AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಿಯುವ ಮಳೆಯಲ್ಲಿ ಪುನೀತ್ ಫೋಟೋ​ಗೆ ಕೈ ಮುಗಿದು ಕುಳಿತ ಅಭಿಮಾನಿ; ಇಲ್ಲಿದೆ ವೈರಲ್​ ವಿಡಿಯೋ

Puneeth Rajkumar: ಪುನೀತ್​ ರಾಜ್​ಕುಮಾರ್​ ಅವರು ಅನೇಕ ಸಮಾಜಮುಖಿ ಕಾರ್ಯಗಳ ಮೂಲಕ ಜನರ ಹೃದಯಗಳಿಗೆ ಹತ್ತಿರ ಆಗಿದ್ದರು. ಆ ಕಾರಣದಿಂದ ಅವರನ್ನು ಕಂಡರೆ ಕೋಟ್ಯಂತರ ಜನರಿಗೆ ಈ ಪರಿ ಪ್ರೀತಿ-ಅಭಿಮಾನ.

ಸುರಿಯುವ ಮಳೆಯಲ್ಲಿ ಪುನೀತ್ ಫೋಟೋ​ಗೆ ಕೈ ಮುಗಿದು ಕುಳಿತ ಅಭಿಮಾನಿ; ಇಲ್ಲಿದೆ ವೈರಲ್​ ವಿಡಿಯೋ
ಸುರಿಯುವ ಮಳೆಯಲ್ಲಿ ಪುನೀತ್ ಫೋಟೋ​ಗೆ ಕೈ ಮುಗಿದು ಕುಳಿತ ಅಭಿಮಾನಿ
TV9 Web
| Updated By: ಮದನ್​ ಕುಮಾರ್​|

Updated on: Nov 20, 2021 | 11:36 AM

Share

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಮೇಲೆ ಜನರು ಇಟ್ಟ ಅಭಿಮಾನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಹೃದಯಾಘಾತದಿಂದ ಅಪ್ಪು ಅಕಾಲಿಕ ಮರಣ (Puneeth Rajkumar Death) ಹೊಂದಿದ ಬಳಿಕ ಅವರ ಕೋಟ್ಯಂತರ ಅಭಿಮಾನಿಗಳಿಗೆ ಈ ಸುದ್ದಿಯನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಪುನೀತ್​ ನಿಧನರಾಗಿ 23 ದಿನ ಕಳೆದಿದೆ. ಹಾಗಿದ್ದರೂ ಅಭಿಮಾನಿಗಳ (Puneeth Rajkumar Fans) ಎದೆಯಲ್ಲಿನ ನೋವು ಕಡಿಮೆ ಆಗಿಲ್ಲ. ಅನೇಕ ಜನರು ಬೇರೆ ಬೇರೆ ರೀತಿಯಲ್ಲಿ ತಮ್ಮ ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ. ಈಗೊಂದು ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬರು ಮಳೆಯಲ್ಲಿ ನೆನೆಯುತ್ತಿರುವ ದೃಶ್ಯ ಇದೆ. ಪುನೀತ್​ ರಾಜ್​ಕುಮಾರ್​ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಕಟ್ಟಿರುವ ಬ್ಯಾನರ್​ ಎದುರು ಸುರಿಯುವ ಮಳೆಯಲ್ಲಿ ಕೈ ಮುಗಿಯುತ್ತ ಕುಳಿತಿರುವ ಅಭಿಮಾನಿಯ ಪ್ರೀತಿ ಕಂಡು ನೆಟ್ಟಿಗರು ಅಚ್ಚರಿ ಪಡುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ಕೇವಲ ನಟನೆಗೆ ಸೀಮಿತವಾಗಿ ಇದ್ದವರಲ್ಲ. ಅನೇಕ ಸಮಾಜಮುಖಿ ಕಾರ್ಯಗಳ ಮೂಲಕ ಅವರು ಜನರ ಹೃದಯಗಳಿಗೆ ಹತ್ತಿರ ಆಗಿದ್ದರು. ಆ ಕಾರಣದಿಂದ ಅವರನ್ನು ಕಂಡರೆ ಕೋಟ್ಯಂತರ ಜನರಿಗೆ ಈ ಪರಿ ಪ್ರೀತಿ-ಅಭಿಮಾನ. ಕರ್ನಾಟಕ ಮಾತ್ರವಲ್ಲದೇ ಬೇರೆ ರಾಜ್ಯ ಮತ್ತು ರಾಷ್ಟ್ರಗಳಲ್ಲೂ ಪುನೀತ್​ ರಾಜ್​ಕುಮಾರ್​ ಅವರನ್ನು ಆರಾಧಿಸುವ ಜನರಿದ್ದಾರೆ. ಅಪ್ಪು ನಿಧನರಾದ ಬಳಿಕ ಪಾಕಿಸ್ತಾನದಲ್ಲಿರುವ ಅಭಿಮಾನಿಯೊಬ್ಬರು ಗಾನ ನಮನ ಸಲ್ಲಿಸಿ ವಿಡಿಯೋ ಮಾಡಿದ್ದೇ ಅದಕ್ಕೆ ಸಾಕ್ಷಿ.

ಪುನೀತ್​ ರಾಜ್​ಕುಮಾರ್​ ಎಂದರೆ ಎಲ್ಲ ವಯಸ್ಸಿನವರಿಗೂ ಇಷ್ಟ. ಅಪ್ಪು ಅಗಲಿಕೆಯಿಂದ ಅನೇಕ ಹಿರಿಯ ಜೀವಗಳು ಮರುಗುತ್ತಿವೆ. ಪುನೀತ್​ ಫೋಟೋ ಮುಂದೆ ಅಜ್ಜಿಯರು ಕಣ್ಣೀರು ಹಾಕುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ಬಸ್​ ನಿಲ್ದಾಣದಲ್ಲಿ ಇದೇ ರೀತಿಯ ಒಂದು ಘಟನೆ ಇತ್ತೀಚೆಗೆ ನಡೆದಿತ್ತು. ಬಸ್​ ಮೇಲೆ ಅಂಟಿಸಿದ್ದ ಜಾಹೀರಾತಿನಲ್ಲಿ ಇರುವ ಪುನೀತ್ ಫೋಟೋಗೆ ವೃದ್ಧೆಯೊಬ್ಬರು ಮುತ್ತಿಟ್ಟು ಕಂಬನಿ ಸುರಿಸಿದ್ದರು.

ಪುನೀತ್​ ಭಾವಚಿತ್ರಕ್ಕೆ ಅಜ್ಜಿ ಮುತ್ತಿಟ್ಟು ಕಣ್ಣೀರು ಹಾಕುತ್ತಿರುವ ಆ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆ ಆಗಿತ್ತು. ಅದು ಕೂಡ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಪುನೀತ್​ ಅವರನ್ನು ತಮ್ಮ ಮನೆ ಮಗ ಎಂದೇ ಭಾವಿಸಿದ್ದ ಇಂಥ ಹೃದಯಗಳಿಗೆ ಆಗಿರುವ ಆಘಾತವನ್ನು ಪದಗಳಲ್ಲಿ ವಿವರಿಸಲು ಆಗದು. ಅಪ್ಪು ಸಮಾಧಿಗೆ ಪ್ರತಿ ದಿನ ಸಾವಿರಾರು ಜನರು ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ:

ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಡಾ. ರಾಜ್​-ಪುನೀತ್​ ಜೀವನ ಚರಿತ್ರೆ; ಇಲ್ಲಿದೆ ಅಭಿಮಾನಿಗಳಿಗೆ ಸಿಹಿ ಸುದ್ದಿ

ಮೈತುಂಬ ಅಪ್ಪು ಚಿತ್ರ, 300 ಕಿಮೀ ಸೈಕಲ್​ ಸವಾರಿ; ಪುನೀತ್​ ಸಮಾಧಿಗೆ ಅಪರೂಪದ ಅಭಿಮಾನಿ ಭೇಟಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ