‘ಪುನೀತ್ ಇಲ್ಲದಿದ್ದಾಗ ದೂರು ಏಕೆ? ದಯವಿಟ್ಟು ಬೇಡ’: ಶಿವರಾಜ್​ಕುಮಾರ್​ ಮನವಿ

Puneeth Rajkumar: ಪುನೀತ್​ ರಾಜ್​ಕುಮಾರ್​ ಇಲ್ಲ ಎನ್ನುವ ನೋವು ನುಂಗಿಕೊಂಡು ಜೀವನ ನಡೆಸಬೇಕು ಎಂಬ ಮಾತನ್ನು ಶಿವರಾಜ್​ಕುಮಾರ್​ ಮತ್ತೆ ಮತ್ತೆ ಹೇಳುತ್ತಿದ್ದಾರೆ. ಆ ಮೂಲಕ ಅಪ್ಪು ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಅವರು​ ಧೈರ್ಯ ತುಂಬುತ್ತಿದ್ದಾರೆ.

‘ಪುನೀತ್ ಇಲ್ಲದಿದ್ದಾಗ ದೂರು ಏಕೆ? ದಯವಿಟ್ಟು ಬೇಡ’: ಶಿವರಾಜ್​ಕುಮಾರ್​ ಮನವಿ
ಪುನೀತ್​ ರಾಜ್​ಕುಮಾರ್​, ಶಿವರಾಜ್​ಕುಮಾರ್
Follow us
| Updated By: ಮದನ್​ ಕುಮಾರ್​

Updated on: Nov 05, 2021 | 9:30 AM

ಪುನೀತ್​​ ರಾಜ್​ಕುಮಾರ್​ ನಿಧನದಿಂದ ಅವರ ಅಭಿಮಾನಿ ಬಳಗ ಶೋಕಸಾಗರದಲ್ಲಿ ಮುಳುಗಿದೆ. ಬೆಳಕಿನ ಹಬ್ಬದಲ್ಲೂ ಕತ್ತಲು ಆವರಿಸಿದೆ. ಅಪ್ಪು ಹೃದಯಾಘಾತದಿಂದ ಮೃತಪಟ್ಟ ಸತ್ಯವನ್ನು ನಂಬಲು ಯಾರಿಗೂ ಸಾಧ್ಯವಾಗುತ್ತಿಲ್ಲ. ಈ ನಡುವೆ ಅವರ ನಿಧನದ ಬಗ್ಗೆ ಕೆಲವರಿಗೆ ಅನುಮಾನ ಕೂಡ ವ್ಯಕ್ತವಾಗಿದೆ. ಹಾಗಾಗಿ ತನಿಖೆ ಆಗಬೇಕು ಎಂದು ಪೊಲೀಸರಿಗೆ ದೂರು ನೀಡಲು ಕೆಲವರು ಮುಂದಾಗಿದ್ದಾರೆ. ಈ ಬಗ್ಗೆ ನಟ ಶಿವರಾಜ್​ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ. ಸಹೋದರನ ನಿಧನದಿಂದ ತೀವ್ರ ನೋವು ಅನುಭವಿಸುತ್ತಿರುವ ಶಿವಣ್ಣ, ಈ ವಿಚಾರದಲ್ಲಿ ತಮ್ಮ ಅಭಿಪ್ರಾಯ ಏನು ಎಂಬುದನ್ನು ತಿಳಿಸಿದ್ದಾರೆ.

‘ಪುನೀತ್ ಇಲ್ಲದಿದ್ದಾಗ ದೂರು ಏಕೆ? ದಯವಿಟ್ಟು ಇದೆಲ್ಲ ಬೇಡ. ಈಗ ದೂರಿನ ವಿಚಾರ ಮಾತನಾಡಿ ಪ್ರಯೋಜನ ಇಲ್ಲ. ಹಳೆಯದನ್ನೆಲ್ಲಾ ಬಿಟ್ಟು ಮುಂದೆ ಸಾಗಬೇಕಿದೆ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ. ಜೀವನದಲ್ಲಿ ಯಾವುದೇ ಕಟ್ಟ ಘಟನೆ ನಡೆದರೂ ಬದುಕು ಮುಂದೆ ಸಾಗಲೇಬೇಕು. ಹಾಗಾಗಿ ನೋವು ನುಂಗಿಕೊಂಡು ಜೀವನ ನಡೆಸಬೇಕು ಎಂಬ ಮಾತನ್ನು ಶಿವಣ್ಣ ಮತ್ತೆ ಮತ್ತೆ ಹೇಳುತ್ತಿದ್ದಾರೆ. ಆ ಮೂಲಕ ಇಡೀ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಶಿವರಾಜ್​ಕುಮಾರ್​ ಧೈರ್ಯ ತುಂಬುತ್ತಿದ್ದಾರೆ.

ಪುನೀತ್​ ನಿಧನದಿಂದ ತೀವ್ರ ನೋವಿಗೆ ಒಳಗಾಗಿರುವ ಕೆಲವು ಅಭಿಮಾನಿಗಳು ಆತ್ಮಹತ್ಯೆಯ ಕೆಟ್ಟ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಆ ರೀತಿ ಮಾಡದಂತೆ ಅಭಿಮಾನಿಗಳಲ್ಲಿ ಶಿವಣ್ಣ ಮನವಿ ಮಾಡಿದ್ದಾರೆ. ‘ಅಪ್ಪು ಇರದ ನೋವು ನಮ್ಮೆಲ್ಲರಲ್ಲೂ ಇದೆ. ಅದನ್ನ ಒಪ್ಪಿಕೊಂಡು ಮುಂದೆ ಸಾಗಬೇಕು. ಪುನೀತ್​ ರಾಜ್​ಕುಮಾರ್​ ಮಾಡುತ್ತಿದ್ದ ಸಮಾಜಮುಖಿ ಕಾರ್ಯಗಳನ್ನು ನಾವೆಲ್ಲ ಮುಂದುವರಿಸೋಣ. ಆ ಮೂಲಕ ಅಪ್ಪುವನ್ನ ಜೀವಂತವಾಗಿರಿಸೋಣ. ನಿಮ್ಮ ಕುಟುಂಬಕ್ಕೆ ನೀವು ಮುಖ್ಯ. ನಮಗೆ ನೀವು ಮುಖ್ಯ. ದಯವಿಟ್ಟು ಆತ್ಮಹತ್ಯೆಯಂತಹ‌ ನಿರ್ಧಾರ ಮಾಡಬೇಡಿ’ ಎಂದು ಶಿವರಾಜ್​ಕುಮಾರ್ ಮನವಿ ಮಾಡಿದ್ದಾರೆ.

ಅನೇಕ ಕಡೆಗಳಲ್ಲಿ ರಸ್ತೆ ಮತ್ತು ವೃತ್ತಗಳಿಗೆ ಪುನೀತ್​ ರಾಜ್​ಕುಮಾರ್​ ಹೆಸರು ಇಡಲಾಗುತ್ತಿದೆ. ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರಸ್ತೆಗೆ ಪುನೀತ್ ಹೆಸರು ನಾಮಕರಣ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಶಿವಣ್ಣ, ‘ಖಂಡಿತಾ ಅಂತಹ ಅಭಿಯಾನಗಳನ್ನು ಬೆಂಬಲಿಸೋಣ. ಅಪ್ಪು ಮಾಡುತ್ತಿದ್ದ ಸೋಶಿಯಲ್ ಸರ್ವೀಸ್ ನಾವು ಮುಂದುವರಿಸೋಣ’ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ನಿಧನಕ್ಕೂ 15-20 ನಿಮಿಷ ಮುನ್ನ ನಿಜಕ್ಕೂ ಏನು ನಡೆಯಿತು? ಇಲ್ಲಿದೆ ಕಾರು ಚಾಲಕ ತೆರೆದಿಟ್ಟ ವಿವರ

‘ದಾದಾಸಾಹೇಬ್​ ಫಾಲ್ಕೆ’ ರೀತಿಯೇ ಡಾ. ರಾಜ್​ ಹೆಸರಲ್ಲಿ ನೀಡುವ ಪ್ರಶಸ್ತಿ​ ಬಗ್ಗೆ ಹೊಸ ಕನಸು ಕಂಡಿದ್ದ​ ಪುನೀತ್​

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ