Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ನ್ಯೂಸ್​ ಚಾನೆಲ್​ಗಳಲ್ಲಿ ಪುನೀತ್​ ನಿಧನದ ಸುದ್ದಿ; ಸೌತ್​ ಕೊರಿಯಾದಲ್ಲೂ ಅಭಿಮಾನದ ಹೊಳೆ

Puneeth Rajkumar: ವಿಶ್ವಾದ್ಯಂತ ಪುನೀತ್​ ರಾಜ್​ಕುಮಾರ್ ಅವರು ಯಾವ ಮಟ್ಟಿಗಿನ ಖ್ಯಾತಿ ಹೊಂದಿದ್ದರು ಎಂಬುದಕ್ಕೆ ಈ ಸಂಗತಿಗಳೇ ಸಾಕ್ಷಿ ಒದಗಿಸುತ್ತಿವೆ. ಜಾಗತಿಕ ಮಟ್ಟದಲ್ಲಿರುವ ಹಲವು ಪತಿಷ್ಠಿತ ನ್ಯೂಸ್​ ಚಾನೆಲ್​ಗಳು ಪುನೀತ್​ ಅವರ ನಿಧನದ ಸುದ್ದಿ ಬಿತ್ತರಿಸಿವೆ.

ವಿದೇಶಿ ನ್ಯೂಸ್​ ಚಾನೆಲ್​ಗಳಲ್ಲಿ ಪುನೀತ್​ ನಿಧನದ ಸುದ್ದಿ; ಸೌತ್​ ಕೊರಿಯಾದಲ್ಲೂ ಅಭಿಮಾನದ ಹೊಳೆ
ವಿದೇಶಿ ನ್ಯೂಸ್​ ಚಾನೆಲ್​ಗಳಲ್ಲಿ ಪುನೀತ್​ ನಿಧನದ ಸುದ್ದಿ
Follow us
TV9 Web
| Updated By: ಮದನ್​ ಕುಮಾರ್​

Updated on: Oct 31, 2021 | 1:58 PM

ಪುನೀತ್​ ರಾಜ್​ಕುಮಾರ್​ ಅವರನ್ನು ಕೋಟ್ಯಂತರ ಜನರು ಆರಾಧಿಸುತ್ತಿದ್ದರು. ಅವರ ನಟನೆಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಫಿದಾ ಆಗಿದ್ದರು. ಕೇವಲ ಕರ್ನಾಟಕ ಮಾತ್ರವಲ್ಲದೇ ಅಕ್ಕ-ಪಕ್ಕದ ರಾಜ್ಯಗಳಲ್ಲಿ ಅವರಿಗೆ ಅಭಿಮಾನಿಗಳಿದ್ದಾರೆ. ಅಷ್ಟೇ ಅಲ್ಲ, ದೇಶ-ವಿದೇಶಗಳಲ್ಲೂ ಅವರ ಸಿನಿಮಾಗಳು ಸದ್ದು ಮಾಡುತ್ತಿದ್ದವು. ಹಾಗಾಗಿ ಅಲ್ಲಿನ ಸಿನಿಪ್ರಿಯರಿಗೂ ಪುನೀತ್​ ಪರಿಚಿತರಾಗಿದ್ದರು. ಆ ಕಾರಣಕ್ಕಾಗಿ ವಿದೇಶದ ಅನೇಕ ಸುದ್ದಿ ವಾಹಿನಿಗಳು ಪುನೀತ್​ ರಾಜ್​ಕುಮಾರ್​ ಅವರ ಅಗಲಿಕೆಯ ವಾರ್ತೆಯನ್ನು ಬಿತ್ತರಿಸಿವೆ.

ದಕ್ಷಿಣ ಕೊರಿಯಾದ Yonhap News ವಾಹಿನಿಯು ಪುನೀತ್​ ಅವರ ನಿಧನದ ಸುದ್ದಿಯನ್ನು ಪ್ರಸಾರ ಮಾಡಿದೆ. ನರೇಂದ್ರ ಮೋದಿ ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಫೋಟೋ ಮತ್ತು ಬೆಂಗಳೂರಿನಲ್ಲಿ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿರುವ ದೃಶಗಳನ್ನು ಈ ವಾಹಿನಿ ಬಿತ್ತರಿಸಿದೆ. ಪುನೀತ್​ ರಾಜ್​ಕುಮಾರ್​ ಅವರ ಸಾಧನೆಗಳನ್ನು ವಿವರಿಸಲಾಗಿದೆ. ಪುನೀತ್​ ನಿಧನಕ್ಕೆ ಕಾರಣ ಏನು? ಅವರ ಅಗಲಿಕೆಯಿಂದ ಅಭಿಮಾನಿಗಳು ಹೇಗೆಲ್ಲ ಕಂಬನಿ ಮಿಡಿಯುತ್ತಿದ್ದಾರೆ? ಸದ್ಯ ಬೆಂಗಳೂರಿನಲ್ಲಿ ಪರಿಸ್ಥಿತಿ ಯಾರ ರೀತಿ ಇದೆ ಎಂಬುದನ್ನು ಈ ನ್ಯೂಸ್​ ಚಾನೆಲ್​ನಲ್ಲಿ ತಿಳಿಸಲಾಗಿದೆ.

ಅದೇ ರೀತಿ ಜಾಗತಿಕ ಮಟ್ಟದಲ್ಲಿ ಖ್ಯಾತಿ ಹೊಂದಿರುವ ‘ಬಿಬಿಸಿ’ ಸುದ್ದಿ ವಾಹಿನಿ ಕೂಡ ಪುನೀತ್​ ನಿಧನದ ಸುದ್ದಿಯನ್ನು ಪ್ರಸಾರ ಮಾಡಿದೆ. ಪುನೀತ್​ ಅವರು ದಕ್ಷಿಣ ಭಾರತದ ಸೂಪರ್​ ಸ್ಟಾರ್​ ಆಗಿದ್ದರು ಎಂದು ಬಣ್ಣಿಸಿದೆ. ಸಿನಿಮಾ, ಕಿರುತೆರೆ ಮೂಲಕ ‘ಪವರ್​ ಸ್ಟಾರ್​’ ಯಾವ ರೀತಿ ಅಭಿಮಾನಿಗಳ ಮೇಲೆ ಪ್ರಭಾವ ಬೀರಿದ್ದರು ಎಂಬುದನ್ನು ಚರ್ಚಿಸಲಾಗಿದೆ. ವಿಶ್ವಾದ್ಯಂತ ಪುನೀತ್​ ರಾಜ್​ಕುಮಾರ್ ಅವರು ಹೊಂದಿದ್ದ ಖ್ಯಾತಿಗೆ ಈ ಸಂಗತಿಗಳೇ ಸಾಕ್ಷಿ ಒದಗಿಸುತ್ತಿವೆ.

ಪುನೀತ್​ ನಿಧನರಾದ ಸುದ್ದಿ ತಿಳಿದ ಕೂಡಲೇ ಪಾಕಿಸ್ತಾನದಿಂದಲೂ ಅಭಿಮಾನಿಯೊಬ್ಬರು ಗಾನ ನಮನ ಸಲ್ಲಿಸಿದ್ದರು. ‘ರಾಜಕುಮಾರ’ ಸಿನಿಮಾದ ‘ಗೊಂಬೆ ಹೇಳುತೈತೆ..’ ಹಾಗೂ ‘ಮಿಲನ’ ಸಿನಿಮಾದ ‘ನಿನ್ನಿಂದಲೇ ನಿನ್ನಿಂದಲೇ..’ ಗೀತೆಯನ್ನು ಹೇಳುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿದೆ.

ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆಯನ್ನು ಇಂದು (ಅ.31) ಮುಂಜಾನೆ ನೆರವೇರಿಸಲಾಗಿದೆ.​ ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಣ್ಣ ಶಿವರಾಜ್​ಕುಮಾರ್​, ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದಿತಾ ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಪುನೀತ್​ ಅವರಿಗೆ ಗಂಡು ಮಕ್ಕಳಿಲ್ಲ. ಆ ಕಾರಣದಿಂದ ಅವರ ಸಹೋದರ ರಾಘವೇಂದ್ರ ರಾಜ್​ಕುಮಾರ್​ ಅವರ ಪುತ್ರ ವಿನಯ್​ ರಾಜ್​ಕುಮಾರ್​ ಅವರಿಂದ ಅಂತಿಮ ವಿಧಿವಿಧಾನಗಳನ್ನು ಮಾಡಿಸಲಾಯಿತು. ಬಳಿಕ ಪುನೀತ್​ ಪುತ್ರಿಯರು ಅಪ್ಪನ ಸಮಾಧಿಗೆ ಪೂಜೆ ಸಲ್ಲಿಸಿದರು.

ಇದನ್ನೂ ಒದಿ:

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

Puneeth Rajkumar: ಪುನೀತ್​ಗೆ ಸುದೀಪ್​ ನುಡಿ ನಮನ; ಅಂತ್ಯಕ್ರಿಯೆ ವೇಳೆ ಮಕ್ಕಳ ಬಗ್ಗೆ ಯೋಚಿಸಿ ಕಣ್ಣೀರಿಟ್ಟ ಕಿಚ್ಚ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ