AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

Puneeth Rajkumar Death: ‘ಸಲಗ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ವೇದಿಕೆ ಮೇಲೆ ಪುನೀತ್​ ರಾಜ್​ಕುಮಾರ್​ ಅವರು ತಮ್ಮ ಮನದಾಸೆಯನ್ನು ವ್ಯಕ್ತಪಡಿಸಿದ್ದರು. ಅದನ್ನು ಕೇಳಿ ಶಿವರಾಜ್​ಕುಮಾರ್​ ಖುಷಿ ಆಗಿದ್ದರು. ಆದರೆ ಆ ಕನಸು ನನಸಾಗಲೇ ಇಲ್ಲ.

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು
ಶಿವರಾಜ್​ಕುಮಾರ್​​, ಪುನೀತ್​ ರಾಜ್​ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: Oct 29, 2021 | 3:31 PM

ಹೃದಯಾಘಾತದಿಂದ ನಟ ಪುನೀತ್​ ರಾಜ್​ಕುಮಾರ್​ ಅವರು ಇಂದು (ಅ.29) ನಿಧನರಾಗಿದ್ದಾರೆ. ಈ ಕಹಿ ಘಟನೆಯನ್ನು ಯಾರೂ ಊಹಿಸಿರಲಿಲ್ಲ. ಚಿತ್ರರಂಗದಲ್ಲಿ ಇನ್ನೂ ಮಿಂಚಿ ಮೆರೆಯಬೇಕಾಗಿದ್ದ ಪುನೀತ್​ ಅವರು ಸಾವಿನ ಹಾದಿ ಹಿಡಿದಿರುವುದು ಎಲ್ಲರಿಗೂ ತೀವ್ರ ನೋವುಂಟು ಮಾಡಿದೆ. ಈ ಘಟನೆಯಿಂದ ಅಭಿಮಾನಿಗಳ ಹೃದಯ ಛಿದ್ರವಾಗಿದೆ. ಕೆಲವೇ ದಿನಗಳ ಹಿಂದೆ ಪುನೀತ್​ ರಾಜ್​ಕುಮಾರ್​ ಅವರು ತಮ್ಮದೊಂದು ದೊಡ್ಡ ಕನಸಿನ ಬಗ್ಗೆ ಹೇಳಿಕೊಂಡಿದ್ದರು. ಸಹೋದರ ಶಿವರಾಜ್​ಕುಮಾರ್​ ನಟನೆಯ ಚಿತ್ರಕ್ಕೆ ನಿರ್ದೇಶನ ಮಾಡಬೇಕು ಎಂದು ಅವರು ಕನಸು ಕಂಡಿದ್ದರು.

ಅದು ‘ಸಲಗ’ ಸಿನಿಮಾದ ಪ್ರೀರಿಲೀಸ್​ ಇವೆಂಟ್​. ಆ ವೇದಿಕೆ ಮೇಲೆ ಪುನೀತ್​ ರಾಜ್​ಕುಮಾರ್​ ಅವರು ತಮ್ಮ ಮನದಾಸೆಯನ್ನು ವ್ಯಕ್ತಪಡಿಸಿದ್ದರು. ‘ಒಂದು ಕಾಲದಲ್ಲಿ ಡೈರೆಕ್ಷನ್​ ಮಾಡಬೇಕು ಎಂಬ ಹುಚ್ಚು ನನಗೂ ಇತ್ತು. ಶಿವಣ್ಣನ ಸಿನಿಮಾವನ್ನೇ ನಿರ್ದೇಶನ ಮಾಡಬೇಕು. ಯಾಕೆಂದರೆ ಶಿವಣ್ಣ ಯಾವಾಗಲೂ ನಿರ್ದೇಶಕರ ನಟ’ ಎಂದು ಪುನೀತ್​ ಹೇಳಿದ್ದರು.

‘ಒಂದು ಒಳ್ಳೆಯ ಕಾನ್ಸೆಪ್ಟ್​ ತೆಗೆದುಕೊಂಡು ಬಂದು, ಅಭಿಮಾನಿಗಳು ಸೀಟ್​ ತುದಿಯಲ್ಲಿ ಕುಳಿತು ನೋಡುವಂತಹ ಥ್ರಿಲ್ಲರ್​ ಸಿನಿಮಾವನ್ನು ಖಂಡಿತಾ ಮಾಡುತ್ತೇನೆ. ಸಂತೋಷ್​ ಆನಂದ್​​ರಾಮ್​ ನನಗೆ ಡೈಲಾಗ್​ ಬರೆದುಕೊಡುತ್ತಾರೆ. ಚೇತನ್​ ಕುಮಾರ್​ ನನಗೆ ​ಸಪೋರ್ಟ್​ ಮಾಡೋಕೆ ಇರುತ್ತಾರೆ. ಇವರೆಲ್ಲ ಇರುವಾಗ ನಾನು ಸ್ಟೈಲ್​ ಆಗಿ ಬಂದು ಆ್ಯಕ್ಷನ್​-ಕಟ್​ ಹೇಳುತ್ತೇನೆ’ ಎಂದು ಪವರ್​ ಸ್ಟಾರ್​ ಹೇಳಿದ್ದರು.

ಪುನೀತ್​ ಅವರ ಆಸೆಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದರು. ‘ನೀವು ನಿರ್ದೇಶನ ಮಾಡಿದರೆ ನಾನು ಸಹಾಯಕ ನಿರ್ದೇಶಕ ಆಗುತ್ತೇನೆ’ ಎಂದು ಅದೇ ವೇದಿಕೆಯಲ್ಲಿ ಉಪ್ಪಿ ಘೋಷಿಸಿದ್ದರು. ಆದರೆ ಪುನೀತ್​ ರಾಜ್​ಕುಮಾರ್​ ಕಂಡ ಆ ಕನಸು ಈಡೇರಲೇ ಇಲ್ಲ. ಆ ಕಾರ್ಯಕ್ರಮದಲ್ಲಿ ಹಾಜರಾಗಿದ್ದ ಶಿವರಾಜ್​ಕುಮಾರ್​ ಅವರು ಸಹೋದರನ ಬಗ್ಗೆ ಮನಸಾರೆ ಮಾತನಾಡಿದ್ದರು. ‘ಅಪ್ಪು ನಮ್ಮೆಲ್ಲರ ಹೆಮ್ಮೆ’ ಎಂದು ಹಾಡಿಹೊಗಳಿದ್ದರು. ಅದೆಲ್ಲವೂ ಈಗ ನೆನಪು ಮಾತ್ರ.

ಪ್ರಸ್ತುತ ಹಲವು ಸಿನಿಮಾ ಕೆಲಸಗಳಲ್ಲಿ ಅಪ್ಪು ತೊಡಗಿಕೊಂಡಿದ್ದರು. ಪವನ್​ ಕುಮಾರ್​ ನಿರ್ದೇಶನದ ‘ದ್ವಿತ್ವ’, ಚೇತನ್​ಕುಮಾರ್​ ನಿರ್ದೇಶನದ ‘ಜೇಮ್ಸ್​’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿದ್ದವು. ಆದರೆ ಎಲ್ಲವನ್ನೂ ಬಿಟ್ಟು ಪುನೀತ್ ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ನಿಧನ: ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್​ ಮಾಡಿ

Puneeth Rajkumar Obituary: ಹೃದಯ ಬಡಿತ ನಿಲ್ಲಿಸುವುದಕ್ಕೂ ಮುನ್ನ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಪುನೀತ್

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?