AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

Puneeth Rajkumar Death: ‘ಸಲಗ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ವೇದಿಕೆ ಮೇಲೆ ಪುನೀತ್​ ರಾಜ್​ಕುಮಾರ್​ ಅವರು ತಮ್ಮ ಮನದಾಸೆಯನ್ನು ವ್ಯಕ್ತಪಡಿಸಿದ್ದರು. ಅದನ್ನು ಕೇಳಿ ಶಿವರಾಜ್​ಕುಮಾರ್​ ಖುಷಿ ಆಗಿದ್ದರು. ಆದರೆ ಆ ಕನಸು ನನಸಾಗಲೇ ಇಲ್ಲ.

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು
ಶಿವರಾಜ್​ಕುಮಾರ್​​, ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on: Oct 29, 2021 | 3:31 PM

Share

ಹೃದಯಾಘಾತದಿಂದ ನಟ ಪುನೀತ್​ ರಾಜ್​ಕುಮಾರ್​ ಅವರು ಇಂದು (ಅ.29) ನಿಧನರಾಗಿದ್ದಾರೆ. ಈ ಕಹಿ ಘಟನೆಯನ್ನು ಯಾರೂ ಊಹಿಸಿರಲಿಲ್ಲ. ಚಿತ್ರರಂಗದಲ್ಲಿ ಇನ್ನೂ ಮಿಂಚಿ ಮೆರೆಯಬೇಕಾಗಿದ್ದ ಪುನೀತ್​ ಅವರು ಸಾವಿನ ಹಾದಿ ಹಿಡಿದಿರುವುದು ಎಲ್ಲರಿಗೂ ತೀವ್ರ ನೋವುಂಟು ಮಾಡಿದೆ. ಈ ಘಟನೆಯಿಂದ ಅಭಿಮಾನಿಗಳ ಹೃದಯ ಛಿದ್ರವಾಗಿದೆ. ಕೆಲವೇ ದಿನಗಳ ಹಿಂದೆ ಪುನೀತ್​ ರಾಜ್​ಕುಮಾರ್​ ಅವರು ತಮ್ಮದೊಂದು ದೊಡ್ಡ ಕನಸಿನ ಬಗ್ಗೆ ಹೇಳಿಕೊಂಡಿದ್ದರು. ಸಹೋದರ ಶಿವರಾಜ್​ಕುಮಾರ್​ ನಟನೆಯ ಚಿತ್ರಕ್ಕೆ ನಿರ್ದೇಶನ ಮಾಡಬೇಕು ಎಂದು ಅವರು ಕನಸು ಕಂಡಿದ್ದರು.

ಅದು ‘ಸಲಗ’ ಸಿನಿಮಾದ ಪ್ರೀರಿಲೀಸ್​ ಇವೆಂಟ್​. ಆ ವೇದಿಕೆ ಮೇಲೆ ಪುನೀತ್​ ರಾಜ್​ಕುಮಾರ್​ ಅವರು ತಮ್ಮ ಮನದಾಸೆಯನ್ನು ವ್ಯಕ್ತಪಡಿಸಿದ್ದರು. ‘ಒಂದು ಕಾಲದಲ್ಲಿ ಡೈರೆಕ್ಷನ್​ ಮಾಡಬೇಕು ಎಂಬ ಹುಚ್ಚು ನನಗೂ ಇತ್ತು. ಶಿವಣ್ಣನ ಸಿನಿಮಾವನ್ನೇ ನಿರ್ದೇಶನ ಮಾಡಬೇಕು. ಯಾಕೆಂದರೆ ಶಿವಣ್ಣ ಯಾವಾಗಲೂ ನಿರ್ದೇಶಕರ ನಟ’ ಎಂದು ಪುನೀತ್​ ಹೇಳಿದ್ದರು.

‘ಒಂದು ಒಳ್ಳೆಯ ಕಾನ್ಸೆಪ್ಟ್​ ತೆಗೆದುಕೊಂಡು ಬಂದು, ಅಭಿಮಾನಿಗಳು ಸೀಟ್​ ತುದಿಯಲ್ಲಿ ಕುಳಿತು ನೋಡುವಂತಹ ಥ್ರಿಲ್ಲರ್​ ಸಿನಿಮಾವನ್ನು ಖಂಡಿತಾ ಮಾಡುತ್ತೇನೆ. ಸಂತೋಷ್​ ಆನಂದ್​​ರಾಮ್​ ನನಗೆ ಡೈಲಾಗ್​ ಬರೆದುಕೊಡುತ್ತಾರೆ. ಚೇತನ್​ ಕುಮಾರ್​ ನನಗೆ ​ಸಪೋರ್ಟ್​ ಮಾಡೋಕೆ ಇರುತ್ತಾರೆ. ಇವರೆಲ್ಲ ಇರುವಾಗ ನಾನು ಸ್ಟೈಲ್​ ಆಗಿ ಬಂದು ಆ್ಯಕ್ಷನ್​-ಕಟ್​ ಹೇಳುತ್ತೇನೆ’ ಎಂದು ಪವರ್​ ಸ್ಟಾರ್​ ಹೇಳಿದ್ದರು.

ಪುನೀತ್​ ಅವರ ಆಸೆಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದರು. ‘ನೀವು ನಿರ್ದೇಶನ ಮಾಡಿದರೆ ನಾನು ಸಹಾಯಕ ನಿರ್ದೇಶಕ ಆಗುತ್ತೇನೆ’ ಎಂದು ಅದೇ ವೇದಿಕೆಯಲ್ಲಿ ಉಪ್ಪಿ ಘೋಷಿಸಿದ್ದರು. ಆದರೆ ಪುನೀತ್​ ರಾಜ್​ಕುಮಾರ್​ ಕಂಡ ಆ ಕನಸು ಈಡೇರಲೇ ಇಲ್ಲ. ಆ ಕಾರ್ಯಕ್ರಮದಲ್ಲಿ ಹಾಜರಾಗಿದ್ದ ಶಿವರಾಜ್​ಕುಮಾರ್​ ಅವರು ಸಹೋದರನ ಬಗ್ಗೆ ಮನಸಾರೆ ಮಾತನಾಡಿದ್ದರು. ‘ಅಪ್ಪು ನಮ್ಮೆಲ್ಲರ ಹೆಮ್ಮೆ’ ಎಂದು ಹಾಡಿಹೊಗಳಿದ್ದರು. ಅದೆಲ್ಲವೂ ಈಗ ನೆನಪು ಮಾತ್ರ.

ಪ್ರಸ್ತುತ ಹಲವು ಸಿನಿಮಾ ಕೆಲಸಗಳಲ್ಲಿ ಅಪ್ಪು ತೊಡಗಿಕೊಂಡಿದ್ದರು. ಪವನ್​ ಕುಮಾರ್​ ನಿರ್ದೇಶನದ ‘ದ್ವಿತ್ವ’, ಚೇತನ್​ಕುಮಾರ್​ ನಿರ್ದೇಶನದ ‘ಜೇಮ್ಸ್​’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿದ್ದವು. ಆದರೆ ಎಲ್ಲವನ್ನೂ ಬಿಟ್ಟು ಪುನೀತ್ ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ನಿಧನ: ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್​ ಮಾಡಿ

Puneeth Rajkumar Obituary: ಹೃದಯ ಬಡಿತ ನಿಲ್ಲಿಸುವುದಕ್ಕೂ ಮುನ್ನ ಕೋಟ್ಯಂತರ ಜನರ ಹೃದಯ ಗೆದ್ದಿದ್ದ ಪುನೀತ್

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್‌ನ ಅಪರಾಧ ಚಟುವಟಿಕೆಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್‌ನ ಅಪರಾಧ ಚಟುವಟಿಕೆಗಳು