AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

Puneeth Rajkumar Death: ‘ಸಲಗ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ವೇದಿಕೆ ಮೇಲೆ ಪುನೀತ್​ ರಾಜ್​ಕುಮಾರ್​ ಅವರು ತಮ್ಮ ಮನದಾಸೆಯನ್ನು ವ್ಯಕ್ತಪಡಿಸಿದ್ದರು. ಅದನ್ನು ಕೇಳಿ ಶಿವರಾಜ್​ಕುಮಾರ್​ ಖುಷಿ ಆಗಿದ್ದರು. ಆದರೆ ಆ ಕನಸು ನನಸಾಗಲೇ ಇಲ್ಲ.

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು
ಶಿವರಾಜ್​ಕುಮಾರ್​​, ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on: Oct 29, 2021 | 3:31 PM

Share

ಹೃದಯಾಘಾತದಿಂದ ನಟ ಪುನೀತ್​ ರಾಜ್​ಕುಮಾರ್​ ಅವರು ಇಂದು (ಅ.29) ನಿಧನರಾಗಿದ್ದಾರೆ. ಈ ಕಹಿ ಘಟನೆಯನ್ನು ಯಾರೂ ಊಹಿಸಿರಲಿಲ್ಲ. ಚಿತ್ರರಂಗದಲ್ಲಿ ಇನ್ನೂ ಮಿಂಚಿ ಮೆರೆಯಬೇಕಾಗಿದ್ದ ಪುನೀತ್​ ಅವರು ಸಾವಿನ ಹಾದಿ ಹಿಡಿದಿರುವುದು ಎಲ್ಲರಿಗೂ ತೀವ್ರ ನೋವುಂಟು ಮಾಡಿದೆ. ಈ ಘಟನೆಯಿಂದ ಅಭಿಮಾನಿಗಳ ಹೃದಯ ಛಿದ್ರವಾಗಿದೆ. ಕೆಲವೇ ದಿನಗಳ ಹಿಂದೆ ಪುನೀತ್​ ರಾಜ್​ಕುಮಾರ್​ ಅವರು ತಮ್ಮದೊಂದು ದೊಡ್ಡ ಕನಸಿನ ಬಗ್ಗೆ ಹೇಳಿಕೊಂಡಿದ್ದರು. ಸಹೋದರ ಶಿವರಾಜ್​ಕುಮಾರ್​ ನಟನೆಯ ಚಿತ್ರಕ್ಕೆ ನಿರ್ದೇಶನ ಮಾಡಬೇಕು ಎಂದು ಅವರು ಕನಸು ಕಂಡಿದ್ದರು.

ಅದು ‘ಸಲಗ’ ಸಿನಿಮಾದ ಪ್ರೀರಿಲೀಸ್​ ಇವೆಂಟ್​. ಆ ವೇದಿಕೆ ಮೇಲೆ ಪುನೀತ್​ ರಾಜ್​ಕುಮಾರ್​ ಅವರು ತಮ್ಮ ಮನದಾಸೆಯನ್ನು ವ್ಯಕ್ತಪಡಿಸಿದ್ದರು. ‘ಒಂದು ಕಾಲದಲ್ಲಿ ಡೈರೆಕ್ಷನ್​ ಮಾಡಬೇಕು ಎಂಬ ಹುಚ್ಚು ನನಗೂ ಇತ್ತು. ಶಿವಣ್ಣನ ಸಿನಿಮಾವನ್ನೇ ನಿರ್ದೇಶನ ಮಾಡಬೇಕು. ಯಾಕೆಂದರೆ ಶಿವಣ್ಣ ಯಾವಾಗಲೂ ನಿರ್ದೇಶಕರ ನಟ’ ಎಂದು ಪುನೀತ್​ ಹೇಳಿದ್ದರು.

‘ಒಂದು ಒಳ್ಳೆಯ ಕಾನ್ಸೆಪ್ಟ್​ ತೆಗೆದುಕೊಂಡು ಬಂದು, ಅಭಿಮಾನಿಗಳು ಸೀಟ್​ ತುದಿಯಲ್ಲಿ ಕುಳಿತು ನೋಡುವಂತಹ ಥ್ರಿಲ್ಲರ್​ ಸಿನಿಮಾವನ್ನು ಖಂಡಿತಾ ಮಾಡುತ್ತೇನೆ. ಸಂತೋಷ್​ ಆನಂದ್​​ರಾಮ್​ ನನಗೆ ಡೈಲಾಗ್​ ಬರೆದುಕೊಡುತ್ತಾರೆ. ಚೇತನ್​ ಕುಮಾರ್​ ನನಗೆ ​ಸಪೋರ್ಟ್​ ಮಾಡೋಕೆ ಇರುತ್ತಾರೆ. ಇವರೆಲ್ಲ ಇರುವಾಗ ನಾನು ಸ್ಟೈಲ್​ ಆಗಿ ಬಂದು ಆ್ಯಕ್ಷನ್​-ಕಟ್​ ಹೇಳುತ್ತೇನೆ’ ಎಂದು ಪವರ್​ ಸ್ಟಾರ್​ ಹೇಳಿದ್ದರು.

ಪುನೀತ್​ ಅವರ ಆಸೆಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದರು. ‘ನೀವು ನಿರ್ದೇಶನ ಮಾಡಿದರೆ ನಾನು ಸಹಾಯಕ ನಿರ್ದೇಶಕ ಆಗುತ್ತೇನೆ’ ಎಂದು ಅದೇ ವೇದಿಕೆಯಲ್ಲಿ ಉಪ್ಪಿ ಘೋಷಿಸಿದ್ದರು. ಆದರೆ ಪುನೀತ್​ ರಾಜ್​ಕುಮಾರ್​ ಕಂಡ ಆ ಕನಸು ಈಡೇರಲೇ ಇಲ್ಲ. ಆ ಕಾರ್ಯಕ್ರಮದಲ್ಲಿ ಹಾಜರಾಗಿದ್ದ ಶಿವರಾಜ್​ಕುಮಾರ್​ ಅವರು ಸಹೋದರನ ಬಗ್ಗೆ ಮನಸಾರೆ ಮಾತನಾಡಿದ್ದರು. ‘ಅಪ್ಪು ನಮ್ಮೆಲ್ಲರ ಹೆಮ್ಮೆ’ ಎಂದು ಹಾಡಿಹೊಗಳಿದ್ದರು. ಅದೆಲ್ಲವೂ ಈಗ ನೆನಪು ಮಾತ್ರ.

ಪ್ರಸ್ತುತ ಹಲವು ಸಿನಿಮಾ ಕೆಲಸಗಳಲ್ಲಿ ಅಪ್ಪು ತೊಡಗಿಕೊಂಡಿದ್ದರು. ಪವನ್​ ಕುಮಾರ್​ ನಿರ್ದೇಶನದ ‘ದ್ವಿತ್ವ’, ಚೇತನ್​ಕುಮಾರ್​ ನಿರ್ದೇಶನದ ‘ಜೇಮ್ಸ್​’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿದ್ದವು. ಆದರೆ ಎಲ್ಲವನ್ನೂ ಬಿಟ್ಟು ಪುನೀತ್ ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ನಿಧನ: ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್​ ಮಾಡಿ

Puneeth Rajkumar Obituary: ಹೃದಯ ಬಡಿತ ನಿಲ್ಲಿಸುವುದಕ್ಕೂ ಮುನ್ನ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಪುನೀತ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ