AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರ ಪುನೀತ್​ ಅಂತ್ಯಕ್ರಿಯೆ ಎಷ್ಟು ಗಂಟೆಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಕುಟುಂಬಸ್ಥರು ಮತ್ತು ಅವರ ಆಪ್ತ ವಲಯಕ್ಕೆ ಮಾತ್ರ ಇಲ್ಲಿಗೆ ಕಂಠೀರವ ಸ್ಟುಡಿಯೋದಲ್ಲಿ ಅವಕಾಶ ಇದೆ. ಅಭಿಮಾನಿಗಳಿಗೆ ಕಂಠೀರವ ಸ್ಟುಡಿಯೋದ ಒಳಗಡೆಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.

ಭಾನುವಾರ ಪುನೀತ್​ ಅಂತ್ಯಕ್ರಿಯೆ ಎಷ್ಟು ಗಂಟೆಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಪುನೀತ್​ ರಾಜ್​ಕುಮಾರ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 30, 2021 | 7:50 PM

Share

ಪುನೀತ್​ ರಾಜ್​ಕುಮಾರ್​ ಅವರ ಅಂತಿಮ ದರ್ಶನ ಪಡೆಯೋಕೆ ಅಭಿಮಾನಿಗಳು ತಂಡೋಪ ತಂಡವಾಗಿ ಬರುತ್ತಿದ್ದಾರೆ. ನಗುಮುಖ ಹೊತ್ತು ಎಲ್ಲ ಕಡೆಗಳಲ್ಲೂ ತಿರುಗಾಡುತ್ತಿದ್ದ ಅವರು ಈಗ ಇಲ್ಲ ಎನ್ನುವ ವಿಚಾರವನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಆರಂಭದಲ್ಲಿ ಇಂದು (ಅಕ್ಟೋಬರ್​ 30) ಸಂಜೆಯೇ ಅವರ ಅಂತ್ಯಕ್ರಿಯೆ ಮಾಡೋಕೆ ನಿರ್ಧರಿಸಲಾಗಿತ್ತು. ಆದರೆ, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಭಾನುವಾರ (ಅಕ್ಟೋಬರ್​ 31) ಅವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ.

ನಾಳೆ ಬೆಳಗ್ಗೆ 10.30ರೊಳಗೆ ನಟ ಪುನೀತ್ ಅಂತ್ಯಕ್ರಿಯೆ ನೆರವರೇರಲಿದೆ. ಬೆಳಗ್ಗೆ 6 ಗಂಟೆಗೆ ಕಂಠೀರವ ಸ್ಟೇಡಿಯಂನಿಂದ ಅಂತಿಮಯಾತ್ರೆ ಆರಂಭವಾಗಲಿದೆ ಎಂದು ತಿಳಿದು ಬಂದಿದೆ. ಕಂಠೀರವ ಸ್ಟುಡಿಯೋದಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಪ್ಪ-ಅಮ್ಮನ ಪಕ್ಕದಲ್ಲೇ ಪುನೀತ್​ ಮಣ್ಣಾಗಲಿದ್ದಾರೆ. ಕುಟುಂಬಸ್ಥರು ಮತ್ತು ಅವರ ಆಪ್ತ ವಲಯಕ್ಕೆ ಮಾತ್ರ ಇಲ್ಲಿಗೆ ತೆರಳಲು ಅವಕಾಶ ಇದೆ. ಅಭಿಮಾನಿಗಳಿಗೆ ಕಂಠೀರವ ಸ್ಟುಡಿಯೋದ ಒಳಗಡೆಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.

ಪುನೀತ್‌ ಅಣ್ಣ ರಾಘವೇಂದ್ರ ರಾಜ್ ಕುಮಾರ್‌ ಪುತ್ರ ವಿನಯ್ ರಾಜ್​ಕುಮಾರ್ ಅಂತಿಮ ಕಾರ್ಯ ನೆರವೇರಿಸಲಿದ್ದಾರೆ. ರಾಜ್​ಕುಮಾರ್ ಕುಟುಂಬ ಸದಸ್ಯರು ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದು, ಸಕಲ ಸಿದ್ಧತೆ ನಡೆಸಿದ್ದಾರೆ. ಪುನೀತ್‌ ರಾಜ್​ಕುಮಾರ್‌ ಅವರಿಗೆ ಇಬ್ಬರೂ ಹೆಣ್ಣು ಮಕ್ಕಳು. ಹಿಂದೂ ಧರ್ಮದ ಪ್ರಕಾರ ಹೆಣ್ಣುಮಕ್ಕಳು ಅಂತಿಮ ಸಂಸ್ಕಾರ ಮಾಡುವಂತಿಲ್ಲ. ಹೀಗಾಗಿ, ವಿನಯ್ ರಾಜ್​ಕುಮಾರ್ ಅವರಿಂದ ಕೊನೆಯ ಕಾರ್ಯಗಳು ನೆರವೇರಲಿದೆ.

ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಧೃತಿಗೆ ತಂದೆ ಪುನೀತ್​ ರಾಜ್​ಕುಮಾರ್​ ಮೃತಪಟ್ಟಿರುವ ವಿಚಾರ ನಿಜಕ್ಕೂ ಶಾಕಿಂಗ್​ ಆಗಿದೆ. ತಂದೆ ಮೃತಪಟ್ಟ ಸುದ್ದಿ ಕೇಳುತ್ತಲೇ ಅವರು ವಿಮಾನ ಏರಿ ಬೆಂಗಳೂರಿಗೆ ಬಂದಿದ್ದಾರೆ. 24 ಗಂಟೆಗೂ ಅಧಿಕ ಕಾಲ ಪ್ರಯಾಣ ಬೆಳೆಸಿ ಬೆಂಗಳೂರು ತಲುಪಿದ್ದಾರೆ. ವಿಮಾನ ನಿಲ್ದಾಣದಿಂದ ಅವರು ನೇರವಾಗಿ ಕಂಠೀರವ ಸ್ಟೇಡಿಯಂ ತಲುಪಿದರು. ಅಪ್ಪನ ತಲೆ ಸವರಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ದೊಡ್ಡಪ್ಪ ಶಿವರಾಜ್​ಕುಮಾರ್​ ಅವರು ಧೃತಿಯನ್ನು ಸಂತೈಸುವ ಪ್ರಯತ್ನ ಮಾಡಿದರು.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

ಅಪ್ಪನ ಅಂತಿಮ ದರ್ಶನ ಪಡೆದ ಧೃತಿ; ಪುನೀತ್​ ತಲೆ ಸವರಿ ಬಿಕ್ಕಿಬಿಕ್ಕಿ ಅತ್ತ ಮಗಳು

ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ಪರಿಸ್ಥಿತಿಯ ಲಾಭ ಪಡೆಯಲು ಸುಲಿಗೆಗಿಳಿದ ಖಾಸಗಿ ಸಾರಿಗೆ ಸಂಸ್ಥೆಗಳು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಚಾಮುಂಡೇಶ್ವರಿ ತಾಯಿಯೇ ಕರೆಸಿಕೊಳ್ಳುತ್ತಿದ್ದಾಳೆ: ಟೀಕೆಗಳಿಗೆ ಬಾನು ಟಾಂಗ್
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಪ್ರವಾಹದಿಂದ ಕೊಚ್ಚಿ ಹೋದ ಮನಾಲಿ ರಸ್ತೆ; ನದಿಯಲ್ಲಿ ಉರುಳಿ ಬಿದ್ದ ಕಾರು
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಮಟ್ಟಣ್ಣನವರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು: ದೂರುದಾರ
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಕಳ್ಳರ ಕೈಯಲ್ಲಿ ಪಿಸ್ಟಲ್ ಕಂಡ ಮಾಲೀಕ ಪ್ಯಾನಿಕ್ ಆಗದೆ ಕಿರುಚಿದರು
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ಬಾನು ಮುಷ್ತಾಕ್ ಕನ್ನಡದ ಬಗ್ಗೆ ಯಾವತ್ತೂ ಕೆಟ್ಟದ್ದಾಗಿ ಮಾತಾಡಿಲ್ಲ: ಸಚಿವ
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ನಸುಕಿನ ಜಾವ 5 ಗಂಟೆಗೆ SIT ಕಚೇರಿಗೆ ಬಂದು ಕುಳಿತ ಸುಜಾತಾ ಭಟ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ದಶಕಗಳಿಂದ ಕಾಂಗ್ರೆಸ್​ನಲ್ಲಿರುವ ನನ್ನ ಮೇಲೆ ಜವಾಬ್ದಾರಿ ಹೆಚ್ಚು: ಪ್ರಸಾದ್
ಯಾವ ನೈತಿಕತೆಯೊಂದಿಗೆ ಯತ್ನಾಳ್ ಮಾತಾಡುತ್ತಾರೆ? ಶಿವರಾಜ್ ತಂಗಡಿಗಿ
ಯಾವ ನೈತಿಕತೆಯೊಂದಿಗೆ ಯತ್ನಾಳ್ ಮಾತಾಡುತ್ತಾರೆ? ಶಿವರಾಜ್ ತಂಗಡಿಗಿ