AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಸಿ ಮಾರಿಕಾಂಬೆ ರಥದ ಬಳಿ ತಲುಪಿತು ಅಪ್ಪು ಫೋಟೋ; ಜಾತ್ರೆಯಲ್ಲಿ ಅಭಿಮಾನ ಮೆರೆದ ಪುನೀತ್​ ಫ್ಯಾನ್ಸ್​

ಶಿರಸಿ ಜಾತ್ರೆಗೆ ಬಂದ ಅಪ್ಪು ಅಭಿಮಾನಿಗಳು ಪುನೀತ್​ ರಾಜ್​ಕುಮಾರ್​ ಫೋಟೋ ಜೊತೆಗೆ ದೇವರಿಗೆ ನಮಸ್ಕರಿಸಿದ್ದಾರೆ. ಮಾರಿಕಾಂಬೆಯ ರಥದ ಬಳಿ ಸಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಶಿರಸಿ ಮಾರಿಕಾಂಬೆ ರಥದ ಬಳಿ ತಲುಪಿತು ಅಪ್ಪು ಫೋಟೋ; ಜಾತ್ರೆಯಲ್ಲಿ ಅಭಿಮಾನ ಮೆರೆದ ಪುನೀತ್​ ಫ್ಯಾನ್ಸ್​
ಶಿರಸಿ ಮಾರಿಕಾಂಬಾ ಜಾತ್ರೆ
TV9 Web
| Edited By: |

Updated on: Mar 17, 2022 | 12:06 PM

Share

ಈಗ ಎಲ್ಲೆಲ್ಲೂ ಪುನೀತ್​ ರಾಜ್​ಕುಮಾರ್​ ಅವರಿಗೆ ಜೈಕಾರ ಕೇಳಿಸುತ್ತಿದೆ. ಈ ಪರಿ ಅಭಿಮಾನದ ಹೊಳೆ ಹರಿಯುತ್ತಿರುವುದನ್ನು ನೋಡಿದರೆ ಅಪ್ಪು ಇಲ್ಲ ಎಂದು ಒಪ್ಪಿಕೊಳ್ಳಲು ಸಾಧ್ಯವಾಗುವುದೇ ಇಲ್ಲ. ಪ್ರತಿಯೊಬ್ಬ ಅಭಿಮಾನಿಯ ಎದೆಯಲ್ಲೂ ಪುನೀತ್​ ರಾಜ್​ಕುಮಾರ್​ ಅವರು ಜೀವಂತವಾಗಿದ್ದಾರೆ. ಸಿನಿಮಾ ಮಾತ್ರವಲ್ಲದೇ ಅನೇಕ ಜನಪರ ಕಾರ್ಯಗಳನ್ನು ಮಾಡಿದ್ದ ಅವರಿಗೆ ಜನರು ದೇವರ ಸ್ಥಾನ ನೀಡಿದ್ದಾರೆ. ಹಾಗಾಗಿ ಹಲವು ಜಾತ್ರೆ, ಉತ್ಸವಗಳಲ್ಲಿ ಅಪ್ಪು ಫೋಟೋ ರಾರಾಜಿಸುತ್ತಿದೆ. ಈಗ ಶಿರಸಿಯ ಮಾರಿಕಾಂಬಾ ಜಾತ್ರೆಯಲ್ಲೂ (Sirsi Marikamba Jatre) ಇಂಥ ಘಟನೆ ನಡೆದಿದೆ. ಪುನೀತ್​ ರಾಜ್​ಕುಮಾರ್​ ಅವರ ಭಾವಚಿತ್ರವು ಮಾರಿಕಾಂಬೆಯ ರಥದ ಬಳಿ ತಲುಪಿದೆ. ಲಕ್ಷಾಂತರ ಜನರು ಶಿರಸಿ ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು (Puneeth Rajkumar Fans) ತಮ್ಮ ನೆಚ್ಚಿನ ನಟನ ಫೋಟೋ ಹಿಡಿದುಕೊಂಡು ಜಾತ್ರೆಗೆ ಬಂದಿದ್ದಾರೆ. ತಮ್ಮ ಪಾಲಿಗೆ ದೇವರ ಸಮಾನವಾಗಿ ಇರುವ ಅವರನ್ನು ಫ್ಯಾನ್ಸ್​ ಆರಾಧಿಸುತ್ತಿದ್ದಾರೆ. ಶಿರಸಿ ಜಾತ್ರೆಯಲ್ಲಿ ಪುನೀತ್​ ರಾಜ್​ಕುಮಾರ್​ ಫೋಟೋವನ್ನು (Puneeth Rajkumar Photo) ಹಿಡಿದು ಬಂದ ಅಭಿಮಾನಿಗಳ ವಿಡಿಯೋ ಈಗ ವೈರಲ್​ ಆಗಿದೆ. ಸದ್ಯ ಪುನೀತ್​ ಹೀರೋ ಆಗಿ ನಟಿಸಿದ ಕೊನೇ ಸಿನಿಮಾ ‘ಜೇಮ್ಸ್​’ ಬಿಡುಗಡೆ ಆಗಿದೆ. ಆ ಸಂಭ್ರದಲ್ಲಿಯೂ ಕೂಡ ಅಭಿಮಾನಿಗಳಿದ್ದಾರೆ. ನೆಚ್ಚಿನ ನಟನನ್ನು ಎಲ್ಲರೂ ಸಖತ್​ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ಕನ್ನಡದ ಭಾವುಟ ಮತ್ತು ಪುನೀತ್​ ರಾಜ್​ಕುಮಾರ್ ಅವರ ಭಾವಚಿತ್ರವನ್ನು ಹಿಡಿದ ಅಭಿಮಾನಿಗಳು ಶಿರಸಿ ಮಾರಿಕಾಂಬೆ ಜಾತ್ರೆಗೆ ಬಂದಿದ್ದಾರೆ. ಜನಜಗುಳಿಯ ನಡುವೆ ಈ ಫೋಟೋ ಹೈಲೈಟ್​ ಆಗಿದೆ. ಫೋಟೋ ಹಿಡಿದಿದ್ದ ಅಭಿಮಾನಿಯನ್ನು ದೂರದಿಂದಲೇ ಗಮನಿಸಿದ ಎಲ್ಲರೂ ಅವರಿಗೆ ದಾರಿ ಮಾಡಿಕೊಟ್ಟಿದ್ದಾರೆ. ನಂತರ ಮಾರಿಕಾಂಬೆಯ ರಥದ ಬಳಿ ಸಾಗಿದ ಆ ಅಭಿಮಾನಿಯು ಅಪ್ಪು ಫೋಟೋ ಜೊತೆಗೆ ದೇವರಿಗೆ ನಮಸ್ಕರಿಸಿದ್ದಾರೆ. ಈ ರೀತಿಯಲ್ಲಿ ಪುನೀತ್​ ರಾಜ್​ಕುಮಾರ್​ ಮೇಲಿನ ತಮ್ಮ ಅಭಿಮಾನವನ್ನು ಜನರು ಪ್ರದರ್ಶಿಸಿದ್ದಾರೆ.

ಇಂಥ ಹಲವು ಘಟನೆಗಳನ್ನು ಕರುನಾಡಿನಾದ್ಯಂತ ನಡೆದಿದೆ. ಕೇವಲ ಸಿನಿಮಾ ನಟ ಆಗಿದ್ದರೆ ಪುನೀತ್​ ರಾಜ್​ಕುಮಾರ್​​ ಅವರಿಗೆ ಈ ಪರಿ ಅಭಿಮಾನಿಗಳು ಇರುತ್ತಿದ್ದರೋ ಇಲ್ಲವೋ ಗೊತ್ತಿಲ್ಲ. ಆದರೆ ಸಾಮಾಜಿಕ ಕಾರ್ಯಗಳ ಮೂಲಕ ಅವರು ಅಭಿಮಾನಿಗಳ ಎದೆಯಲ್ಲಿ ದೇವರ ಸ್ಥಾನ ಪಡೆದುಕೊಂಡರು. ತಾವು ಸಂಪಾದಿಸಿದ ಹಣದಲ್ಲಿ ಅವರು ಅನೇಕ ಜನರಿಗೆ ನೆರವಾಗಿದ್ದರು. ಆದರೆ ಎಂದಿಗೂ ಅದನ್ನು ಪ್ರಚಾರಕ್ಕಾಗಿ ಹೇಳಿಕೊಳ್ಳಲಿಲ್ಲ. ಈ ಎಲ್ಲ ಗುಣಗಳಿಂದಾಗಿ ಪುನೀತ್​ ಅವರು ಜನರ ಹೃದಯ ಗೆದ್ದಿದ್ದರು. ಇಂದು ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದೇ ಇರಬಹುದು. ಆದರೆ ಇಂಥ ಘಟನೆಗಳನ್ನು ನೋಡಿದಾಗಿ ‘ಅಪ್ಪು ಅಮರ’ ಎಂಬ ಮಾತು ಪದೇಪದೇ ಸಾಬೀತಾಗುತ್ತದೆ.

ಹಲವು ಕಡೆಗಳಲ್ಲಿ ಪುನೀತ್​ಗೆ ದೇವಸ್ಥಾನ ಕಟ್ಟಿದ್ದಾರೆ. ಪುನೀತ್​ ಅವರ ಪ್ರತಿಭೆ, ಪುತ್ಥಳಿ ನಿರ್ಮಿಸಿ ನಮಿಸುತ್ತಿದ್ದಾರೆ. ಅನೇಜ ರಸ್ತೆ, ವೃತ್ತ, ಪಾರ್ಕ್​ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪುನೀತ್​ ರಾಜ್​ಕುಮಾರ್​ ಅವರ ಹೆಸರು ಇಡಲಾಗಿದೆ. ಅಪ್ಪು ಹೆಸರಿನಲ್ಲಿ ನೂರಾರು ಸಮಾಜಮುಖಿ ಕೆಲಸಗಳು ನಡೆಯುತ್ತಿವೆ. ಈ ಹಿಂದೆ ಅಯ್ಯಪ್ಪ ಸ್ವಾಮಿಯ ಅನೇಕ ಭಕ್ತರು ಪುನೀತ್​ ರಾಜ್​ಕುಮಾರ್ ಅವರ ಫೋಟೋ ಹಿಡಿದು ಶಬರಿಮಲೆ ಯಾತ್ರೆ ಮಾಡಿದ್ದರು. ಇರುಮುಡಿಯ ಜೊತೆಗೆ ಪುನೀತ್ ಅವರ​ ಫೋಟೋವನ್ನೂ ಹೊತ್ತುಕೊಂಡು ಅಯ್ಯಪ್ಪನ ದೇವಾಲಯದ 18 ಮೆಟ್ಟಿಲುಗಳನ್ನು ಭಕ್ತರು ಏರಿದ್ದರು. ಅನೇಕ ದಂಪತಿಗಳು ತಮ್ಮ ಮಕ್ಕಳಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಿ ಅಭಿಮಾನ ಮೆರೆದಿದ್ದಾರೆ. ಇಂಥ ಹಲವು ನಿದರ್ಶನಗಳು ಆಗಾಗ ಕಾಣಿಸುತ್ತಲೇ ಇವೆ.

ಇದನ್ನೂ ಓದಿ:

‘ಜೇಮ್ಸ್​’ ಚಿತ್ರದ ಆ ಒಂದು ಸೀನ್​ ನೋಡಿ ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿ; ಪುನೀತ್​ ಮೇಲಿನ ಅಭಿಮಾನ​ ಶಾಶ್ವತ

‘ಕನ್ನಡದ ಕೋಟ್ಯಧಿಪತಿ’ಯಿಂದ ಪುನೀತ್​ಗೆ ಸಿಕ್ಕ ಸಂಭಾವನೆ ಎಷ್ಟು ಕೋಟಿ? ಆ ದುಡ್ಡಲ್ಲಿ ಆಗ್ತಿದೆ ಪುಣ್ಯದ ಕೆಲಸ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?