AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಯುವರತ್ನ’ ಸಿನಿಮಾದಲ್ಲಿ ಡಿಲೀಟ್​ ಆದ​ ದೃಶ್ಯಗಳು ಈಗ ರಿಲೀಸ್​ ಆಗುತ್ತಾ?​ ಇಲ್ಲಿದೆ ನಿರ್ದೇಶಕರ ಪ್ರತಿಕ್ರಿಯೆ

Yuvarathnaa: ಹಬ್ಬದ ಸಂದರ್ಭದಲ್ಲಿ ಸ್ಟಾರ್​ ನಟರ ಸಿನಿಮಾಗಳ ಹೊಸ ಪೋಸ್ಟರ್​, ಟೀಸರ್​ ಅಥವಾ ಟ್ರೇಲರ್​ಗಳು ಬಿಡುಗಡೆ ಆಗುವುದು ಸಹಜ. ಆದರೆ ಪುನೀತ್​ ರಾಜ್​ಕುಮಾರ್​ ನಿಧನದಿಂದಾಗಿ ಈ ಬಾರಿ ದೀಪಾವಳಿ ಹಬ್ಬದಲ್ಲಿ ಸ್ಯಾಂಡಲ್​ವುಡ್​ಗೆ ಕತ್ತಲು ಕವಿದಿದೆ.

Puneeth Rajkumar: ‘ಯುವರತ್ನ’ ಸಿನಿಮಾದಲ್ಲಿ ಡಿಲೀಟ್​ ಆದ​ ದೃಶ್ಯಗಳು ಈಗ ರಿಲೀಸ್​ ಆಗುತ್ತಾ?​ ಇಲ್ಲಿದೆ ನಿರ್ದೇಶಕರ ಪ್ರತಿಕ್ರಿಯೆ
ಸಂತೋಷ್​ ಆನಂದ್​ರಾಮ್​, ಪುನೀತ್​ ರಾಜ್​ಕುಮಾರ್​
TV9 Web
| Updated By: ಮದನ್​ ಕುಮಾರ್​|

Updated on: Nov 06, 2021 | 7:57 PM

Share

ಪುನೀತ್​ ರಾಜ್​ಕುಮಾರ್​ ಅವರನ್ನು ಅಭಿಮಾನಿಗಳು ತುಂಬಾ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಅವರ ಸಿನಿಮಾಗಳನ್ನು ಮತ್ತೆ ಮತ್ತೆ ನೋಡಲಾಗುತ್ತಿದೆ. ಅಪ್ಪು ನಟನೆಯ ಹಾಡುಗಳು, ದೃಶ್ಯಗಳು ಎಲ್ಲರ ವಾಟ್ಸಾಪ್​ ಸ್ಟೇಟಸ್​ಗಳಲ್ಲಿ ರಾರಾಜಿಸುತ್ತಿವೆ. ಈಗ ‘ಪವರ್​ ಸ್ಟಾರ್​’ ಅಭಿಮಾನಿಗಳಿಂದ ಹೊಸದೊಂದು ಬೇಡಿಕೆ ಕೇಳಿಬಂದಿದೆ. ಪುನೀತ್​ ಬದುಕಿದ್ದಾಗ ರಿಲೀಸ್​ ಆದ ಅವರ ಕೊನೇ ಸಿನಿಮಾ ‘ಯುವರತ್ನ’. ಆ ಸಿನಿಮಾ ನೋಡಿ ಅಭಿಮಾನಿಗಳು ಸಖತ್​ ಇಷ್ಟಪಟ್ಟಿದ್ದರು. ‘ಯುವರತ್ನ’ ಚಿತ್ರದ ಮೂಲಕ ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಅವರು ಯುವಜನತೆಗೆ ಒಳ್ಳೆಯ ಸಂದೇಶ ನೀಡಿದ್ದರು. ಆ ಸಿನಿಮಾದ ಡಿಲೀಟೆಡ್​ ದೃಶ್ಯಗಳನ್ನು ಬಿಡುಗಡೆ ಮಾಡುವಂತೆ ಫ್ಯಾನ್ಸ್​ ಮನವಿ ಮಾಡಿಕೊಳ್ಳುತ್ತಿದ್ದಾರೆ.

‘ದಯವಿಟ್ಟು ಯುವರತ್ನ ಸಿನಿಮಾದ ಡಿಲೀಡೆಟ್​ ದೃಶ್ಯಗಳನ್ನಾದರೂ ಬಿಡುಗಡೆ ಮಾಡಿ ಸರ್​. ಇದು ಎಲ್ಲ ‘ಪವರ್​ ಸ್ಟಾರ್​’ ಅಭಿಮಾನಿಗಳ ಮನವಿ. ಪ್ಲೀಸ್​ ಸರ್​’ ಎಂದು ಅಭಿಮಾನಿಗಳು ಟ್ವಿಟರ್​​ನಲ್ಲಿ ಸಂತೋಷ್​ ಆನಂದ್​ರಾಮ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕರು, ‘ಶೀಘ್ರದಲ್ಲೇ ಅಪ್​ಡೇಟ್​ ತಿಳಿಸುತ್ತೇನೆ’ ಎಂದು ಟ್ವೀಟ್​ ಮಾಡಿದ್ದಾರೆ. ಅದಕ್ಕಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಮತ್ತು ಸಂತೋಷ್​ ಆನಂದ್​ರಾಮ್​ ಅವರದ್ದು ಕನ್ನಡ ಚಿತ್ರರಂಗದಲ್ಲಿ ಹಿಟ್​ ಕಾಂಬಿನೇಷನ್​. ಇಬ್ಬರು ಮೊದಲ ಬಾರಿಗೆ ಜೊತೆಯಾಗಿ ಮಾಡಿದ ‘ರಾಜಕುಮಾರ’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಈ ವರ್ಷ ಏಪ್ರಿಲ್​ 1ರಂದು ಬಿಡುಗಡೆಯಾದ ‘ಯುವರತ್ನ’ ಚಿತ್ರ ಕೂಡ ಅಭಿಮಾನಿಗಳಿಗೆ ಇಷ್ಟವಾಗಿತ್ತು.

ಪ್ರತಿ ಹಬ್ಬದ ಸಂದರ್ಭದಲ್ಲಿ ಸ್ಟಾರ್​ ನಟರ ಸಿನಿಮಾಗಳ ಹೊಸ ಪೋಸ್ಟರ್​, ಟೀಸರ್​ ಅಥವಾ ಟ್ರೇಲರ್​ಗಳು ಬಿಡುಗಡೆ ಆಗುವುದು ಸಹಜ. ಆದರೆ ಈ ದೀಪಾವಳಿ ಹಬ್ಬದಲ್ಲಿ ಸ್ಯಾಂಡಲ್​ವುಡ್​ಗೆ ಕತ್ತಲು ಕವಿದಿದೆ. ಪುನೀತ್​ ನಿಧನದಿಂದ ಚಿತ್ರರಂಗದಲ್ಲಿ ಸೂತಕದ ಛಾಯೆ ಆವರಿಸಿದೆ. ಕೆಲವು ಸಿನಿಮಾಗಳ ಬಿಡುಗಡೆ ದಿನಾಂಕ ಕೂಡ ಮುಂದೂಡಲ್ಪಟ್ಟಿದೆ.

ಪುನೀತ್​ ರಾಜ್​ಕುಮಾರ್​ ಇಹಲೋಕ ತ್ಯಜಿಸಿ ಒಂದು ವಾರ ಕಳೆದಿದೆ. ಕುಟುಂಬದವರು ಅಪ್ಪು ಸಮಾಧಿಗೆ ಹಾಲು-ತುಪ್ಪ ಅರ್ಪಿಸಿದ ಬಳಿಕ ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಪ್ರತಿ ದಿನ 20 ಸಾವಿರಕ್ಕೂ ಅಧಿಕ ಮಂದಿ ಕಂಠೀರವ ಸ್ಟುಡಿಯೋ ಆವರಣಕ್ಕೆ ಆಗಮಿಸಿ ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ.

ನಿಧನರಾಗುವುದಕ್ಕೂ ಮುನ್ನ ಹಲವು ಪ್ರಾಜೆಕ್ಟ್​ಗಳಲ್ಲಿ ಪುನೀತ್​ ಬ್ಯುಸಿ ಆಗಿದ್ದರು. ಚೇತನ್​ಕುಮಾರ್​ ನಿರ್ದೇಶನದ ‘ಜೇಮ್ಸ್​’, ಪವನ್​ ಕುಮಾರ್​ ನಿರ್ದೇಶನ ‘ದ್ವಿತ್ವ’ ಚಿತ್ರಗಳಲ್ಲಿ ಪುನೀತ್​ ನಟಿಸುತ್ತಿದ್ದರು. ‘ಜೇಮ್ಸ್​’ ಶೂಟಿಂಗ್​ ಬಹುತೇಕ ಮುಗಿದಿದ್ದು, 2022ರ ಮಾ.17ರಂದು ಪುನೀತ್​ ರಾಜ್​ಕುಮಾರ್​ ಜನ್ಮದಿನದ ಪ್ರಯುಕ್ತ ಬಿಡುಗಡೆ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ:

Puneeth Rajkumar: ‘ಪುನೀತ್​ ಅತಿಯಾಗಿ ಜಿಮ್​ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ

Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್