Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

Puneeth Rajkumar Death: ‘ಸಲಗ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ವೇದಿಕೆ ಮೇಲೆ ಪುನೀತ್​ ರಾಜ್​ಕುಮಾರ್​ ಅವರು ತಮ್ಮ ಮನದಾಸೆಯನ್ನು ವ್ಯಕ್ತಪಡಿಸಿದ್ದರು. ಅದನ್ನು ಕೇಳಿ ಶಿವರಾಜ್​ಕುಮಾರ್​ ಖುಷಿ ಆಗಿದ್ದರು. ಆದರೆ ಆ ಕನಸು ನನಸಾಗಲೇ ಇಲ್ಲ.

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು
ಶಿವರಾಜ್​ಕುಮಾರ್​​, ಪುನೀತ್​ ರಾಜ್​ಕುಮಾರ್
Follow us
| Updated By: ಮದನ್​ ಕುಮಾರ್​

Updated on: Oct 29, 2021 | 3:31 PM

ಹೃದಯಾಘಾತದಿಂದ ನಟ ಪುನೀತ್​ ರಾಜ್​ಕುಮಾರ್​ ಅವರು ಇಂದು (ಅ.29) ನಿಧನರಾಗಿದ್ದಾರೆ. ಈ ಕಹಿ ಘಟನೆಯನ್ನು ಯಾರೂ ಊಹಿಸಿರಲಿಲ್ಲ. ಚಿತ್ರರಂಗದಲ್ಲಿ ಇನ್ನೂ ಮಿಂಚಿ ಮೆರೆಯಬೇಕಾಗಿದ್ದ ಪುನೀತ್​ ಅವರು ಸಾವಿನ ಹಾದಿ ಹಿಡಿದಿರುವುದು ಎಲ್ಲರಿಗೂ ತೀವ್ರ ನೋವುಂಟು ಮಾಡಿದೆ. ಈ ಘಟನೆಯಿಂದ ಅಭಿಮಾನಿಗಳ ಹೃದಯ ಛಿದ್ರವಾಗಿದೆ. ಕೆಲವೇ ದಿನಗಳ ಹಿಂದೆ ಪುನೀತ್​ ರಾಜ್​ಕುಮಾರ್​ ಅವರು ತಮ್ಮದೊಂದು ದೊಡ್ಡ ಕನಸಿನ ಬಗ್ಗೆ ಹೇಳಿಕೊಂಡಿದ್ದರು. ಸಹೋದರ ಶಿವರಾಜ್​ಕುಮಾರ್​ ನಟನೆಯ ಚಿತ್ರಕ್ಕೆ ನಿರ್ದೇಶನ ಮಾಡಬೇಕು ಎಂದು ಅವರು ಕನಸು ಕಂಡಿದ್ದರು.

ಅದು ‘ಸಲಗ’ ಸಿನಿಮಾದ ಪ್ರೀರಿಲೀಸ್​ ಇವೆಂಟ್​. ಆ ವೇದಿಕೆ ಮೇಲೆ ಪುನೀತ್​ ರಾಜ್​ಕುಮಾರ್​ ಅವರು ತಮ್ಮ ಮನದಾಸೆಯನ್ನು ವ್ಯಕ್ತಪಡಿಸಿದ್ದರು. ‘ಒಂದು ಕಾಲದಲ್ಲಿ ಡೈರೆಕ್ಷನ್​ ಮಾಡಬೇಕು ಎಂಬ ಹುಚ್ಚು ನನಗೂ ಇತ್ತು. ಶಿವಣ್ಣನ ಸಿನಿಮಾವನ್ನೇ ನಿರ್ದೇಶನ ಮಾಡಬೇಕು. ಯಾಕೆಂದರೆ ಶಿವಣ್ಣ ಯಾವಾಗಲೂ ನಿರ್ದೇಶಕರ ನಟ’ ಎಂದು ಪುನೀತ್​ ಹೇಳಿದ್ದರು.

‘ಒಂದು ಒಳ್ಳೆಯ ಕಾನ್ಸೆಪ್ಟ್​ ತೆಗೆದುಕೊಂಡು ಬಂದು, ಅಭಿಮಾನಿಗಳು ಸೀಟ್​ ತುದಿಯಲ್ಲಿ ಕುಳಿತು ನೋಡುವಂತಹ ಥ್ರಿಲ್ಲರ್​ ಸಿನಿಮಾವನ್ನು ಖಂಡಿತಾ ಮಾಡುತ್ತೇನೆ. ಸಂತೋಷ್​ ಆನಂದ್​​ರಾಮ್​ ನನಗೆ ಡೈಲಾಗ್​ ಬರೆದುಕೊಡುತ್ತಾರೆ. ಚೇತನ್​ ಕುಮಾರ್​ ನನಗೆ ​ಸಪೋರ್ಟ್​ ಮಾಡೋಕೆ ಇರುತ್ತಾರೆ. ಇವರೆಲ್ಲ ಇರುವಾಗ ನಾನು ಸ್ಟೈಲ್​ ಆಗಿ ಬಂದು ಆ್ಯಕ್ಷನ್​-ಕಟ್​ ಹೇಳುತ್ತೇನೆ’ ಎಂದು ಪವರ್​ ಸ್ಟಾರ್​ ಹೇಳಿದ್ದರು.

ಪುನೀತ್​ ಅವರ ಆಸೆಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದರು. ‘ನೀವು ನಿರ್ದೇಶನ ಮಾಡಿದರೆ ನಾನು ಸಹಾಯಕ ನಿರ್ದೇಶಕ ಆಗುತ್ತೇನೆ’ ಎಂದು ಅದೇ ವೇದಿಕೆಯಲ್ಲಿ ಉಪ್ಪಿ ಘೋಷಿಸಿದ್ದರು. ಆದರೆ ಪುನೀತ್​ ರಾಜ್​ಕುಮಾರ್​ ಕಂಡ ಆ ಕನಸು ಈಡೇರಲೇ ಇಲ್ಲ. ಆ ಕಾರ್ಯಕ್ರಮದಲ್ಲಿ ಹಾಜರಾಗಿದ್ದ ಶಿವರಾಜ್​ಕುಮಾರ್​ ಅವರು ಸಹೋದರನ ಬಗ್ಗೆ ಮನಸಾರೆ ಮಾತನಾಡಿದ್ದರು. ‘ಅಪ್ಪು ನಮ್ಮೆಲ್ಲರ ಹೆಮ್ಮೆ’ ಎಂದು ಹಾಡಿಹೊಗಳಿದ್ದರು. ಅದೆಲ್ಲವೂ ಈಗ ನೆನಪು ಮಾತ್ರ.

ಪ್ರಸ್ತುತ ಹಲವು ಸಿನಿಮಾ ಕೆಲಸಗಳಲ್ಲಿ ಅಪ್ಪು ತೊಡಗಿಕೊಂಡಿದ್ದರು. ಪವನ್​ ಕುಮಾರ್​ ನಿರ್ದೇಶನದ ‘ದ್ವಿತ್ವ’, ಚೇತನ್​ಕುಮಾರ್​ ನಿರ್ದೇಶನದ ‘ಜೇಮ್ಸ್​’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿದ್ದವು. ಆದರೆ ಎಲ್ಲವನ್ನೂ ಬಿಟ್ಟು ಪುನೀತ್ ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ನಿಧನ: ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್​ ಮಾಡಿ

Puneeth Rajkumar Obituary: ಹೃದಯ ಬಡಿತ ನಿಲ್ಲಿಸುವುದಕ್ಕೂ ಮುನ್ನ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಪುನೀತ್

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!