AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಯುವರತ್ನ’ ಸಿನಿಮಾದಲ್ಲಿ ಡಿಲೀಟ್​ ಆದ​ ದೃಶ್ಯಗಳು ಈಗ ರಿಲೀಸ್​ ಆಗುತ್ತಾ?​ ಇಲ್ಲಿದೆ ನಿರ್ದೇಶಕರ ಪ್ರತಿಕ್ರಿಯೆ

Yuvarathnaa: ಹಬ್ಬದ ಸಂದರ್ಭದಲ್ಲಿ ಸ್ಟಾರ್​ ನಟರ ಸಿನಿಮಾಗಳ ಹೊಸ ಪೋಸ್ಟರ್​, ಟೀಸರ್​ ಅಥವಾ ಟ್ರೇಲರ್​ಗಳು ಬಿಡುಗಡೆ ಆಗುವುದು ಸಹಜ. ಆದರೆ ಪುನೀತ್​ ರಾಜ್​ಕುಮಾರ್​ ನಿಧನದಿಂದಾಗಿ ಈ ಬಾರಿ ದೀಪಾವಳಿ ಹಬ್ಬದಲ್ಲಿ ಸ್ಯಾಂಡಲ್​ವುಡ್​ಗೆ ಕತ್ತಲು ಕವಿದಿದೆ.

Puneeth Rajkumar: ‘ಯುವರತ್ನ’ ಸಿನಿಮಾದಲ್ಲಿ ಡಿಲೀಟ್​ ಆದ​ ದೃಶ್ಯಗಳು ಈಗ ರಿಲೀಸ್​ ಆಗುತ್ತಾ?​ ಇಲ್ಲಿದೆ ನಿರ್ದೇಶಕರ ಪ್ರತಿಕ್ರಿಯೆ
ಸಂತೋಷ್​ ಆನಂದ್​ರಾಮ್​, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Nov 06, 2021 | 7:57 PM

Share

ಪುನೀತ್​ ರಾಜ್​ಕುಮಾರ್​ ಅವರನ್ನು ಅಭಿಮಾನಿಗಳು ತುಂಬಾ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಅವರ ಸಿನಿಮಾಗಳನ್ನು ಮತ್ತೆ ಮತ್ತೆ ನೋಡಲಾಗುತ್ತಿದೆ. ಅಪ್ಪು ನಟನೆಯ ಹಾಡುಗಳು, ದೃಶ್ಯಗಳು ಎಲ್ಲರ ವಾಟ್ಸಾಪ್​ ಸ್ಟೇಟಸ್​ಗಳಲ್ಲಿ ರಾರಾಜಿಸುತ್ತಿವೆ. ಈಗ ‘ಪವರ್​ ಸ್ಟಾರ್​’ ಅಭಿಮಾನಿಗಳಿಂದ ಹೊಸದೊಂದು ಬೇಡಿಕೆ ಕೇಳಿಬಂದಿದೆ. ಪುನೀತ್​ ಬದುಕಿದ್ದಾಗ ರಿಲೀಸ್​ ಆದ ಅವರ ಕೊನೇ ಸಿನಿಮಾ ‘ಯುವರತ್ನ’. ಆ ಸಿನಿಮಾ ನೋಡಿ ಅಭಿಮಾನಿಗಳು ಸಖತ್​ ಇಷ್ಟಪಟ್ಟಿದ್ದರು. ‘ಯುವರತ್ನ’ ಚಿತ್ರದ ಮೂಲಕ ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಅವರು ಯುವಜನತೆಗೆ ಒಳ್ಳೆಯ ಸಂದೇಶ ನೀಡಿದ್ದರು. ಆ ಸಿನಿಮಾದ ಡಿಲೀಟೆಡ್​ ದೃಶ್ಯಗಳನ್ನು ಬಿಡುಗಡೆ ಮಾಡುವಂತೆ ಫ್ಯಾನ್ಸ್​ ಮನವಿ ಮಾಡಿಕೊಳ್ಳುತ್ತಿದ್ದಾರೆ.

‘ದಯವಿಟ್ಟು ಯುವರತ್ನ ಸಿನಿಮಾದ ಡಿಲೀಡೆಟ್​ ದೃಶ್ಯಗಳನ್ನಾದರೂ ಬಿಡುಗಡೆ ಮಾಡಿ ಸರ್​. ಇದು ಎಲ್ಲ ‘ಪವರ್​ ಸ್ಟಾರ್​’ ಅಭಿಮಾನಿಗಳ ಮನವಿ. ಪ್ಲೀಸ್​ ಸರ್​’ ಎಂದು ಅಭಿಮಾನಿಗಳು ಟ್ವಿಟರ್​​ನಲ್ಲಿ ಸಂತೋಷ್​ ಆನಂದ್​ರಾಮ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕರು, ‘ಶೀಘ್ರದಲ್ಲೇ ಅಪ್​ಡೇಟ್​ ತಿಳಿಸುತ್ತೇನೆ’ ಎಂದು ಟ್ವೀಟ್​ ಮಾಡಿದ್ದಾರೆ. ಅದಕ್ಕಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಮತ್ತು ಸಂತೋಷ್​ ಆನಂದ್​ರಾಮ್​ ಅವರದ್ದು ಕನ್ನಡ ಚಿತ್ರರಂಗದಲ್ಲಿ ಹಿಟ್​ ಕಾಂಬಿನೇಷನ್​. ಇಬ್ಬರು ಮೊದಲ ಬಾರಿಗೆ ಜೊತೆಯಾಗಿ ಮಾಡಿದ ‘ರಾಜಕುಮಾರ’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಈ ವರ್ಷ ಏಪ್ರಿಲ್​ 1ರಂದು ಬಿಡುಗಡೆಯಾದ ‘ಯುವರತ್ನ’ ಚಿತ್ರ ಕೂಡ ಅಭಿಮಾನಿಗಳಿಗೆ ಇಷ್ಟವಾಗಿತ್ತು.

ಪ್ರತಿ ಹಬ್ಬದ ಸಂದರ್ಭದಲ್ಲಿ ಸ್ಟಾರ್​ ನಟರ ಸಿನಿಮಾಗಳ ಹೊಸ ಪೋಸ್ಟರ್​, ಟೀಸರ್​ ಅಥವಾ ಟ್ರೇಲರ್​ಗಳು ಬಿಡುಗಡೆ ಆಗುವುದು ಸಹಜ. ಆದರೆ ಈ ದೀಪಾವಳಿ ಹಬ್ಬದಲ್ಲಿ ಸ್ಯಾಂಡಲ್​ವುಡ್​ಗೆ ಕತ್ತಲು ಕವಿದಿದೆ. ಪುನೀತ್​ ನಿಧನದಿಂದ ಚಿತ್ರರಂಗದಲ್ಲಿ ಸೂತಕದ ಛಾಯೆ ಆವರಿಸಿದೆ. ಕೆಲವು ಸಿನಿಮಾಗಳ ಬಿಡುಗಡೆ ದಿನಾಂಕ ಕೂಡ ಮುಂದೂಡಲ್ಪಟ್ಟಿದೆ.

ಪುನೀತ್​ ರಾಜ್​ಕುಮಾರ್​ ಇಹಲೋಕ ತ್ಯಜಿಸಿ ಒಂದು ವಾರ ಕಳೆದಿದೆ. ಕುಟುಂಬದವರು ಅಪ್ಪು ಸಮಾಧಿಗೆ ಹಾಲು-ತುಪ್ಪ ಅರ್ಪಿಸಿದ ಬಳಿಕ ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಪ್ರತಿ ದಿನ 20 ಸಾವಿರಕ್ಕೂ ಅಧಿಕ ಮಂದಿ ಕಂಠೀರವ ಸ್ಟುಡಿಯೋ ಆವರಣಕ್ಕೆ ಆಗಮಿಸಿ ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ.

ನಿಧನರಾಗುವುದಕ್ಕೂ ಮುನ್ನ ಹಲವು ಪ್ರಾಜೆಕ್ಟ್​ಗಳಲ್ಲಿ ಪುನೀತ್​ ಬ್ಯುಸಿ ಆಗಿದ್ದರು. ಚೇತನ್​ಕುಮಾರ್​ ನಿರ್ದೇಶನದ ‘ಜೇಮ್ಸ್​’, ಪವನ್​ ಕುಮಾರ್​ ನಿರ್ದೇಶನ ‘ದ್ವಿತ್ವ’ ಚಿತ್ರಗಳಲ್ಲಿ ಪುನೀತ್​ ನಟಿಸುತ್ತಿದ್ದರು. ‘ಜೇಮ್ಸ್​’ ಶೂಟಿಂಗ್​ ಬಹುತೇಕ ಮುಗಿದಿದ್ದು, 2022ರ ಮಾ.17ರಂದು ಪುನೀತ್​ ರಾಜ್​ಕುಮಾರ್​ ಜನ್ಮದಿನದ ಪ್ರಯುಕ್ತ ಬಿಡುಗಡೆ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ:

Puneeth Rajkumar: ‘ಪುನೀತ್​ ಅತಿಯಾಗಿ ಜಿಮ್​ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ

Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ