AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆನ್ಸಾರ್ ಪ್ರಕ್ರಿಯೆ ಮುಗಿಸಿದ ‘ಜೇಮ್ಸ್’​; ಪುನೀತ್​ ಸಿನಿಮಾಗೆ ಯಾವ ಪ್ರಮಾಣಪತ್ರ?

‘ಜೇಮ್ಸ್​’ ಸಿನಿಮಾದಲ್ಲಿ ಪುನೀತ್​ ಪಾತ್ರಕ್ಕೆ ಅವರ ಸಹೋದರ ಶಿವರಾಜ್​ಕುಮಾರ್ ಡಬ್​ ಮಾಡಿದ್ದಾರೆ. ಟೀಸರ್​ನಲ್ಲಿ ಇದರ ಝಲಕ್​ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸಲು ಚಿತ್ರತಂಡ ನಿರ್ಧರಿಸಿದೆ.

ಸೆನ್ಸಾರ್ ಪ್ರಕ್ರಿಯೆ ಮುಗಿಸಿದ ‘ಜೇಮ್ಸ್’​; ಪುನೀತ್​ ಸಿನಿಮಾಗೆ ಯಾವ ಪ್ರಮಾಣಪತ್ರ?
ಪುನೀತ್
TV9 Web
| Edited By: |

Updated on: Mar 05, 2022 | 7:12 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ನಟನೆಯ ‘ಜೇಮ್ಸ್​’ ಸಿನಿಮಾ (James Movie) ದೊಡ್ಡ ಮಟ್ಟದ ನಿರೀಕ್ಷೆ ಮೂಡಿಸಿದೆ. ಹೀರೋ ಆಗಿ ಪುನೀತ್​ ನಟಿಸಿದ ಕೊನೆಯ ಸಿನಿಮಾ ಇದು. ಈಗಾಗಲೇ ಟೀಸರ್​ ಹಾಗೂ ಹಾಡಿನ ಮೂಲಕ ಈ ಚಿತ್ರ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಪುನೀತ್​ ಜನ್ಮದಿನ (Puneeth Rajkumar Birthday)ಹಿನ್ನೆಲೆಯಲ್ಲಿ ಮಾರ್ಚ್​ 17ರಂದು ಸಿನಿಮಾ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲು ‘ಜೇಮ್ಸ್​’ ಸಿನಿಮಾ ಸೆನ್ಸಾರ್​ ಪ್ರಕ್ರಿಯೆಯನ್ನು ಮುಗಿಸಿದೆ. ಯಾವುದೇ ಕಟ್​ ಇಲ್ಲದೆ ಚಿತ್ರ ಸೆನ್ಸಾರ್​ ಪ್ರಕ್ರಿಯೆಯಲ್ಲಿ ಪಾಸ್​ ಆಗಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಅಕ್ಟೋಬರ್​ 29ರಂದು ಪುನೀತ್​ ರಾಜ್​ಕುಮಾರ್ ನಿಧನ ಹೊಂದಿದ್ದರು. ಅದಾಗಲೇ ಅವರು ‘ಜೇಮ್ಸ್​’ ಸಿನಿಮಾ ಕೆಲಸಗಳನ್ನು ಬಹುತೇಕ ಪೂರ್ಣಗೊಳಿಸಿದ್ದರು. ಒಂದು ಹಾಡಿನ ಶೂಟಿಂಗ್​ ಮಾತ್ರ ಬಾಕಿ ಇತ್ತು. ಆದರೆ, ವಿಧಿಯಾಟವೇ ಬೇರೆ ಆಗಿತ್ತು. ಪುನೀತ್ ಅವರನ್ನು ದೇವರು ಬೇಗ ಕರೆಸಿಕೊಂಡರು. ಈಗ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು, ಮಾರ್ಚ್​ 17ರಂದು ತೆರೆಗೆ ಬರುತ್ತಿದೆ.

ನಿರ್ದೇಶಕ ಚೇತನ್​ ಕುಮಾರ್ ‘ಜೇಮ್ಸ್​’ ಚಿತ್ರವನ್ನು ಸೆನ್ಸಾರ್ ಮಂಡಳಿ ಎದುರು ಇರಿಸಿದ್ದಾರೆ. ಈ ಸಿನಿಮಾಗೆ ಯು/ಎ ಪ್ರಮಾಣಪತ್ರ ನೀಡಲಾಗಿದೆ. ಇದರ ಜತೆಗೆ ಸಿನಿಮಾದಲ್ಲಿ ಯಾವುದೇ ದೃಶ್ಯವನ್ನು ಕಟ್​ ಮಾಡಲು ಸೆನ್ಸಾರ್ ಮಂಡಳಿ ಸೂಚನೆ ನೀಡಿಲ್ಲ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಮಾರ್ಚ್​ 17ರಂದು ಸಿನಿಮಾ ಕಣ್ತುಂಬಿಕೊಳ್ಳಬಹುದು.

ಈ ಮೊದಲು ‘ಜೇಮ್ಸ್​’ ಸಿನಿಮಾದ ಟೀಸರ್​ಅನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಟೀಸರ್​ನಲ್ಲಿ ಪುನೀತ್​ ಸಖತ್​ ಮಾಸ್​ ಆಗಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ‘ಟ್ರೇಡ್​ಮಾರ್ಕ್​..’ ಸಾಂಗ್​ ರಿಲೀಸ್​ ಮಾಡಲಾಯಿತು. ಇದನ್ನು ನೋಡಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ. ಈ ಹಾಡು ಯೂಟ್ಯೂಬ್​ನಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ.

‘ಜೇಮ್ಸ್​’ ಸಿನಿಮಾದಲ್ಲಿ ಪುನೀತ್​ ಪಾತ್ರಕ್ಕೆ ಅವರ ಸಹೋದರ ಶಿವರಾಜ್​ಕುಮಾರ್ ಡಬ್​ ಮಾಡಿದ್ದಾರೆ. ಟೀಸರ್​ನಲ್ಲಿ ಇದರ ಝಲಕ್​ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸಲು ಚಿತ್ರತಂಡ ನಿರ್ಧರಿಸಿದೆ.

ಇದನ್ನೂ ಓದಿ: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಶ್ವಿನಿ ಪುನೀತ್​ ರಾಜ್​ಕುಮಾರ್

ಪಟಾಕಿ ಯಾರದ್ದೇ ಆಗಿರ್ಲಿ, ಹಚ್ಚೋದು ಮಾತ್ರ ಪುನೀತ್​ ರಾಜ್​ಕುಮಾರ್​: ವಂಶಿಕಾ ಸೂಪರ್​ ಮಾತು

Follow Us
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ