AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗಾಗಿ ರಾಜಕುಮಾರ ಸಿನಿಮಾ ಟೈಟಲ್ ಬಿಟ್ಟುಕೊಟ್ಟಿದ್ರು; ನಿರ್ಮಾಪಕ ರಾಮು ನಿಧನ ಸುದ್ದಿ ಕೇಳಿ ಭಾವುಕರಾದ ಪುನೀತ್​  

Puneeth Rajkumar: ರಾಮು ನಮ್ಮ ಕುಟುಂಬಕ್ಕೆ ತುಂಬಾ ಹತ್ತಿರದವರಾಗಿದ್ದರು. ನಾನು ಎಷ್ಟೋ ವರ್ಷಗಳಿಂದ ಅವರನ್ನ ನೋಡುತ್ತಾ ಇದ್ದೇನೆ. ರಾಜಕುಮಾರ ಸಿನಿಮಾ ಟೈಟಲ್ ಅವರ ಬಳಿಯೆ ಇತ್ತು. ನನಗಾಗಿ ಟೈಟಲ್​ ಬಿಟ್ಟು ಕೊಟ್ಟಿದ್ದರು ಎಂದು ಪುನೀತ್​ ಭಾವುಕರಾದರು.

ನನಗಾಗಿ ರಾಜಕುಮಾರ ಸಿನಿಮಾ ಟೈಟಲ್ ಬಿಟ್ಟುಕೊಟ್ಟಿದ್ರು; ನಿರ್ಮಾಪಕ ರಾಮು ನಿಧನ ಸುದ್ದಿ ಕೇಳಿ ಭಾವುಕರಾದ ಪುನೀತ್​  
ರಾಮು-ಪುನೀತ್​ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Apr 26, 2021 | 9:20 PM

Share

ಸ್ಯಾಂಡಲ್​ವುಡ್​ಗೆ ಕೊರೊನಾ ಆಘಾತ ಉಂಟಾಗಿದೆ. ಖ್ಯಾತ ನಿರ್ಮಾಪಕ ಕೋಟಿ ರಾಮು (52) ಕೊರೊನಾದಿಂದ ನಿಧನ ಹೊಂದಿದ್ದಾರೆ. ಈ ವಿಚಾರ ಕೇಳಿ ನಟ ಪುನೀತ್​ ರಾಜ್​ಕುಮಾರ್​ ಭಾವುಕರಾಗಿದ್ದಾರೆ. ಅವರು ಮೃತಪಟ್ಟಿದ್ದಾರೆ ಎನ್ನುವುದನ್ನು ನನ್ನಿಂದ ನಂಬೋಕೆ ಆಗಿಲ್ಲ ಎಂದು ದುಃಖ ತೋಡಿಕೊಂಡಿದ್ದಾರೆ.

ರಾಮು ಅವರ ಸಾವಿನ ವಿಚಾರ ಕೇಳಿ ಶಾಕ್​ನಲ್ಲಿಯೇ ಇದ್ದೇನೆ. ಮಾಲಾಶ್ರೀ ಇರಬಹುದು, ಮಕ್ಕಳು ಇರಬಹುದು ಅವರಿಗೆ ನೋವು ತಡೆದುಕೊಳ್ಳುವ ಶಕ್ತಿ ಕೊಡಲಿ ಅಂತ ದೇವರಲ್ಲಿ ಕೇಳಿಕೊಳ್ಳುತ್ತೇನೆ. ರಾಮು ಅವರು ಕೊಟ್ಟ ಎ.ಕೆ.47 ಸಿನಿಮಾ ಮೆರೆಯಲು ಆಗಲ್ಲ. ಅವರು ಹಲವು ಉತ್ತಮ ಚಿತ್ರಗಳನ್ನು ಕೊಟ್ಟರು. ನಾನು ಯಾವತ್ತೂ ಅವರ ಜೊತೆಗೆ ಸಿನಮಾ ಮಾಡಿಲ್ಲ. ಆದರೆ ನನಗೆ ಅವರು ತುಂಬಾ ಪರಿಚಯ. ನನಗೆ ತುಂಬಾ ನೋವಾಗುತ್ತಿದೆ ಎಂದು ಪುನೀತ್​ ಹೇಳಿದರು.

ರಾಮು ನಮ್ಮ ಕುಟುಂಬಕ್ಕೆ ತುಂಬಾ ಹತ್ತಿರದವರಾಗಿದ್ದರು. ನಾನು ಎಷ್ಟೋ ವರ್ಷಗಳಿಂದ ಅವರನ್ನ ನೋಡುತ್ತಾ ಇದ್ದೇನೆ. ರಾಜಕುಮಾರ ಸಿನಿಮಾ ಟೈಟಲ್ ಅವರ ಬಳಿಯೆ ಇತ್ತು. ನನಗಾಗಿ ಟೈಟಲ್​ ಬಿಟ್ಟು ಕೊಟ್ಟಿದ್ದರು ಎಂದು ಪುನೀತ್​ ಭಾವುಕರಾದರು.

ಕೊರೊನಾ ವಿಚಾರದಲ್ಲಿ ಯಾಮಾರಬೇಡಿ. ನಿಯಮಗಳನ್ನು ಪಾಲಿಸಿ. ಲಸಿಕೆ ಹಾಕಿಸಿಕೊಳ್ಳಿ. ಈಗ ಲಾಕ್​ಡೌನ್​ ಘೋಷಣೆ ಆಗಿದೆ. 14 ದಿನಗಳಲ್ಲಿ ಮತ್ತೆ ಕೆಲಸ ಮಾಡುವಂತೆ ಆಗಬೇಕು ಅಂದರೆ ನಾವು ಸರಿಯಾಗಿ ಇರಬೇಕು. ಸರ್ಕಾರ ರೂಪಿಸಿರುವ ನಿಯಮಗಳನ್ನು ಪಾಲಿಸಬೇಕು. ನಾವು ಮೊದಲು ಒಳ್ಳೇ ಮನುಷ್ಯರಾಗೋಣ. ಅಕ್ಕಪಕ್ಕದವರಿಗೆ ಸಹಾಯ ಮಾಡೋಣ ಎಂದು ಪುನೀತ್​ ಮನವಿ ಮಾಡಿದ್ದಾರೆ.

ಕೊರೊನಾದಿಂದ ರಾಮು ನಿಧನ

ರಾಮು ಅವರಿಗೆ ಕಳೆದವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಮೂರು ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಅವರಿಗೆ ವೈದ್ಯರು ನಿರಂತರವಾಗಿ ಚಿಕಿತ್ಸೆ ನೀಡುತ್ತಲೇ ಇದ್ದರು. ಆದರೆ, ಚಿಕಿತ್ಸೆ ಫಲಿಸಲಿಲ್ಲ. ಹೀಗಾಗಿ, ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಮು ಸ್ಯಾಂಡಲ್​ವುಡ್​ನಲ್ಲಿ ಖ್ಯಾತ ನಿರ್ಮಾಪಕರು. ಕನ್ನಡದಲ್ಲಿ ಅವರು ಸಾಕಷ್ಟು ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ. ಲಾಕಪ್​ಡೆತ್, AK-47, ರಾಕ್ಷಸ‌, ಕಲಾಸಿಪಾಳ್ಯ, ಅರ್ಜುನ್ ಗೌಡ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ದರು.ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಅದ್ದೂರಿ ಚಿತ್ರಗಳನ್ನು ರಾಮು ನಿರ್ಮಾಣ ಮಾಡುತ್ತಿದ್ದರು.  ಅವರು ಕೋಟಿ ರಾಮು ಎಂದೇ ಖ್ಯಾತರಾಗಿದ್ದರು.

ಇದನ್ನೂ ಓದಿ: Producer Ramu Death: ಕೊರೊನಾ ಸೋಂಕಿನಿಂದ ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ನಿಧನ

Published On - 9:18 pm, Mon, 26 April 21

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್