AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ ಸಾವಿನಲ್ಲೂ ಲಾಭ ಪಡೆದ ರಣಹದ್ದುಗಳು; ಆಕ್ರೋಶ ಹೊರ ಹಾಕಿದ ಅಭಿಮಾನಿಗಳು

ಪುನೀತ್​ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಘಟನೆ ನಂತರದಲ್ಲಿ ಯುವ ಜನತೆ ತಮ್ಮ ಹೃದಯದ ಆರೋಗ್ಯದ ಬಗ್ಗೆ ಹೆಚ್ಚು ಗಮನ ವಹಿಸಬೇಕು ಎನ್ನುವ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ.

ಪುನೀತ್​ ರಾಜ್​ಕುಮಾರ್​ ಸಾವಿನಲ್ಲೂ ಲಾಭ ಪಡೆದ ರಣಹದ್ದುಗಳು; ಆಕ್ರೋಶ ಹೊರ ಹಾಕಿದ ಅಭಿಮಾನಿಗಳು
TV9 Web
| Edited By: |

Updated on:Nov 02, 2021 | 9:41 PM

Share

ಪುನೀತ್​ ರಾಜ್​ಕುಮಾರ್​ ಅವರು ಮೃತಪಟ್ಟು ಇಂದಿಗೆ (ನವೆಂಬರ್​ 2) ಐದು ದಿನ ಕಳೆದಿದೆ. ಅವರು ಇಲ್ಲ ಎನ್ನುವ ನೋವನ್ನು ಯಾರಿಂದಲೂ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಆದಾಗ್ಯೂ, ಇದನ್ನು ಒಪ್ಪಿಕೊಳ್ಳಲೇಬೇಕು. ಇದು ಸೃಷ್ಟಿಯ ನಿಯಮ. ಪುನೀತ್​ ಸಾವು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ಆದರೆ, ಕೆಲ ಕಿಡಿಗೇಡಿಗಳು ಪುನೀತ್​ ಸಾವಿನಿಂದ ಲಾಭ ಪಡೆಯೋಕೆ ಮುಂದಾಗಿದ್ದಾರೆ. ಇವರ ವಿರುದ್ಧ ಅನೇಕರು ಕಿಡಿಕಾರುತ್ತಿದ್ದಾರೆ. ಈ ರೀತಿಯ ದುಷ್ಟ ಆಲೋಚನೆಗಳು ನಿಲ್ಲಬೇಕು ಎಂದು ಕೆಲವರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

​ದೇಶದಲ್ಲಿ ಮೊದಲ ಬಾರಿಗೆ ಕೊವಿಡ್ ಕಾಣಿಸಿಕೊಂಡಾಗ ಸಾಕಷ್ಟು ಆತಂಕ ಮೂಡಿತ್ತು. ಈ ವೇಳೆ ವೈದ್ಯರು ಸಾಬೂನು ಹಚ್ಚಿ ಕೈ ತೊಳೆದುಕೊಳ್ಳುವಂತೆ ಸೂಚಿಸಿದ್ದರು. ಇದರ ಲಾಭ ಪಡೆಯೋಕೆ ಮುಂದಾದ ಸಾಬೂನು ಕಂಪೆನಿಗಳು, ನಮ್ಮ ಸೋಪ್​ನಿಂದ ವೈರಸ್​ ನಾಶವಾಗುತ್ತದೆ ಎನ್ನುವ ಜಾಹೀರಾತು ನೀಡೋಕೆ ಆರಂಭಿಸಿದ್ದರು. ಈ ಮೂಲಕ ತಮ್ಮ ಬ್ರ್ಯಾಂಡ್​ಗೆ ಪ್ರಚಾರ ನೀಡಿದ್ದರು. ಖಂಡಿತವಾಗಿಯೂ ಇದು ತಪ್ಪಲ್ಲ. ಆದರೆ, ಪುನೀತ್​ ಸಾವಿನ ವಿಚಾರದಲ್ಲೂ ಇದೇ ರೀತಿ ಮಾಡಿರುವುದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಪುನೀತ್​ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಘಟನೆ ನಂತರದಲ್ಲಿ ಯುವ ಜನತೆ ತಮ್ಮ ಹೃದಯದ ಆರೋಗ್ಯದ ಬಗ್ಗೆ ಹೆಚ್ಚು ಗಮನ ವಹಿಸಬೇಕು ಎನ್ನುವ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ಮಧ್ಯೆ ಕೆಲ ಡೈಗ್ನಾಸ್ಟಿಕ್ಸ್​ ಕೇಂದ್ರಗಳು ಪುನೀತ್​ ನಿಧನ ಸುದ್ದಿಯಿಂದ ಪ್ರಚಾರ ಪಡೆಯಲು ಮುಂದಾಗಿವೆ. ಮೇಲ್ಭಾಗದಲ್ಲಿ ಪುನೀತ್​ಗೆ ಶ್ರದ್ಧಾಂಜಲಿ ಅರ್ಪಿಸಿ, ಕೆಳಭಾಗದಲ್ಲಿ ತಮ್ಮ ಡೈಗ್ನಾಸ್ಟಿಕ್ಸ್​ ಕೇಂದ್ರದಲ್ಲಿ ಇಸಿಜಿ ಸೇರಿ ಹಲವು ಸೌಲಭ್ಯಗಳು ಇವೆ. ಇದಕ್ಕೆ ಆಫರ್​ ಕೂಡ ಇದೆ ಎಂದು ಬರೆಯಲಾಗಿದೆ. ಪುನೀತ್​ ಸಾವನ್ನು ಜಾಹೀರಾತಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂಬುದಕ್ಕೆ ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

‘ಅವರು ಉಚಿತವಾಗಿ ಚೆಕಪ್​ ಮಾಡುತ್ತೀನಿ ಎಂದರೆ ಬೇಸರವಾಗುತ್ತಿರಲಿಲ್ಲ. ಪುನೀತ್​ ಸಾವಿನ ಸುದ್ದಿಯನ್ನು ಈ ರೀತಿ ಜಾಹೀರಾತಿಗೆ ಬಳಕೆ ಮಾಡಿಕೊಂಡು, ದುಡ್ಡು ಪಡೆಯುತ್ತಿದ್ದಾರಲ್ಲ ಅದು ಬೇಸರದ ಸಂಗತಿ’ ಎಂದು ಕೆಲವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ‘ಪುನೀತ್​ ರಾಜ್​ಕುಮಾರ್​​​ ಇನ್ನೂ ಇಲ್ಲೇ ಇದ್ದಾರೆ ಅನಿಸುತ್ತಿದೆ’; ಅಕ್ಕಿನೇನಿ ನಾಗಾರ್ಜುನ ಬೇಸರ

Published On - 9:36 pm, Tue, 2 November 21

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ