‘ಯುವರತ್ನ ವಿರುದ್ಧ ಸರ್ಕಾರದ ವ್ಯವಸ್ಥಿತ ಸಂಚು’; ಪುನೀತ್ ಫ್ಯಾನ್ಸ್ ಆರೋಪ! ವಾಣಿಜ್ಯ ಮಂಡಳಿಗೆ ಮುತ್ತಿಗೆ

ಪುನೀತ್ ರಾಜ್​ಕುಮಾರ್ ಅಭಿಮಾನಿ ಸಂಘಗಳ ನೂರಾರು ಸದಸ್ಯರು ವಾಣಿಜ್ಯ ಮಂಡಳಿ ಕಟ್ಟಡದ ಎದುರು ಜಮಾಯಿಸಿದ್ದು, ಸರ್ಕಾರದ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದಾರೆ. ಉದ್ದೇಶಪೂರ್ವಕಾಗಿಯೇ ಯುವರತ್ನ ಚಿತ್ರಕ್ಕೆ ಈ ರೀತಿ ಮಾಡಲಾಗಿದೆ ಎಂದು ಅಭಿಮಾನಿಗಳು ಹೇಳಿದ್ದಾರೆ.

'ಯುವರತ್ನ ವಿರುದ್ಧ ಸರ್ಕಾರದ ವ್ಯವಸ್ಥಿತ ಸಂಚು'; ಪುನೀತ್ ಫ್ಯಾನ್ಸ್ ಆರೋಪ! ವಾಣಿಜ್ಯ ಮಂಡಳಿಗೆ ಮುತ್ತಿಗೆ
ಪುನೀತ್​ ರಾಜ್​ಕುಮಾರ್ - ಯುವರತ್ನ
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 03, 2021 | 3:10 PM

ಕೊರೊನಾ ವೈರಸ್ ಎರಡನೇ ಅಲೆ ಜೋರಾಗಿರುವ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ನಿಯಮಗಳು ಕನ್ನಡ ಚಿತ್ರರಂಗಕ್ಕೆ ಮುಳುವಾಗಿವೆ. ಚಿತ್ರಮಂದಿರಗಳಲ್ಲಿ ಕೇವಲ ಶೇ.50ರಷ್ಟು ಆಸನಗಳನ್ನು ಮಾತ್ರ ಭರ್ತಿ ಮಾಡಬೇಕು ಎಂಬ ನಿಯಮದಿಂದಾಗಿ ಪುನೀತ್ ರಾಜ್​ಕುಮಾರ್ ನಟನೆಯ ‘ಯುವರತ್ನ’ ಚಿತ್ರಕ್ಕೆ ತೊಂದರೆ ಆಗಿದೆ. ಅದನ್ನು ಪುನೀತ್ ಅಭಿಮಾನಿಗಳು ತೀವ್ರವಾಗಿ ಖಂಡಿಸುತ್ತಿದ್ದಾರೆ. ರಾಜ್ಯ ಸರ್ಕಾರ ಹೊಸ ನಿಯಮ ಘೋಷಿಸುತ್ತಿದ್ದಂತೆಯೇ ರಾಜ್ಯಾದ್ಯಂತ ಇರುವ ಅಪ್ಪು ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ಚಿತ್ರರಂಗಕ್ಕೆ ಎದುರಾಗಿರುವ ಈ ಹೊಸ ಬಿಕ್ಕಟ್ಟಿನ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಪ್ರಮುಖರ ಸಭೆ ನಡೆಸಲಾಗಿದೆ. ಮಂಡಳಿ ಅಧ್ಯಕ್ಷ ಜೈರಾಜ್, ಸಾ.ರಾ. ಗೋವಿಂದು, ಉಮೇಶ್ ಬಣಕಾರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ವಾಣಿಜ್ಯ ಮಂಡಳಿಗೆ ಮುತ್ತಿಗೆ ಹಾಕಿದ್ದಾರೆ. ಸರ್ಕಾರದ ಕ್ರಮವನ್ನು ಖಂಡಿಸಿ ಆಕ್ರೋಶ ಹೊರಹಾಕಿದ್ದಾರೆ.

ಪುನೀತ್ ರಾಜ್​ಕುಮಾರ್ ಅಭಿಮಾನಿ ಸಂಘಗಳ ನೂರಾರು ಸದಸ್ಯರು ವಾಣಿಜ್ಯ ಮಂಡಳಿ ಕಟ್ಟಡದ ಎದುರು ಜಮಾಯಿಸಿದ್ದು, ಸರ್ಕಾರದ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದಾರೆ. ಉದ್ದೇಶಪೂರ್ವಕಾಗಿಯೇ ಯುವರತ್ನ ಚಿತ್ರಕ್ಕೆ ಈ ರೀತಿ ಮಾಡಲಾಗಿದೆ ಎಂದು ಅಭಿಮಾನಿಗಳು ಹೇಳಿದ್ದಾರೆ. ‘ವ್ಯವಸ್ಥಿತವಾಗಿ ಸರ್ಕಾರ ಸಂಚು ರೂಪಿಸುತ್ತಿದೆ. ಅಭಿಮಾನಿಗಳಿಗೆ ಏನೇ ಆದರೂ ಅದಕ್ಕೆ ಸರ್ಕಾರವೇ ಕಾರಣ ಎಂದು ಸುಧಾಕರ್ ಅವರಿಗೆ ಎಚ್ಚರಿಕೆ ನೀಡುತ್ತೇವೆ’ ಎಂದು ಅಪ್ಪು ಫ್ಯಾನ್ಸ್ ಗುಡುಗಿದ್ದಾರೆ.

ಸರ್ಕಾರದ ಈ ಕ್ರಮದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಅಭಿಮಾನಿಗಳು ಎಚ್ಚರಿಕೆ ನೀಡಿರುವ ಅಭಿಮಾನಿಗಳು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಪುನೀತ್ ರಾಜ್​ಕುಮಾರ್ ಅವರು 50 ಲಕ್ಷ ರೂ. ದೇಣಿಗೆ ನೀಡಿದ್ದರು. ಅದನ್ನು ಸರ್ಕಾರ ಮರೆತಿದೆ ಎಂಬುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿದೆ.

‘ಹಲವು ಅಭಿಮಾನಿ ಸಂಘಗಳಿಂದ ಮನವಿ ಬಂದಿದೆ. ಮಾಧ್ಯಮಗಳ ಮೂಲಕ ನಾವು ಮುಖ್ಯಮಂತ್ರಿಗಳಲ್ಲಿ ಮತ್ತು ಸಚಿವ ಸುಧಾಕರ್ ಅವರಲ್ಲಿ ಮನವಿ ಮಾಡಿಕೊಂಡಿದ್ದೇವೆ. ಶೇ.50 ಮಾಡಿದರೆ ನಮಗೆ ಏನೂ ಅಭ್ಯಂತರ ಇಲ್ಲ. ಆದರೆ ಏಕಾಏಕಿ ತೆಗೆದುಕೊಂಡ ನಿರ್ಧಾರ ಸರಿಯೇ ಎಂದು ಪ್ರಶ್ನೆ ಮಾಡುತ್ತಿದ್ದೇವೆ. ಹಾಗಾಗಿ ಕೂಡಲೇ ಈ ಹೊಸ ನಿಯಮ ರದ್ದು ಮಾಡಿ, ಮತ್ತೆ ಆ ಸಿನಿಮಾ ಶೇ.100 ಆಕ್ಯುಪೆನ್ಸಿಯಲ್ಲಿ ಪ್ರದರ್ಶನ ಕಾಣಬೇಕು’ ಎಂದು ಸಾ.ರಾ. ಗೋವಿಂದು ಹೇಳಿದ್ದಾರೆ.

ಇದನ್ನೂ ಓದಿ: Yuvarathnaa: ‘ಪುನೀತ್​ ರಾಜ್​ಕುಮಾರ್​ಗೆ ಯಾಕೆ ಇಂಥ ಅನ್ಯಾಯ?’ ಸರ್ಕಾರದ ವಿರುದ್ಧ ಸಿಡಿದೆದ್ದ ಅಪ್ಪು ಫ್ಯಾನ್ಸ್​!

Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?

(Puneeth Rajkumar fans lay siege to Karnataka Film Chamber and express anger over Government for 50 percent occupancy rules)

ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ