AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆ ಅನ್ನಸಂತರ್ಪಣೆ ಕಾರ್ಯಕ್ರಮ ಮುಕ್ತಾಯ; ಒಟ್ಟೂ ಊಟ ಮಾಡಿದವರ ಸಂಖ್ಯೆ ಎಷ್ಟು ಗೊತ್ತಾ?

25 ಸಾವಿರ ಜನರಿಗೆ ಮಾಂಸಾಹಾರದ ವ್ಯವಸ್ಥೆ ಮಾಡಲಾಗಿತ್ತು. 5 ಸಾವಿರ ಜನರಿಗೆ ಸಸ್ಯಾಹಾರದ ವ್ಯವಸ್ಥೆ ಇಡಲಾಗಿತ್ತು. ಒಟ್ಟು 28-30 ಸಾವಿರ ಜನರು ಊಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದೊಡ್ಮನೆ ಅನ್ನಸಂತರ್ಪಣೆ ಕಾರ್ಯಕ್ರಮ ಮುಕ್ತಾಯ; ಒಟ್ಟೂ ಊಟ ಮಾಡಿದವರ ಸಂಖ್ಯೆ ಎಷ್ಟು ಗೊತ್ತಾ?
ಪುನೀತ್ ಕುಟುಂಬದಿಂದ ಅನ್ನ ಸತರ್ಪಣೆ
TV9 Web
| Edited By: |

Updated on:Nov 10, 2021 | 9:27 AM

Share

ಪುನೀತ್​ ರಾಜ್​ಕುಮಾರ್ (Puneeth Rajkumar)​ ದೊಡ್ಡ ಅಭಿಮಾನಿ ಬಳಗವನ್ನು ತೊರೆದು ಹೋಗಿದ್ದಾರೆ. ಅವರು ಸಿನಿಮಾ ಹಾಗೂ ಸಾಮಾಜಿಕ ಕೆಲಸದ ಮೂಲಕ ಜನರ ಮನದಲ್ಲಿ ಅಚ್ಚು ಮೂಡಿಸಿ ಹೋಗಿದ್ದಾರೆ. ಅವರು ಅಗಲಿ ಇಂದಿಗೆ (ನವೆಂಬರ್​ 9) 12 ದಿನಗಳಾಗಿವೆ. ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರನ ಹಮ್ಮಿಕೊಂಡಿತ್ತು. ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಈ ಕಾರ್ಯಕ್ರಮ ನಡೆದಿದೆ. ಇದಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಹಾಗಾದರೆ ಈ ಕಾರ್ಯಕ್ರಮ ಹೇಗೆ ನಡೆಯಿತು? ಆ ಬಗ್ಗೆ ಇಲ್ಲಿದೆ ಮಾಹಿತಿ.  

ಇಂದು ಅಭಿಮಾನಿಗಳು, ಗಣ್ಯರಿಗೆ ಅನ್ನಸಂತರ್ಪಣೆ ಆಯೋಜನೆ ಮಾಡಲಾಗಿತ್ತು. ಎಲ್ಲಾ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಊಟ ಸ್ವೀಕರಿಸಿದ್ದಾರೆ. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸಕಲ ವ್ಯವಸ್ಥೆ ಮಾಡಲಾಗಿತ್ತು. 2 ಸಾವಿರಕ್ಕೂ ಹೆಚ್ಚು ಚೇರ್, ಊಟದ ಟೇಬಲ್ ಹಾಕಲಾಗಿತ್ತು. ವೆಜ್​ ಮತ್ತು ನಾನ್​ವೆಜ್​ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು.

25 ಸಾವಿರ ಜನರಿಗೆ ಮಾಂಸಾಹಾರದ ಊಟದ ವ್ಯವಸ್ಥೆ ಮಾಡಲಾಗಿತ್ತು. 5 ಸಾವಿರ ಜನರಿಗೆ ಸಸ್ಯಾಹಾರದ ಊಟಕ್ಕೆ ವ್ಯವಸ್ಥೆ ಇಡಲಾಗಿತ್ತು. ಒಟ್ಟು 28-30 ಸಾವಿರ ಜನರು ಊಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಒಂದು ಸಾವಿರಕ್ಕೂ ಹೆಚ್ಚು ಬಾಣಸಿಗರಿಂದ ಅಡುಗೆ ರೆಡಿ ಮಾಡಲಾಗಿತ್ತು.  ರಾಶಿರಾಶಿ ದಿನಸಿ ತರಿಸಲಾಗಿತ್ತು.

ನಟ ಪುನೀತ್​ ರಾಜ್​ಕುಮಾರ್​ ಅವರ 11ನೇ ದಿನ ಕಾರ್ಯವನ್ನು ಸೋಮವಾರ (ನ.8) ನೆರವೇರಿಸಲಾಯಿತು. ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಅಪ್ಪು ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಆ ಬಳಿಕ ಮಾತನಾಡಿದ ಶಿವರಾಜ್​ಕುಮಾರ್​ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ‘11ನೇ ದಿನ ಅಂದುಕೊಂಡು ಇದನ್ನೆಲ್ಲ ಮಾಡುವುದೇ ನಮಗೆ ನೋವಿನ ವಿಚಾರ. ಅಪ್ಪುಗೆ ಇದೆಲ್ಲ ಮಾಡುತ್ತಿದ್ದೇವಾ? ಮಾಡಬೇಕಾ ಅಂತ ಬೆಳಗ್ಗೆ ಅಂದುಕೊಳ್ಳುತ್ತಿದ್ದೆ. ಅದರ ಬಗ್ಗೆ ಮಾತನಾಡುವುದೇ ತುಂಬ ಬೇಜಾರು ಆಗುತ್ತದೆ. ವಿಧಿ ವಿಧಾನಗಳ ಪ್ರಕಾರ ಅದೆಲ್ಲ ನಡೆಯಲೇಬೇಕು’ ಎಂದು ಶಿವಣ್ಣ ಹೇಳಿದ್ದರು.

ಇದನ್ನೂ ಓದಿ: ದಾವಣಗೆರೆ: ಪುನೀತ್ ರಾಜ್​ಕುಮಾರ್​ಗೆ ಸಂಗೀತದ ಮೂಲಕ ನುಡಿನಮನ ಸಲ್ಲಿಸಿದ ರಾಜೇಶ್ ಕೃಷ್ಣನ್

ಅಭಿಮಾನಿಗಳಿಗೆ ಪ್ರೀತಿಯಿಂದ ಊಟ ಬಡಿಸಿದ ಶಿವರಾಜ್​ಕುಮಾರ್​, ಅಶ್ವಿನಿ

Published On - 4:51 pm, Tue, 9 November 21

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ