AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಕಣ್ಣು ನಾಲ್ವರಿಗೆ ಅಳವಡಿಕೆ; ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಾ.ಭುಜಂಗಶೆಟ್ಟಿ

ಪುನೀತ್‌ ರವರ 2 ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ ಬಂದಿದೆ. ಡಾ.ರಾಜ್‌ಕುಮಾರ್ ಅವರೂ ನೇತ್ರದಾನ ಮಾಡಿದ್ದರು.

ಪುನೀತ್ ಕಣ್ಣು ನಾಲ್ವರಿಗೆ ಅಳವಡಿಕೆ; ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಾ.ಭುಜಂಗಶೆಟ್ಟಿ
ಪುನೀತ್ ರಾಜ್​ಕುಮಾರ್
TV9 Web
| Updated By: sandhya thejappa|

Updated on:Nov 01, 2021 | 12:50 PM

Share

ಬೆಂಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನೇತ್ರದಾನ ಮಾಡಿದ್ದರು. ಅಪ್ಪು ಕಣ್ಣನ್ನು ನಾಲ್ವರಿಗೆ ಅಳವಡಿಕೆ ಮಾಡಲಾಗಿದೆ ಅಂತ ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪುನೀತ್‌ ರವರ 2 ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ ಬಂದಿದೆ. 1994 ರಲ್ಲಿ ರಾಜ್​​ಕುಮಾರ್ ಹಾಗೂ ಪಾರ್ವತಮ್ಮ ನಮ್ಮ ಆಸ್ಪತ್ರೆಯಲ್ಲಿ ನೇತ್ರದಾನ ವಿಂಗ್ ಉದ್ಘಾಟನೆ ಮಾಡಿದ್ದರು. ಡಾ.ರಾಜ್‌ಕುಮಾರ್ ಅವರೂ ನೇತ್ರದಾನ ಮಾಡಿದ್ದರು. ಈಗ ಪುನೀತ್ ಕೂಡ ನೇತ್ರದಾನ ಮಾಡಿದ್ದಾರೆ ಅಂತ ಮಾತನಾಡಿದ ಭುಜಂಗಶೆಟ್ಟಿ ರಾಜ್​ ಕುಟುಂಬಕ್ಕೆ ಧನ್ಯವಾದ ತಿಳಿಸಿದರು.

ಪುನೀತ್‌ ರಾಜ್‌ಕುಮಾರ್ ಕಣ್ಣುಗಳನ್ನು ಪಡೆದು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಶನಿವಾರ ನಾಲ್ವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸಾಮಾನ್ಯವಾಗಿ 2 ಕಣ್ಣು ಇಬ್ಬರಿಗೆ ಅಳವಡಿಸುವುದು ಸಾಮಾನ್ಯ. ಆದರೆ ಪುನೀತ್‌ರ 2 ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ ಬಂದಿದೆ. ಹೊಸ ತಂತ್ರಜ್ಞಾನದ ಮೂಲಕ ನಾಲ್ವರಿಗೆ ದೃಷ್ಟಿ ನೀಡಲಾಗಿದೆ ಎಂದು ಬೆಂಗಳೂರಿನಲ್ಲಿ ಡಾ.ಭುಜಂಗಶೆಟ್ಟಿ ಮಾಹಿತಿ ನೀಡಿದ್ದಾರೆ.

ನಾಲ್ವರು ಕನ್ನಡಿಗರಿಗೆ ಕಣ್ಣು ನೀಡಿದ ಅಪ್ಪು ಕಾರ್ನಿಯಾಗಳನ್ನ ಎರಡು ಭಾಗ ಮಾಡಲಾಗಿದೆ. ಮುಂಭಾಗದ ಕಣ್ಣು ಹಾಗೂ ಹಿಂಭಾಗದ ಆಳದ ಪದರಗಳನ್ನ ಭಾಗ ಮಾಡಲಾಗಿತ್ತು. ಯಾರಿಗೆ ಮುಂಭಾಗದ ಕಾರ್ನಿಯಾ ಹಾನಿಯಾಗಿತ್ತೋ ಅವರಿಗೆ ಮುಂಭಾಗದ ಕಾರ್ನಿಯಾ ನೀಡಲಾಗಿದೆ. ಹಿಂಭಾಗದ ಆಳದ ಪದರವನ್ನ ಬೇರೆಯವರಿಗೆ ನೀಡಲಾಗಿದೆ. ಒಟ್ಟು ನಾಲ್ಕು ಜನರಿಗೆ ಒಂದೇ ದಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಎಲ್ಲರೂ ಕರ್ನಾಟಕದವರಾಗಿದ್ದು, ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಓರ್ವ ಯುವತಿ ಹಾಗೂ ಮೂವರು ಪುರುಷರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಭುಜಂಗಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ

‘ನನ್ನ ಮಗ ಸತ್ತರೂ ಇಷ್ಟು ಬೇಜಾರು ಆಗುತ್ತಿರಲಿಲ್ಲ’; ‘ರಾಜಕುಮಾರ’ ಚಿತ್ರ ನೋಡಿ ಮಹಿಳಾ ಅಭಿಮಾನಿ ಕಣ್ಣೀರು

ಪುನೀತ್ ರಾಜ್​ಕುಮಾರ್​ ನಿಧನ ಹಿನ್ನೆಲೆ ಬೆಳಗಾವಿಯಲ್ಲಿ ಈ ಬಾರಿ ಸರಳವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Published On - 12:31 pm, Mon, 1 November 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ