AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆ ಅನ್ನಸಂತರ್ಪಣೆ ಕಾರ್ಯಕ್ರಮ ಮುಕ್ತಾಯ; ಒಟ್ಟೂ ಊಟ ಮಾಡಿದವರ ಸಂಖ್ಯೆ ಎಷ್ಟು ಗೊತ್ತಾ?

25 ಸಾವಿರ ಜನರಿಗೆ ಮಾಂಸಾಹಾರದ ವ್ಯವಸ್ಥೆ ಮಾಡಲಾಗಿತ್ತು. 5 ಸಾವಿರ ಜನರಿಗೆ ಸಸ್ಯಾಹಾರದ ವ್ಯವಸ್ಥೆ ಇಡಲಾಗಿತ್ತು. ಒಟ್ಟು 28-30 ಸಾವಿರ ಜನರು ಊಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದೊಡ್ಮನೆ ಅನ್ನಸಂತರ್ಪಣೆ ಕಾರ್ಯಕ್ರಮ ಮುಕ್ತಾಯ; ಒಟ್ಟೂ ಊಟ ಮಾಡಿದವರ ಸಂಖ್ಯೆ ಎಷ್ಟು ಗೊತ್ತಾ?
ಪುನೀತ್ ಕುಟುಂಬದಿಂದ ಅನ್ನ ಸತರ್ಪಣೆ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 10, 2021 | 9:27 AM

Share

ಪುನೀತ್​ ರಾಜ್​ಕುಮಾರ್ (Puneeth Rajkumar)​ ದೊಡ್ಡ ಅಭಿಮಾನಿ ಬಳಗವನ್ನು ತೊರೆದು ಹೋಗಿದ್ದಾರೆ. ಅವರು ಸಿನಿಮಾ ಹಾಗೂ ಸಾಮಾಜಿಕ ಕೆಲಸದ ಮೂಲಕ ಜನರ ಮನದಲ್ಲಿ ಅಚ್ಚು ಮೂಡಿಸಿ ಹೋಗಿದ್ದಾರೆ. ಅವರು ಅಗಲಿ ಇಂದಿಗೆ (ನವೆಂಬರ್​ 9) 12 ದಿನಗಳಾಗಿವೆ. ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರನ ಹಮ್ಮಿಕೊಂಡಿತ್ತು. ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಈ ಕಾರ್ಯಕ್ರಮ ನಡೆದಿದೆ. ಇದಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಹಾಗಾದರೆ ಈ ಕಾರ್ಯಕ್ರಮ ಹೇಗೆ ನಡೆಯಿತು? ಆ ಬಗ್ಗೆ ಇಲ್ಲಿದೆ ಮಾಹಿತಿ.  

ಇಂದು ಅಭಿಮಾನಿಗಳು, ಗಣ್ಯರಿಗೆ ಅನ್ನಸಂತರ್ಪಣೆ ಆಯೋಜನೆ ಮಾಡಲಾಗಿತ್ತು. ಎಲ್ಲಾ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಊಟ ಸ್ವೀಕರಿಸಿದ್ದಾರೆ. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸಕಲ ವ್ಯವಸ್ಥೆ ಮಾಡಲಾಗಿತ್ತು. 2 ಸಾವಿರಕ್ಕೂ ಹೆಚ್ಚು ಚೇರ್, ಊಟದ ಟೇಬಲ್ ಹಾಕಲಾಗಿತ್ತು. ವೆಜ್​ ಮತ್ತು ನಾನ್​ವೆಜ್​ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು.

25 ಸಾವಿರ ಜನರಿಗೆ ಮಾಂಸಾಹಾರದ ಊಟದ ವ್ಯವಸ್ಥೆ ಮಾಡಲಾಗಿತ್ತು. 5 ಸಾವಿರ ಜನರಿಗೆ ಸಸ್ಯಾಹಾರದ ಊಟಕ್ಕೆ ವ್ಯವಸ್ಥೆ ಇಡಲಾಗಿತ್ತು. ಒಟ್ಟು 28-30 ಸಾವಿರ ಜನರು ಊಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಒಂದು ಸಾವಿರಕ್ಕೂ ಹೆಚ್ಚು ಬಾಣಸಿಗರಿಂದ ಅಡುಗೆ ರೆಡಿ ಮಾಡಲಾಗಿತ್ತು.  ರಾಶಿರಾಶಿ ದಿನಸಿ ತರಿಸಲಾಗಿತ್ತು.

ನಟ ಪುನೀತ್​ ರಾಜ್​ಕುಮಾರ್​ ಅವರ 11ನೇ ದಿನ ಕಾರ್ಯವನ್ನು ಸೋಮವಾರ (ನ.8) ನೆರವೇರಿಸಲಾಯಿತು. ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಅಪ್ಪು ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಆ ಬಳಿಕ ಮಾತನಾಡಿದ ಶಿವರಾಜ್​ಕುಮಾರ್​ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ‘11ನೇ ದಿನ ಅಂದುಕೊಂಡು ಇದನ್ನೆಲ್ಲ ಮಾಡುವುದೇ ನಮಗೆ ನೋವಿನ ವಿಚಾರ. ಅಪ್ಪುಗೆ ಇದೆಲ್ಲ ಮಾಡುತ್ತಿದ್ದೇವಾ? ಮಾಡಬೇಕಾ ಅಂತ ಬೆಳಗ್ಗೆ ಅಂದುಕೊಳ್ಳುತ್ತಿದ್ದೆ. ಅದರ ಬಗ್ಗೆ ಮಾತನಾಡುವುದೇ ತುಂಬ ಬೇಜಾರು ಆಗುತ್ತದೆ. ವಿಧಿ ವಿಧಾನಗಳ ಪ್ರಕಾರ ಅದೆಲ್ಲ ನಡೆಯಲೇಬೇಕು’ ಎಂದು ಶಿವಣ್ಣ ಹೇಳಿದ್ದರು.

ಇದನ್ನೂ ಓದಿ: ದಾವಣಗೆರೆ: ಪುನೀತ್ ರಾಜ್​ಕುಮಾರ್​ಗೆ ಸಂಗೀತದ ಮೂಲಕ ನುಡಿನಮನ ಸಲ್ಲಿಸಿದ ರಾಜೇಶ್ ಕೃಷ್ಣನ್

ಅಭಿಮಾನಿಗಳಿಗೆ ಪ್ರೀತಿಯಿಂದ ಊಟ ಬಡಿಸಿದ ಶಿವರಾಜ್​ಕುಮಾರ್​, ಅಶ್ವಿನಿ

Published On - 4:51 pm, Tue, 9 November 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ