AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲಾವಿದರನ್ನು ಕಲಾವಿದರಾಗಿರೋಕೆ ಬಿಡಿ’; ‘ಅಪ್ಪು ದೇವರ ಮಾಲೆ’ ಬಗ್ಗೆ ನಟ ಪ್ರಥಮ್ ಅಸಮಾಧಾನ

Puneeth Rajkumar: ಪುನೀತ್ ರಾಜ್​ಕುಮಾರ್ ಅವರನ್ನು ಅಭಿಮಾನಿಗಳು ಅಕ್ಷರಶಃ ಆರಾಧಿಸುತ್ತಿದ್ದಾರೆ. ಅಪ್ಪು ನಿಧನ ಹೊಂದಿದ ನಂತರದಲ್ಲಿ ಅನೇಕರು ದೇವರ ಕೋಣೆಯಲ್ಲಿ ಅವರ ಫೋಟೋ ಇಟ್ಟು ಪೂಜೆ ಮಾಡಿದ ಉದಾಹರಣೆ ಇದೆ. ಈಗ ಅವರು ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.

‘ಕಲಾವಿದರನ್ನು ಕಲಾವಿದರಾಗಿರೋಕೆ ಬಿಡಿ’; ‘ಅಪ್ಪು ದೇವರ ಮಾಲೆ’ ಬಗ್ಗೆ ನಟ ಪ್ರಥಮ್ ಅಸಮಾಧಾನ
ಪ್ರಥಮ್-ಪುನೀತ್
ರಾಜೇಶ್ ದುಗ್ಗುಮನೆ
|

Updated on:Feb 24, 2023 | 7:19 AM

Share

‘ಅಪ್ಪು ದೇವರ ಮಾಲೆ’ ಆಚರಣೆಯನ್ನು ಜಾರಿಗೆ ತರುವ ವಿಚಾರವನ್ನು ಪುನೀತ್ ರಾಜ್​ಕುಮಾರ್ (Puneeth Rajkumar) ಅಭಿಮಾನಿಗಳು ಇತ್ತೀಚೆಗೆ ಘೋಷಿಸಿದ್ದರು. ಅಯ್ಯಪ್ಪನ ಹೆಸರಲ್ಲಿ ಮಾಲೆ ಹಾಕಿಕೊಂಡಂತೆ ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಮಾಲೆ ಹಾಕಿಕೊಳ್ಳಲಾಗುತ್ತಿದೆ. ಮಾಲೆ ಹಾಕಿಕೊಂಡವರು ಹಲವು ಬಗೆಯ ಕಟ್ಟುನಿಟ್ಟಿನ ನಿಯಮ ಪಾಲಿಸಬೇಕು. ಮಾರ್ಚ್​1ರಿಂದ ಆರಂಭ ಆಗುವ ಈ ಆಚರಣೆ ಪುನೀತ್ ರಾಜ್​ಕುಮಾರ್ ಜನ್ಮದಿನ ಮಾರ್ಚ್​ 17ಕ್ಕೆ ಕೊನೆಗೊಳ್ಳಲಿದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡಲಾಗುತ್ತಿದೆ. ಒಳ್ಳೆ ಹುಡುಗ ಪ್ರಥಮ್ ಕೂಡ ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ. ‘ಕಲಾವಿದರನ್ನು ಕಲಾವಿದರಾಗಿರೋಕೆ ಬಿಡಿ’ ಎಂದು ಕೋರಿದ್ದಾರೆ.

ಪುನೀತ್​ನ ಆರಾಧಿಸುತ್ತಿರುವ ಅಭಿಮಾನಿಗಳು

ಪುನೀತ್ ರಾಜ್​ಕುಮಾರ್ ಅವರನ್ನು ಅಭಿಮಾನಿಗಳು ಅಕ್ಷರಶಃ ಆರಾಧಿಸುತ್ತಿದ್ದಾರೆ. ಅಪ್ಪು ನಿಧನ ಹೊಂದಿದ ನಂತರದಲ್ಲಿ ಅನೇಕರು ದೇವರ ಕೋಣೆಯಲ್ಲಿ ಅವರ ಫೋಟೋ ಇಟ್ಟು ಪೂಜೆ ಮಾಡಿದ ಉದಾಹರಣೆ ಇದೆ. ಈಗ ಅವರು ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಹೊಸಪೇಟೆಯಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪ್ರತಿಮೆ ಇದೆ. ಹೊಸಪೇಟೆಯ ಅಪ್ಪು ಅಭಿಮಾನಿಗಳ ಸಂಘದವರು ಈ ಮಾಲೆ ಧರಿಸುತ್ತಿದ್ದಾರೆ. ಮಾರ್ಚ್​ 1ರಿಂದ ಅಭಿಮಾನಿಗಳು ಮಾಲೆ ಹಾಕಬಹುದು. ಮಾರ್ಚ್​ 17ರ ತನಕ ವ್ರತ ಆಚರಿಸಬೇಕು. ಮಾರ್ಚ್​ 18ರಂದು ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಬೇಕು. ಇದಕ್ಕೆ ಸಂಬಂಧಿಸಿದ ಕರಪತ್ರ ಒಂದು ವೈರಲ್ ಆಗಿತ್ತು. ಇದನ್ನು ಕೆಲವರು ವಿರೋಧಿಸಿದ್ದಾರೆ.

ಇದನ್ನೂ ಓದಿ
Image
Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​
Image
ಹೊಸಪೇಟೆ ಪುನೀತ್ ಪುತ್ಥಳಿಗೆ ವಿನಯ್ ರಾಜ್​ಕುಮಾರ್ ಮಾಲಾರ್ಪಣೆ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’; ಸಚಿವ ಸುನೀಲ್ ಕುಮಾರ್ ಮನವಿ ಪುರಸ್ಕರಿಸಿದ ಸಿಎಂ ಬೊಮ್ಮಾಯಿ

ಪ್ರಥಮ್ ಹೇಳಿದ್ದೇನು?

‘ದೇವರ ಮೇಲೆ ಭಕ್ತಿ ಇರಲಿ. ಕಲಾವಿದರ ಮೇಲೆ ಪ್ರೀತಿ, ಅಭಿಮಾನವಿರಲಿ. ಶಬರಿಮಲೆಗೆ ಹೋಗೋದು ಅಯ್ಯಪ್ಪನಲ್ಲಿ ಶರಣಾಗೋಕೆ. ಬಹಳ ಶಿಸ್ತುಗಳನ್ನು ಪಾಲಿಸಿ ಶ್ರದ್ಧಾಭಕ್ತಿಗಳಿಂದ ಮಾಲೆ ಧಾರಣೆ ಮಾಡಬೇಕು. ಕಲಾವಿದರನ್ನ ಕಲಾವಿದರಾಗಿರೋಕೆ ಬಿಡಿ. ಧಾರ್ಮಿಕ ನಂಬಿಕೆಗಳಲ್ಲಿ ಯಾರೂ ಅತೀರೇಕದ ವರ್ತನೆ ತೋರಬಾರದು. ದೇವರು-ದೇವರೇ, ಕಲಾವಿದರು-ಕಲಾವಿದರೇ’ ಎಂದು ಪ್ರಥಮ್ ಅವರು ಬರೆದುಕೊಂಡಿದ್ದಾರೆ.

ಇದನ್ನು ಅನೇಕರು ಬೆಂಬಲಿಸಿದ್ದಾರೆ. ಇನ್ನೂ ಕೆಲವರು ಅಪ್ಪು ನಮಗೆ ದೇವರೇ ಎಂದಿದ್ದಾರೆ. ‘ಹಸಿದಾಗ ಅನ್ನ ಹಾಕಿದಾವನೇ ದೇವರು. ಕಷ್ಟ ಅಂತ ಬಂದಾಗ ಸಹಾಯ ಮಾಡುವನೇ ದೇವರು. ಈ ಕೆಲಸ ಅಪ್ಪು ಅವರು ಮಾಡಿದ್ದಾರೆ. ಅದಕ್ಕೆ ಜನರು ದೇವರು ತರ ಪೂಜೆ ಮಾಡುತ್ತಾ ಇದ್ದಾರೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:17 am, Fri, 24 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ