AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ ಭಾವಚಿತ್ರ ಹಿಡಿದುಕೊಂಡು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು

Puneeth Rajkumar: ಅಯ್ಯಪ್ಪ ಸ್ವಾಮಿ ಭಕ್ತರು ಪುನೀತ್​ ರಾಜ್​ಕುಮಾರ್​ ಅವರ ಫೋಟೋವನ್ನು ತಲೆ ಮೇಲೆ ಹೊತ್ತುಕೊಂಡು ಶಬರಿಮಲೆ ಯಾತ್ರೆ ಮಾಡಿದ್ದಾರೆ. 18 ಮೆಟ್ಟಿಲುಗಳನ್ನು ಹತ್ತುವಾಗಲು ಇರುಮುಡಿ ಜೊತೆ ಅಪ್ಪು ಭಾವಚಿತ್ರವನ್ನು ಹಿಡಿದುಕೊಂಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಭಾವಚಿತ್ರ ಹಿಡಿದುಕೊಂಡು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು
ಪುನೀತ್​ ರಾಜ್​ಕುಮಾರ್​ ಅವರ ಫೋಟೋವನ್ನು ತಲೆ ಮೇಲೆ ಹೊತ್ತುಕೊಂಡು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು
TV9 Web
| Edited By: |

Updated on:Dec 13, 2021 | 11:54 AM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಅಭಿಮಾನಿಗಳು ಹಲವು ರೀತಿಯಲ್ಲಿ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಫಿಟ್ನೆಸ್​ ಬಗ್ಗೆ ಅಷ್ಟೆಲ್ಲ ಕಾಳಜಿ ವಹಿಸುತ್ತಿದ್ದ ನಟ ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾದರು ಎಂಬ ಸತ್ಯವನ್ನು ಒಪ್ಪಿಕೊಳ್ಳಲು ಇಂದಿಗೂ ಸಾಧ್ಯವಾಗುತ್ತಿಲ್ಲ. ಅವರ ಅಭಿಮಾನಿಗಳು ಬೇರೆ ಬೇರೆ ಬಗೆಯಲ್ಲಿ ಅಭಿಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ವಿಶೇಷ ಏನೆಂದರೆ, ಅನೇಕರು ಪುನೀತ್​ ರಾಜ್​ಕುಮಾರ್​ ಅವರ ಭಾವ ಚಿತ್ರವನ್ನು ಹಿಡಿದುಕೊಂಡು ಶಬರಿಮಲೆ ಯಾತ್ರೆ ( Sabarimala Yathra) ಮಾಡುತ್ತಿದ್ದಾರೆ. ಆ ಮೂಲಕ ಪುನೀತ್​ ರಾಜ್​ಕುಮಾರ್​ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಯ್ಯಪ್ಪ ಸ್ವಾಮಿ (Ayyappa Swamy) ಬಳಿ ಬೇಡಿಕೊಳ್ಳುತ್ತಿದ್ದಾರೆ. ಜನರು ತೋರಿಸುವ ಈ ಪರಿ ಅಭಿಮಾನ ಕಂಡಾಗಲೆಲ್ಲ ಪುನೀತ್​ ನೆನಪು ಮತ್ತೆ ಮತ್ತೆ ಕಾಡುತ್ತದೆ.

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕೃಷ್ಣಪುರ ಗ್ರಾಮದ ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆ ಯಾತ್ರೆಗೆ ತೆರಳಿದ್ದಾರೆ. ಈ ವೇಳೆ ಇರುಮುಡಿಯ ಜತೆ ಪುನೀತ್​ ರಾಜ್​ಕುಮಾರ್​ ಅವರ ಫೋಟೋವನ್ನು ಹಿಡಿದು ಸಾಗಿದ್ದಾರೆ. ಒಟ್ಟು 49 ಮಂದಿ ಅಯ್ಯಪ್ಪ ಭಕ್ತರು ಯಾತ್ರೆಗೆ ತೆರಳಿದ್ದು, ತಾವು ಪ್ರಯಾಣಿಸುವ ಮಿನಿ ಬಸ್​ಗೂ ಅಪ್ಪು ಭಾವ ಚಿತ್ರ ಕಟ್ಟಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ಫೋಟೋವನ್ನು ತಲೆ ಮೇಲೆ ಭಕ್ತಿಭಾವದಿಂದ ಹೊತ್ತುಕೊಂಡು ಪಂಪಾದಿಂದ ಯಾತ್ರೆ ಮಾಡಿದ್ದಾರೆ. 18 ಮೆಟ್ಟಿಲುಗಳನ್ನು ಹತ್ತುವಾಗಲು ಇರುಮುಡಿ ಜೊತೆ ಅಪ್ಪು ಭಾವಚಿತ್ರವನ್ನು ಹಿಡಿದುಕೊಂಡಿದ್ದಾರೆ.

ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರು ಅಯ್ಯಪ್ಪ ಸ್ವಾಮಿಯ ಪರಮಭಕ್ತರು. ಇದನ್ನು ಅವರು ಅನೇಕ ಬಾರಿ ಹೇಳಿಕೊಂಡಿದ್ದಿದೆ. ಪುನೀತ್​ ರಾಜ್​ಕುಮಾರ್​ ಅವರು ಸಹ ಮಾಲೆ ಧರಿಸಿ ಅನೇಕ ಬಾರಿ ಶಬರಿಮಲೆಗೆ ತೆರಳಿದ್ದರು. ಈಗ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ​ ಫೋಟೋ ತೆಗೆದುಕೊಂಡು ಹೋಗಿ ದೇವರ ದರ್ಶನ ಮಾಡಿಬರುತ್ತಿರುವುದು ವಿಶೇಷ.

ಇದನ್ನೂ ಓದಿ:

‘ನನ್ನ ಉಸಿರು ಇರೋವರೆಗೆ ಪುನೀತ್​ ಫೋನ್​​ ನಂಬರ್​ ಡಿಲೀಟ್​ ಮಾಡಲ್ಲ’: ಜೋಗಿ ಪ್ರೇಮ್​ ಭಾವುಕ ಮಾತು

ಯಾವ ಸ್ಥಿತಿಯಲ್ಲಿದೆ ನೋಡಿ ಡಾ. ರಾಜ್​ ಬೆಳೆದ ಮನೆ; ಇದರ ಬಗ್ಗೆ ಪುನೀತ್​ ಕಂಡಿದ್ದರು ಕನಸು

Published On - 8:16 am, Mon, 13 December 21

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?