AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ ಭಾವಚಿತ್ರ ಹಿಡಿದುಕೊಂಡು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು

Puneeth Rajkumar: ಅಯ್ಯಪ್ಪ ಸ್ವಾಮಿ ಭಕ್ತರು ಪುನೀತ್​ ರಾಜ್​ಕುಮಾರ್​ ಅವರ ಫೋಟೋವನ್ನು ತಲೆ ಮೇಲೆ ಹೊತ್ತುಕೊಂಡು ಶಬರಿಮಲೆ ಯಾತ್ರೆ ಮಾಡಿದ್ದಾರೆ. 18 ಮೆಟ್ಟಿಲುಗಳನ್ನು ಹತ್ತುವಾಗಲು ಇರುಮುಡಿ ಜೊತೆ ಅಪ್ಪು ಭಾವಚಿತ್ರವನ್ನು ಹಿಡಿದುಕೊಂಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಭಾವಚಿತ್ರ ಹಿಡಿದುಕೊಂಡು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು
ಪುನೀತ್​ ರಾಜ್​ಕುಮಾರ್​ ಅವರ ಫೋಟೋವನ್ನು ತಲೆ ಮೇಲೆ ಹೊತ್ತುಕೊಂಡು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು
TV9 Web
| Edited By: |

Updated on:Dec 13, 2021 | 11:54 AM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಅಭಿಮಾನಿಗಳು ಹಲವು ರೀತಿಯಲ್ಲಿ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಫಿಟ್ನೆಸ್​ ಬಗ್ಗೆ ಅಷ್ಟೆಲ್ಲ ಕಾಳಜಿ ವಹಿಸುತ್ತಿದ್ದ ನಟ ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾದರು ಎಂಬ ಸತ್ಯವನ್ನು ಒಪ್ಪಿಕೊಳ್ಳಲು ಇಂದಿಗೂ ಸಾಧ್ಯವಾಗುತ್ತಿಲ್ಲ. ಅವರ ಅಭಿಮಾನಿಗಳು ಬೇರೆ ಬೇರೆ ಬಗೆಯಲ್ಲಿ ಅಭಿಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ವಿಶೇಷ ಏನೆಂದರೆ, ಅನೇಕರು ಪುನೀತ್​ ರಾಜ್​ಕುಮಾರ್​ ಅವರ ಭಾವ ಚಿತ್ರವನ್ನು ಹಿಡಿದುಕೊಂಡು ಶಬರಿಮಲೆ ಯಾತ್ರೆ ( Sabarimala Yathra) ಮಾಡುತ್ತಿದ್ದಾರೆ. ಆ ಮೂಲಕ ಪುನೀತ್​ ರಾಜ್​ಕುಮಾರ್​ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಯ್ಯಪ್ಪ ಸ್ವಾಮಿ (Ayyappa Swamy) ಬಳಿ ಬೇಡಿಕೊಳ್ಳುತ್ತಿದ್ದಾರೆ. ಜನರು ತೋರಿಸುವ ಈ ಪರಿ ಅಭಿಮಾನ ಕಂಡಾಗಲೆಲ್ಲ ಪುನೀತ್​ ನೆನಪು ಮತ್ತೆ ಮತ್ತೆ ಕಾಡುತ್ತದೆ.

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕೃಷ್ಣಪುರ ಗ್ರಾಮದ ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆ ಯಾತ್ರೆಗೆ ತೆರಳಿದ್ದಾರೆ. ಈ ವೇಳೆ ಇರುಮುಡಿಯ ಜತೆ ಪುನೀತ್​ ರಾಜ್​ಕುಮಾರ್​ ಅವರ ಫೋಟೋವನ್ನು ಹಿಡಿದು ಸಾಗಿದ್ದಾರೆ. ಒಟ್ಟು 49 ಮಂದಿ ಅಯ್ಯಪ್ಪ ಭಕ್ತರು ಯಾತ್ರೆಗೆ ತೆರಳಿದ್ದು, ತಾವು ಪ್ರಯಾಣಿಸುವ ಮಿನಿ ಬಸ್​ಗೂ ಅಪ್ಪು ಭಾವ ಚಿತ್ರ ಕಟ್ಟಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ಫೋಟೋವನ್ನು ತಲೆ ಮೇಲೆ ಭಕ್ತಿಭಾವದಿಂದ ಹೊತ್ತುಕೊಂಡು ಪಂಪಾದಿಂದ ಯಾತ್ರೆ ಮಾಡಿದ್ದಾರೆ. 18 ಮೆಟ್ಟಿಲುಗಳನ್ನು ಹತ್ತುವಾಗಲು ಇರುಮುಡಿ ಜೊತೆ ಅಪ್ಪು ಭಾವಚಿತ್ರವನ್ನು ಹಿಡಿದುಕೊಂಡಿದ್ದಾರೆ.

ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರು ಅಯ್ಯಪ್ಪ ಸ್ವಾಮಿಯ ಪರಮಭಕ್ತರು. ಇದನ್ನು ಅವರು ಅನೇಕ ಬಾರಿ ಹೇಳಿಕೊಂಡಿದ್ದಿದೆ. ಪುನೀತ್​ ರಾಜ್​ಕುಮಾರ್​ ಅವರು ಸಹ ಮಾಲೆ ಧರಿಸಿ ಅನೇಕ ಬಾರಿ ಶಬರಿಮಲೆಗೆ ತೆರಳಿದ್ದರು. ಈಗ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ​ ಫೋಟೋ ತೆಗೆದುಕೊಂಡು ಹೋಗಿ ದೇವರ ದರ್ಶನ ಮಾಡಿಬರುತ್ತಿರುವುದು ವಿಶೇಷ.

ಇದನ್ನೂ ಓದಿ:

‘ನನ್ನ ಉಸಿರು ಇರೋವರೆಗೆ ಪುನೀತ್​ ಫೋನ್​​ ನಂಬರ್​ ಡಿಲೀಟ್​ ಮಾಡಲ್ಲ’: ಜೋಗಿ ಪ್ರೇಮ್​ ಭಾವುಕ ಮಾತು

ಯಾವ ಸ್ಥಿತಿಯಲ್ಲಿದೆ ನೋಡಿ ಡಾ. ರಾಜ್​ ಬೆಳೆದ ಮನೆ; ಇದರ ಬಗ್ಗೆ ಪುನೀತ್​ ಕಂಡಿದ್ದರು ಕನಸು

Published On - 8:16 am, Mon, 13 December 21

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!