AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ನಿಧನದಿಂದ ಮಕ್ಕಳ ಮನಸ್ಸಿಗೆ ಘಾಸಿ; ‘ಅಪ್ಪು ಅಣ್ಣ ಬೇಕು’ ಅಂತ ಅಳುವ ಕಂದಮ್ಮಗಳ ವಿಡಿಯೋ ವೈರಲ್​

Puneeth Rajkumar: ಈ ದೃಶ್ಯಗಳನ್ನು ನೋಡಿದರೆ ನಿಜಕ್ಕೂ ಮನ ಕಲಕುತ್ತದೆ. ಇಷ್ಟು ಒಳ್ಳೆಯ ವ್ಯಕ್ತಿಯನ್ನು ದೇವರು ಯಾಕೆ ಇಷ್ಟು ಬೇಗ ಕರೆಸಿಕೊಂಡ ಎಂಬ ಪ್ರಶ್ನೆ ಕಾಡುತ್ತದೆ. ಆದರೆ ಈ ಪ್ರಶ್ನೆ ಉತ್ತರ ಹೇಳೋರು ಯಾರು?

ಪುನೀತ್​ ನಿಧನದಿಂದ ಮಕ್ಕಳ ಮನಸ್ಸಿಗೆ ಘಾಸಿ; ‘ಅಪ್ಪು ಅಣ್ಣ ಬೇಕು’ ಅಂತ ಅಳುವ ಕಂದಮ್ಮಗಳ ವಿಡಿಯೋ ವೈರಲ್​
ಪುನೀತ್​ಗಾಗಿ ಅಳುತ್ತಿರುವ ಮಕ್ಕಳು
TV9 Web
| Edited By: |

Updated on:Oct 30, 2021 | 5:18 PM

Share

ಕನ್ನಡ ಚಿತ್ರರಂಗದಲ್ಲಿ ಎಲ್ಲರಿಗಿಂತಲೂ ಭಿನ್ನವಾಗಿ ಗುರುತಿಸಿಕೊಂಡವರು ನಟ ಪುನೀತ್​ ರಾಜ್​ಕುಮಾರ್​. ಬಾಲನಟನಾಗಿ ಚಿತ್ರರಂಗಕ್ಕೆ ಬಂದ ಅವರ ಮನಸ್ಸು ಕೊನೆವರೆಗೂ ಮಗುವಿನ ರೀತಿಯೇ ಇತ್ತು. ಎಲ್ಲ ವಯೋಮಾನದವರ ಜೊತೆಗೆ ಅವರು ವಿನಯದಿಂದ ನಡೆದುಕೊಳ್ಳುತ್ತಿದ್ದರು. ವಿಶೇಷವಾಗಿ ಮಕ್ಕಳಿಗೆ ಪುನೀತ್​ ಎಂದರೆ ಸಖತ್​ ಇಷ್ಟ. ಈಗ ಅಪ್ಪು ನಮ್ಮೊಂದಿಗೆ ಇಲ್ಲ ಎಂಬುದನ್ನು ಮಕ್ಕಳು ಕೂಡ ಒಪ್ಪುತ್ತಿಲ್ಲ. ಪುನೀತ್​ ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ಪುಟಾಣಿಗಳೆಲ್ಲ ಕಂಬನಿ ಸುರಿಸುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಇರುವ ಮಕ್ಕಳು ರೋದಿಸುತ್ತಿದ್ದಾರೆ.

ಈ ಪರಿ ಅಭಿಮಾನಿಗಳನ್ನು ಕರುನಾಡಿನಲ್ಲಿ ಬೇರೆ ಯಾವ ನಟನೂ ಸಂಪಾದಿಸಿರಲಿಕ್ಕಿಲ್ಲ. ಮಕ್ಕಳು ಅಳುತ್ತಿರುವ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಅವರನ್ನು ಸಮಾಧಾನ ಮಾಡಲು ಪೋಷಕರು ಕಷ್ಟಪಡುತ್ತಿದ್ದಾರೆ. ‘ಅಪ್ಪು ಸತ್ತಿಲ್ಲ’ ಎಂದು ಎಷ್ಟು ಹೇಳಿದರೂ ಕೂಡ ಮಕ್ಕಳು ಸಮಾಧಾನಗೊಳ್ಳುತ್ತಿಲ್ಲ. ಸತ್ಯ ತಿಳಿದುಕೊಂಡಿರುವ ಕಂದಮ್ಮಗಳೆಲ್ಲ ‘ಅಪ್ಪು ಅಣ್ಣ ಬೇಕು. ಪುನೀತ್​ ಅಂಕಲ್​ ಬೇಕು’ ಎಂದು ಗೋಳಾಡುತ್ತಿವೆ. ಈ ದೃಶ್ಯಗಳನ್ನು ನೋಡಿದರೆ ನಿಜಕ್ಕೂ ಮನ ಕಲಕುತ್ತದೆ. ಇಷ್ಟು ಒಳ್ಳೆಯ ವ್ಯಕ್ತಿಯನ್ನು ದೇವರು ಯಾಕೆ ಇಷ್ಟು ಬೇಗ ಕರೆಸಿಕೊಂಡ ಎಂಬ ಪ್ರಶ್ನೆ ಕಾಡುತ್ತದೆ. ಆದರೆ ಈ ಪ್ರಶ್ನೆ ಉತ್ತರ ಹೇಳೋರು ಯಾರು?

ಕಂಠೀರವ ಸ್ಟೇಡಿಯಂನಲ್ಲಿ ಪುನೀತ್​ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದೆ. ಶುಕ್ರವಾರ ಮಧ್ಯಾಹ್ನದಿಂದಲೂ ಅವರನ್ನು ನೋಡಲು ಜನಸಾಗರ ಹರಿದುಬರುತ್ತಿದೆ. ಆ ನೂಕು ನುಗ್ಗಲಿನ ನಡುವೆಯೂ ಮಹಿಳೆಯರು ಮತ್ತು ಮಕ್ಕಳು ಬಂದು ಪುನೀತ್​ಗಾಗಿ ಕಣ್ಣೀರು ಹಾಕುತ್ತಿದ್ದಾರೆ. ಎಷ್ಟೋ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಪುನೀತ್​ ಇನ್ನಿಲ್ಲ ಎಂಬ ಸುದ್ದಿ ತಿಳಿದು ಕೆಲವರು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ.

ಈ ಎಲ್ಲ ಘಟನೆಗಳಿಂದ ಕರುನಾಡಿನಲ್ಲಿ ಕತ್ತಲು ಆವರಿಸಿದೆ. ಪುನೀತ್​ ಪುತ್ರಿ ಧೃತಿ ಅವರು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳಿದ್ದರು. ತಂದೆಯ ಸಾವಿನ ವಿಷಯ ತಿಳಿಯುತ್ತಿದ್ದಂತೆಯೇ ಅವರು ನ್ಯೂಯಾರ್ಕ್​ನಿಂದ ಹೊರಟರು. ವಿಮಾನ ಪ್ರಯಾಣದ ಮೂಲಕ ಇಂದು (ಅ.30) ಮಧ್ಯಾಹ್ನ ಬೆಂಗಳೂರಿಗೆ ಬಂದು ಇಳಿದಿದ್ದಾರೆ. ಇನ್ನೂ ಲಕ್ಷಾಂತರ ಜನರು ಪುನೀತ್​ ಅವರ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ (ಅ.31) ಕೂಡ ಅವಕಾಶ ಮಾಡಿಕೊಡಲಾಗುತ್ತಿದೆ.

ಇದನ್ನೂ ಓದಿ:

Puneeth Rajkumar: ‘ನನ್ನ ತಮ್ಮ ರಾಯಲ್​ ಆಗಿಯೇ ಇರುತ್ತಾನೆ’; ಕ್ರೂರ ವಿಧಿಯಿಂದ ಸುಳ್ಳಾಯ್ತು ಶಿವಣ್ಣನ ಈ ಮಾತು

‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

Published On - 5:16 pm, Sat, 30 October 21

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ