AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುನೀತ್ ಇಲ್ಲದಿದ್ದಾಗ ದೂರು ಏಕೆ? ದಯವಿಟ್ಟು ಬೇಡ’: ಶಿವರಾಜ್​ಕುಮಾರ್​ ಮನವಿ

Puneeth Rajkumar: ಪುನೀತ್​ ರಾಜ್​ಕುಮಾರ್​ ಇಲ್ಲ ಎನ್ನುವ ನೋವು ನುಂಗಿಕೊಂಡು ಜೀವನ ನಡೆಸಬೇಕು ಎಂಬ ಮಾತನ್ನು ಶಿವರಾಜ್​ಕುಮಾರ್​ ಮತ್ತೆ ಮತ್ತೆ ಹೇಳುತ್ತಿದ್ದಾರೆ. ಆ ಮೂಲಕ ಅಪ್ಪು ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಅವರು​ ಧೈರ್ಯ ತುಂಬುತ್ತಿದ್ದಾರೆ.

‘ಪುನೀತ್ ಇಲ್ಲದಿದ್ದಾಗ ದೂರು ಏಕೆ? ದಯವಿಟ್ಟು ಬೇಡ’: ಶಿವರಾಜ್​ಕುಮಾರ್​ ಮನವಿ
ಪುನೀತ್​ ರಾಜ್​ಕುಮಾರ್​, ಶಿವರಾಜ್​ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on: Nov 05, 2021 | 9:30 AM

Share

ಪುನೀತ್​​ ರಾಜ್​ಕುಮಾರ್​ ನಿಧನದಿಂದ ಅವರ ಅಭಿಮಾನಿ ಬಳಗ ಶೋಕಸಾಗರದಲ್ಲಿ ಮುಳುಗಿದೆ. ಬೆಳಕಿನ ಹಬ್ಬದಲ್ಲೂ ಕತ್ತಲು ಆವರಿಸಿದೆ. ಅಪ್ಪು ಹೃದಯಾಘಾತದಿಂದ ಮೃತಪಟ್ಟ ಸತ್ಯವನ್ನು ನಂಬಲು ಯಾರಿಗೂ ಸಾಧ್ಯವಾಗುತ್ತಿಲ್ಲ. ಈ ನಡುವೆ ಅವರ ನಿಧನದ ಬಗ್ಗೆ ಕೆಲವರಿಗೆ ಅನುಮಾನ ಕೂಡ ವ್ಯಕ್ತವಾಗಿದೆ. ಹಾಗಾಗಿ ತನಿಖೆ ಆಗಬೇಕು ಎಂದು ಪೊಲೀಸರಿಗೆ ದೂರು ನೀಡಲು ಕೆಲವರು ಮುಂದಾಗಿದ್ದಾರೆ. ಈ ಬಗ್ಗೆ ನಟ ಶಿವರಾಜ್​ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ. ಸಹೋದರನ ನಿಧನದಿಂದ ತೀವ್ರ ನೋವು ಅನುಭವಿಸುತ್ತಿರುವ ಶಿವಣ್ಣ, ಈ ವಿಚಾರದಲ್ಲಿ ತಮ್ಮ ಅಭಿಪ್ರಾಯ ಏನು ಎಂಬುದನ್ನು ತಿಳಿಸಿದ್ದಾರೆ.

‘ಪುನೀತ್ ಇಲ್ಲದಿದ್ದಾಗ ದೂರು ಏಕೆ? ದಯವಿಟ್ಟು ಇದೆಲ್ಲ ಬೇಡ. ಈಗ ದೂರಿನ ವಿಚಾರ ಮಾತನಾಡಿ ಪ್ರಯೋಜನ ಇಲ್ಲ. ಹಳೆಯದನ್ನೆಲ್ಲಾ ಬಿಟ್ಟು ಮುಂದೆ ಸಾಗಬೇಕಿದೆ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ. ಜೀವನದಲ್ಲಿ ಯಾವುದೇ ಕಟ್ಟ ಘಟನೆ ನಡೆದರೂ ಬದುಕು ಮುಂದೆ ಸಾಗಲೇಬೇಕು. ಹಾಗಾಗಿ ನೋವು ನುಂಗಿಕೊಂಡು ಜೀವನ ನಡೆಸಬೇಕು ಎಂಬ ಮಾತನ್ನು ಶಿವಣ್ಣ ಮತ್ತೆ ಮತ್ತೆ ಹೇಳುತ್ತಿದ್ದಾರೆ. ಆ ಮೂಲಕ ಇಡೀ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಶಿವರಾಜ್​ಕುಮಾರ್​ ಧೈರ್ಯ ತುಂಬುತ್ತಿದ್ದಾರೆ.

ಪುನೀತ್​ ನಿಧನದಿಂದ ತೀವ್ರ ನೋವಿಗೆ ಒಳಗಾಗಿರುವ ಕೆಲವು ಅಭಿಮಾನಿಗಳು ಆತ್ಮಹತ್ಯೆಯ ಕೆಟ್ಟ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಆ ರೀತಿ ಮಾಡದಂತೆ ಅಭಿಮಾನಿಗಳಲ್ಲಿ ಶಿವಣ್ಣ ಮನವಿ ಮಾಡಿದ್ದಾರೆ. ‘ಅಪ್ಪು ಇರದ ನೋವು ನಮ್ಮೆಲ್ಲರಲ್ಲೂ ಇದೆ. ಅದನ್ನ ಒಪ್ಪಿಕೊಂಡು ಮುಂದೆ ಸಾಗಬೇಕು. ಪುನೀತ್​ ರಾಜ್​ಕುಮಾರ್​ ಮಾಡುತ್ತಿದ್ದ ಸಮಾಜಮುಖಿ ಕಾರ್ಯಗಳನ್ನು ನಾವೆಲ್ಲ ಮುಂದುವರಿಸೋಣ. ಆ ಮೂಲಕ ಅಪ್ಪುವನ್ನ ಜೀವಂತವಾಗಿರಿಸೋಣ. ನಿಮ್ಮ ಕುಟುಂಬಕ್ಕೆ ನೀವು ಮುಖ್ಯ. ನಮಗೆ ನೀವು ಮುಖ್ಯ. ದಯವಿಟ್ಟು ಆತ್ಮಹತ್ಯೆಯಂತಹ‌ ನಿರ್ಧಾರ ಮಾಡಬೇಡಿ’ ಎಂದು ಶಿವರಾಜ್​ಕುಮಾರ್ ಮನವಿ ಮಾಡಿದ್ದಾರೆ.

ಅನೇಕ ಕಡೆಗಳಲ್ಲಿ ರಸ್ತೆ ಮತ್ತು ವೃತ್ತಗಳಿಗೆ ಪುನೀತ್​ ರಾಜ್​ಕುಮಾರ್​ ಹೆಸರು ಇಡಲಾಗುತ್ತಿದೆ. ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರಸ್ತೆಗೆ ಪುನೀತ್ ಹೆಸರು ನಾಮಕರಣ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಶಿವಣ್ಣ, ‘ಖಂಡಿತಾ ಅಂತಹ ಅಭಿಯಾನಗಳನ್ನು ಬೆಂಬಲಿಸೋಣ. ಅಪ್ಪು ಮಾಡುತ್ತಿದ್ದ ಸೋಶಿಯಲ್ ಸರ್ವೀಸ್ ನಾವು ಮುಂದುವರಿಸೋಣ’ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ನಿಧನಕ್ಕೂ 15-20 ನಿಮಿಷ ಮುನ್ನ ನಿಜಕ್ಕೂ ಏನು ನಡೆಯಿತು? ಇಲ್ಲಿದೆ ಕಾರು ಚಾಲಕ ತೆರೆದಿಟ್ಟ ವಿವರ

‘ದಾದಾಸಾಹೇಬ್​ ಫಾಲ್ಕೆ’ ರೀತಿಯೇ ಡಾ. ರಾಜ್​ ಹೆಸರಲ್ಲಿ ನೀಡುವ ಪ್ರಶಸ್ತಿ​ ಬಗ್ಗೆ ಹೊಸ ಕನಸು ಕಂಡಿದ್ದ​ ಪುನೀತ್​

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು