರ್ಪಿಸಿ, ಕೆಳಭಾಗದಲ್ಲಿ ತಮ್ಮ ಡೈಗ್ನಾಸ್ಟಿಕ್ಸ್​ ಕೇಂದ್ರದಲ್ಲಿ ಇಸಿಜಿ ಸೇರಿ ಹಲವು ಸೌಲಭ್ಯಗಳು ಇವೆ. ಇದಕ್ಕೆ ಆಫರ್​ ಕೂಡ ಇದೆ ಎಂದು ಬರೆಯಲಾಗಿದೆ. ಪುನೀತ್​ ಸಾವನ್ನು ಜಾಹೀರಾತಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂಬುದಕ್ಕೆ ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

‘ಅವರು ಉಚಿತವಾಗಿ ಚೆಕಪ್​ ಮಾಡುತ್ತೀನಿ ಎಂದರೆ ಬೇಸರವಾಗುತ್ತಿರಲಿಲ್ಲ. ಪುನೀತ್​ ಸಾವಿನ ಸುದ್ದಿಯನ್ನು ಈ ರೀತಿ ಜಾಹೀರಾತಿಗೆ ಬಳಕೆ ಮಾಡಿಕೊಂಡು, ದುಡ್ಡು ಪಡೆಯುತ್ತಿದ್ದಾರಲ್ಲ ಅದು ಬೇಸರದ ಸಂಗತಿ’ ಎಂದು ಕೆಲವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ‘ಪುನೀತ್​ ರಾಜ್​ಕುಮಾರ್​​​ ಇನ್ನೂ ಇಲ್ಲೇ ಇದ್ದಾರೆ ಅನಿಸುತ್ತಿದೆ’; ಅಕ್ಕಿನೇನಿ ನಾಗಾರ್ಜುನ ಬೇಸರ

Published On - 9:36 pm, Tue, 2 November 21

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ