AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆನ್ಸಾರ್ ಪ್ರಕ್ರಿಯೆ ಮುಗಿಸಿದ ‘ಜೇಮ್ಸ್’​; ಪುನೀತ್​ ಸಿನಿಮಾಗೆ ಯಾವ ಪ್ರಮಾಣಪತ್ರ?

‘ಜೇಮ್ಸ್​’ ಸಿನಿಮಾದಲ್ಲಿ ಪುನೀತ್​ ಪಾತ್ರಕ್ಕೆ ಅವರ ಸಹೋದರ ಶಿವರಾಜ್​ಕುಮಾರ್ ಡಬ್​ ಮಾಡಿದ್ದಾರೆ. ಟೀಸರ್​ನಲ್ಲಿ ಇದರ ಝಲಕ್​ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸಲು ಚಿತ್ರತಂಡ ನಿರ್ಧರಿಸಿದೆ.

ಸೆನ್ಸಾರ್ ಪ್ರಕ್ರಿಯೆ ಮುಗಿಸಿದ ‘ಜೇಮ್ಸ್’​; ಪುನೀತ್​ ಸಿನಿಮಾಗೆ ಯಾವ ಪ್ರಮಾಣಪತ್ರ?
ಪುನೀತ್
TV9 Web
| Edited By: |

Updated on: Mar 05, 2022 | 7:12 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ನಟನೆಯ ‘ಜೇಮ್ಸ್​’ ಸಿನಿಮಾ (James Movie) ದೊಡ್ಡ ಮಟ್ಟದ ನಿರೀಕ್ಷೆ ಮೂಡಿಸಿದೆ. ಹೀರೋ ಆಗಿ ಪುನೀತ್​ ನಟಿಸಿದ ಕೊನೆಯ ಸಿನಿಮಾ ಇದು. ಈಗಾಗಲೇ ಟೀಸರ್​ ಹಾಗೂ ಹಾಡಿನ ಮೂಲಕ ಈ ಚಿತ್ರ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಪುನೀತ್​ ಜನ್ಮದಿನ (Puneeth Rajkumar Birthday)ಹಿನ್ನೆಲೆಯಲ್ಲಿ ಮಾರ್ಚ್​ 17ರಂದು ಸಿನಿಮಾ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲು ‘ಜೇಮ್ಸ್​’ ಸಿನಿಮಾ ಸೆನ್ಸಾರ್​ ಪ್ರಕ್ರಿಯೆಯನ್ನು ಮುಗಿಸಿದೆ. ಯಾವುದೇ ಕಟ್​ ಇಲ್ಲದೆ ಚಿತ್ರ ಸೆನ್ಸಾರ್​ ಪ್ರಕ್ರಿಯೆಯಲ್ಲಿ ಪಾಸ್​ ಆಗಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಅಕ್ಟೋಬರ್​ 29ರಂದು ಪುನೀತ್​ ರಾಜ್​ಕುಮಾರ್ ನಿಧನ ಹೊಂದಿದ್ದರು. ಅದಾಗಲೇ ಅವರು ‘ಜೇಮ್ಸ್​’ ಸಿನಿಮಾ ಕೆಲಸಗಳನ್ನು ಬಹುತೇಕ ಪೂರ್ಣಗೊಳಿಸಿದ್ದರು. ಒಂದು ಹಾಡಿನ ಶೂಟಿಂಗ್​ ಮಾತ್ರ ಬಾಕಿ ಇತ್ತು. ಆದರೆ, ವಿಧಿಯಾಟವೇ ಬೇರೆ ಆಗಿತ್ತು. ಪುನೀತ್ ಅವರನ್ನು ದೇವರು ಬೇಗ ಕರೆಸಿಕೊಂಡರು. ಈಗ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು, ಮಾರ್ಚ್​ 17ರಂದು ತೆರೆಗೆ ಬರುತ್ತಿದೆ.

ನಿರ್ದೇಶಕ ಚೇತನ್​ ಕುಮಾರ್ ‘ಜೇಮ್ಸ್​’ ಚಿತ್ರವನ್ನು ಸೆನ್ಸಾರ್ ಮಂಡಳಿ ಎದುರು ಇರಿಸಿದ್ದಾರೆ. ಈ ಸಿನಿಮಾಗೆ ಯು/ಎ ಪ್ರಮಾಣಪತ್ರ ನೀಡಲಾಗಿದೆ. ಇದರ ಜತೆಗೆ ಸಿನಿಮಾದಲ್ಲಿ ಯಾವುದೇ ದೃಶ್ಯವನ್ನು ಕಟ್​ ಮಾಡಲು ಸೆನ್ಸಾರ್ ಮಂಡಳಿ ಸೂಚನೆ ನೀಡಿಲ್ಲ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಮಾರ್ಚ್​ 17ರಂದು ಸಿನಿಮಾ ಕಣ್ತುಂಬಿಕೊಳ್ಳಬಹುದು.

ಈ ಮೊದಲು ‘ಜೇಮ್ಸ್​’ ಸಿನಿಮಾದ ಟೀಸರ್​ಅನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಟೀಸರ್​ನಲ್ಲಿ ಪುನೀತ್​ ಸಖತ್​ ಮಾಸ್​ ಆಗಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ‘ಟ್ರೇಡ್​ಮಾರ್ಕ್​..’ ಸಾಂಗ್​ ರಿಲೀಸ್​ ಮಾಡಲಾಯಿತು. ಇದನ್ನು ನೋಡಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ. ಈ ಹಾಡು ಯೂಟ್ಯೂಬ್​ನಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ.

‘ಜೇಮ್ಸ್​’ ಸಿನಿಮಾದಲ್ಲಿ ಪುನೀತ್​ ಪಾತ್ರಕ್ಕೆ ಅವರ ಸಹೋದರ ಶಿವರಾಜ್​ಕುಮಾರ್ ಡಬ್​ ಮಾಡಿದ್ದಾರೆ. ಟೀಸರ್​ನಲ್ಲಿ ಇದರ ಝಲಕ್​ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸಲು ಚಿತ್ರತಂಡ ನಿರ್ಧರಿಸಿದೆ.

ಇದನ್ನೂ ಓದಿ: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಶ್ವಿನಿ ಪುನೀತ್​ ರಾಜ್​ಕುಮಾರ್

ಪಟಾಕಿ ಯಾರದ್ದೇ ಆಗಿರ್ಲಿ, ಹಚ್ಚೋದು ಮಾತ್ರ ಪುನೀತ್​ ರಾಜ್​ಕುಮಾರ್​: ವಂಶಿಕಾ ಸೂಪರ್​ ಮಾತು

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!