AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhada Gudi Title Teaser: ‘ಗಂಧದ ಗುಡಿ’ ಟೈಟಲ್ ಟೀಸರ್​ ಬಿಡುಗಡೆ; ಬೆರಗು ಮೂಡಿಸಿದ ಪುನೀತ್​ ಡ್ರೀಮ್​ ಪ್ರಾಜೆಕ್ಟ್​

Puneeth Rajkumar | Gandhada Gudi: ಪಿಆರ್​ಕೆ ಆಡಿಯೋ​ ಮೂಲಕ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಶೀರ್ಷಿಕೆ ಟೀಸರ್​ ಅನಾವರಣ ಆಗಿದೆ. ಈ ಸಂದರ್ಭದಲ್ಲಿ ಪುನೀತ್​ ರಾಜ್​ಕುಮಾರ್​ ಅವರನ್ನು ಎಲ್ಲರೂ ತುಂಬಾ​ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

Gandhada Gudi Title Teaser: ‘ಗಂಧದ ಗುಡಿ’ ಟೈಟಲ್ ಟೀಸರ್​ ಬಿಡುಗಡೆ; ಬೆರಗು ಮೂಡಿಸಿದ ಪುನೀತ್​ ಡ್ರೀಮ್​ ಪ್ರಾಜೆಕ್ಟ್​
ಪುನೀತ್​ ರಾಜ್​ಕುಮಾರ್​, ಗಂಧದ ಗುಡಿ
TV9 Web
| Edited By: |

Updated on:Dec 06, 2021 | 12:55 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಕರುನಾಡಿನ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತ ಸಾಕ್ಷ್ಯಚಿತ್ರದ ನಿರ್ಮಾಣದಲ್ಲಿ ಅಪಾರ ಆಸಕ್ತಿ ತೋರಿಸಿದ್ದರು. ಆದರೆ ಅದನ್ನು ಅಭಿಮಾನಿಗಳ ಮುಂದಿಡುವ ಮುನ್ನವೇ ಅವರು ಅಸುನೀಗಿದ್ದು ನೋವಿನ ಸಂಗತಿ. ಭೌತಿಕವಾಗಿ ಅವರ ಅನುಪಸ್ಥಿತಿಯಲ್ಲೇ ಇಂದು (ಡಿ.6) ‘ಗಂಧದ ಗುಡಿ’ ಡಾಕ್ಯುಮೆಂಟರಿಯ ಶೀರ್ಷಿಕೆ ಟೀಸರ್​ ಅನಾವರಣ ಆಗಿದೆ. ಪುನೀತ್​ ರಾಜ್​ಕುಮಾರ್​ ಅವರ ‘ಪಿಆರ್​ಕೆ ಆಡಿಯೋ’ (PRK Audio) ಮೂಲಕ ಟೈಟಲ್​ ಟೀಸರ್​ ರಿಲೀಸ್​ ಮಾಡಲಾಗಿದೆ. ಈ ದಿನಕ್ಕಾಗಿ ಅಪ್ಪು ಅಭಿಮಾನಿಗಳು ಕಾತರದಿಂದ ಕಾದಿದ್ದರು. ಟೈಟಲ್​ ಟೀಸರ್​ ನೋಡಿ ಎಲ್ಲರೂ ಖುಷಿಪಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್​ ಆಗುತ್ತಿದೆ. ಈ ವೇಳೆ ಅಪ್ಪು ನಮ್ಮೊಂದಿಗೆ ಇರಬೇಕಿತ್ತು ಎಂದು ಎಲ್ಲರೂ ತೀವ್ರವಾಗಿ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ಕರ್ನಾಟಕದ ದಟ್ಟ ಕಾನನದ ಒಳಗೆ ಇದನ್ನು ಚಿತ್ರೀಕರಿಸಲಾಗಿದೆ. ಪ್ರಕೃತಿ ಸೌಂದರ್ಯವನ್ನು, ವನ್ಯಜೀವಿಗಳ ಜೀವನವನ್ನು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ಕೇವಲ ಟೀಸರ್​ ನೋಡಿಯೇ ಜನರು ರೋಮಾಂಚನಗೊಳ್ಳುತ್ತಿದ್ದಾರೆ. ಕಣ್ಮನ ತಣಿಸುವಂತಹ ಛಾಯಾಗ್ರಹಣ ಎಲ್ಲರಲ್ಲೂ ಬೆರಗು ಮೂಡಿಸುತ್ತಿದೆ. ಇದು ಕೇವಲ ಆನ್​ಲೈನ್​ಗೆ ಸೀಮಿತವಲ್ಲ. ‘ಗಂಧದ ಗುಡಿ’ ಸಾಕ್ಷ್ಯಚಿತ್ರವು ಥಿಯೇಟರ್​ನಲ್ಲಿ ಬಿಡುಗಡೆ ಆಗಲಿದೆ. 2022ರಲ್ಲಿ ಚಿತ್ರಮಂದಿರಗಳಲ್ಲಿ ಇದನ್ನು ತೆರೆಕಾಣಿಸಲು ಪ್ಲ್ಯಾನ್​ ಮಾಡಲಾಗಿದೆ.

ಟೈಟಲ್​ ಟೀಸರ್​ ನೋಡಿದ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಇದನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಇಂಥ ಅದ್ಭುತವನ್ನು ನಿರ್ಮಿಸಿದ ಪುನೀತ್​ ರಾಜ್​ಕುಮಾರ್​ ಅವರನ್ನು ನೆನಪು ಮಾಡಿಕೊಂಡು ಜನರು ಕಂಬಿನಿ ಮಿಡಿಯುತ್ತಿದ್ದಾರೆ. ಈ ಟೀಸರ್​ನ ಕೊನೆಯಲ್ಲಿ ರಾಜ್​ಕುಮಾರ್​​ ನಟನೆಯ ‘ಗಂಧದ ಗುಡಿ’ ಸಿನಿಮಾದ ಡೈಲಾಗ್​ ಕೇಳಿಬಂದಿದೆ. ಅದನ್ನು ಕೇಳಿ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ.

ವಿಶೇಷ ಏನೆಂದರೆ ಇಂದು ಪಾರ್ವತಮ್ಮ ರಾಜ್​ಕುಮಾರ್​ ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಟೈಟಲ್​ ಟೀಸರ್​ ಬಿಡುಗಡೆ ಆಗುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ. ಈ ವೇಳೆ ಪುನೀತ್​ ರಾಜ್​ಕುಮಾರ್ ನಮ್ಮೊಂದಿಗೆ ಇಲ್ಲ ಎಂಬ ನೋವು ಎಂದಿಗೂ ಕಡಿಮೆ ಆಗುವಂಥದ್ದಲ್ಲ.

ಇದನ್ನೂ ಓದಿ:

ಇನ್ನೂ ನಿಂತಿಲ್ಲ ಶಿವಣ್ಣನ ಕಣ್ಣೀರು; ಅಪ್ಪು ನೆನೆದು ಬಿಕ್ಕಿ ಬಿಕ್ಕಿ ಅಳುತ್ತಿರುವ ಮುತ್ತಣ್ಣ

ಮೈಸೂರು ಅರಮನೆಯಿಂದ ಅಪ್ಪು ಸಮಾಧಿವರೆಗೆ ಸೈಕ್ಲಿಂಗ್​; ಪುನೀತ್​ ಅಭಿಮಾನಿಗಳಿಂದ ಹೀಗೊಂದು ಶ್ರದ್ಧಾಂಜಲಿ

Published On - 10:08 am, Mon, 6 December 21

Follow Us
Web contact
Web contact

TV9 Kannada

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!