AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ನಾಯಕಿಯಾದ ತ್ರಿಷಾ ಕೃಷ್ಣನ್

2014ರಲ್ಲಿ ತೆರೆಗೆ ಬಂದ ಪುನೀತ್​ ನಟನೆಯ ‘ಪವರ್***​’ ಚಿತ್ರದಲ್ಲಿ ತ್ರಿಷಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದು ಅವರ ಮೊದಲ ಹಾಗೂ ಕೊನೆಯ ಕನ್ನಡ ಚಿತ್ರ. ಈ ಸಿನಿಮಾ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡಿತ್ತು. ಇದಾದ ನಂತರದಲ್ಲಿ ಅವರು ಯಾವುದೇ ಕನ್ನಡ ಚಿತ್ರಗಳಲ್ಲಿ ನಟಿಸಿಲ್ಲ. ‘

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ನಾಯಕಿಯಾದ ತ್ರಿಷಾ ಕೃಷ್ಣನ್
ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ನಾಯಕಿಯಾದ ತ್ರಿಷಾ ಕೃಷ್ಣನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 02, 2021 | 8:12 PM

Share

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಪವನ್​ ಕುಮಾರ್​ ಜೊತೆಯಾಗಿ ಮಾಡಲಿರುವ ಹೊಸ ಚಿತ್ರಕ್ಕೆ ‘ದ್ವಿತ್ವ’ ಎಂದು ಶೀರ್ಷಿಕೆ ಇಡಲಾಗಿದೆ. ಚಿತ್ರಕ್ಕೆ ಪುನೀತ್​ ಹೀರೋ ಅನ್ನೋ ಮಾಹಿತಿ ಬಿಟ್ಟರೆ ಇತರೆ ಪಾತ್ರವರ್ಗದ ಬಗ್ಗೆ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ.  ಹೀಗಾಗಿ, ಸಿನಿಮಾ ನಾಯಕಿ​ ಯಾರು ಅನ್ನೋದು ಅನೇಕರ ಪ್ರಶ್ನೆಯಾಗಿತ್ತು. ಇದಕ್ಕೆ ಈಗ ಚಿತ್ರತಂಡದಿಂದ ಉತ್ತರ ಸಿಕ್ಕಿದೆ. 

ಸೈಕಲಾಜಿಕಲ್​ ಕಥಾಹಂದರ ಹೊಂದಿದ್ದ ‘ಲೂಸಿಯಾ’ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಪವನ್​ ಕುಮಾರ್​ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. ಈಗ ಅವರು ‘ದ್ವಿತ್ವ’ ಸಿನಿಮಾದಲ್ಲಿ ಮತ್ತೆ ಸೈಕಲಾಜಿಕಲ್​ ಕಥೆಯನ್ನೇ ಆಯ್ಕೆ ಮಾಡಿಕೊಂಡಿರುವುದು ವಿಶೇಷ. ಶೀರ್ಷಿಕೆ ಜೊತೆಗೆ ಡಿಫರೆಂಟ್​ ಆದಂತಹ ಪೋಸ್ಟರ್​ ಕೂಡ ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಈಗ ಈ ಚಿತ್ರಕ್ಕೆ ತ್ರಿಷಾ ಕೃಷ್ಣನ್​ ನಾಯಕಿಯಾಗಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

2014ರಲ್ಲಿ ತೆರೆಗೆ ಬಂದ ಪುನೀತ್​ ನಟನೆಯ ‘ಪವರ್***​’ ಚಿತ್ರದಲ್ಲಿ ತ್ರಿಷಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದು ಅವರ ಮೊದಲ ಹಾಗೂ ಕೊನೆಯ ಕನ್ನಡ ಚಿತ್ರ. ಈ ಸಿನಿಮಾ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡಿತ್ತು. ಇದಾದ ನಂತರದಲ್ಲಿ ಅವರು ಯಾವುದೇ ಕನ್ನಡ ಚಿತ್ರಗಳಲ್ಲಿ ನಟಿಸಿಲ್ಲ. ‘ಪವರ್​’ ತೆರೆಕಂಡ ನಂತರದಲ್ಲಿ ತ್ರಿಷಾಗೆ ಬೇರೆ ಭಾಷೆಗಳಲ್ಲಿ ಒಳ್ಳೆಯ ಆಫರ್ ಬರೋಕೆ ಶುರುವಾದವು. ಹೀಗಾಗಿ, ಅವರು ಪರ ಭಾಷೆಯಲ್ಲಿ ಬ್ಯುಸಿಯಾದರು. ಈಗ ಅವರು  ಮತ್ತೆ ಕನ್ನಡಕ್ಕೆ ಮರಳುತ್ತಿದ್ದಾರೆ.

2018ರಲ್ಲಿ ಬಂದ ‘ಯೂ ಟರ್ನ್​’ ಚಿತ್ರದ ಬಳಿಕ ಕನ್ನಡದಲ್ಲಿ ಬೇರೆ ಯಾವುದೇ ಸಿನಿಮಾವನ್ನು ಪವನ್​ ಕುಮಾರ್​ ನಿರ್ದೇಶನ ಮಾಡಿಲ್ಲ. ದೊಡ್ಡ ಗ್ಯಾಪ್​ ಬಳಿಕ ಅವರು ಕನ್ನಡ ಪ್ರಾಜೆಕ್ಟ್​ ಕೈಗೆತ್ತಿಕೊಂಡಿರುವುದರಿಂದ ನಿರೀಕ್ಷೆ ಜೋರಾಗಿದೆ. ಲೂಸಿಯಾ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿ ಜನಪ್ರಿಯರಾಗಿದ್ದ ಪೂರ್ಣಚಂದ್ರ ತೇಜಸ್ವಿ ಅವರೇ ‘ದ್ವಿತ್ವ’ ಚಿತ್ರಕ್ಕೂ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಇದನ್ನೂ ಓದಿ: ಪೋಸ್ಟರ್​ ಕಾಪಿ ಎಂಬ ಆರೋಪಕ್ಕೆ ಪುನೀತ್​ ನಟನೆಯ ‘ದ್ವಿತ್ವ’ ಚಿತ್ರ ತಂಡದಿಂದ ಸ್ಪಷ್ಟನೆ

‘ದ್ವಿತ್ವ’ ಪೋಸ್ಟರ್​ ಹಿಂದಿನ ಸತ್ಯ ತೆರೆದಿಟ್ಟು, ಫ್ಯಾನ್ಸ್​ ಬಳಿ ಕ್ಷಮೆ ಕೇಳಿದ ಪವನ್​ ಕುಮಾರ್​

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!