AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೈವರ್​ಗಳಿಗಾಗಿ ಹಾಡಿದ ಈ ಗೀತೆಗೆ ಪುನೀತ್​ ಹಣ ಪಡೆಯಲಿಲ್ಲ; ಕಾರಣ ತಿಳಿಸಿದ ‘ಯೆಲ್ಲೋ ಬೋರ್ಡ್​’ ತಂಡ

‘ಯೆಲ್ಲೋ ಬೋರ್ಡ್​’ ಸಿನಿಮಾದಲ್ಲಿ ಪ್ರದೀಪ್​ ಅವರು ಡ್ರೈವರ್​ ಪಾತ್ರ ಮಾಡಿದ್ದಾರೆ. ಟ್ಯಾಕ್ಸಿ ಚಾಲಕನ ಕನಸು ಮತ್ತು ಆಸೆಗಳ ಸುತ್ತ ಹೆಣೆದ ಕಥೆ ಈ ಸಿನಿಮಾದಲ್ಲಿ ಇದೆ.

ಡ್ರೈವರ್​ಗಳಿಗಾಗಿ ಹಾಡಿದ ಈ ಗೀತೆಗೆ ಪುನೀತ್​ ಹಣ ಪಡೆಯಲಿಲ್ಲ; ಕಾರಣ ತಿಳಿಸಿದ ‘ಯೆಲ್ಲೋ ಬೋರ್ಡ್​’ ತಂಡ
ಪ್ರದೀಪ್​, ಅಹಲ್ಯಾ ಸುರೇಶ್​, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Feb 12, 2022 | 9:50 AM

Share

ಚಿತ್ರರಂಗದ ಹಲವು ವಿಭಾಗಗಳಲ್ಲಿ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ತೊಡಗಿಕೊಂಡಿದ್ದರು. ನಟನಾಗಿ, ನಿರ್ಮಾಪಕನಾಗಿ, ಗಾಯಕನಾಗಿಯೂ ಅವರು ಗುರುತಿಸಿಕೊಂಡಿದ್ದರು. ಅನೇಕ ಸಿನಿಮಾಗಳಿಗೆ ಅವರು ಹಾಡಿದ ಗೀತೆಗಳು (Puneeth Rajkumar Songs) ಸೂಪರ್​ ಹಿಟ್​ ಆಗಿವೆ. ಅವರಿಂದ ಒಂದಾದರೂ ಹಾಡು ಹಾಡಿಸಬೇಕು ಎಂದು ಅನೇಕರು ಆಸೆಪಡುತ್ತಿದ್ದರು. ಅದೇ ರೀತಿ ‘ಯೆಲ್ಲೋ ಬೋರ್ಡ್​’ (Yellow Board Movie) ಚಿತ್ರಕ್ಕಾಗಿ ಪುನೀತ್​ ರಾಜ್​ಕುಮಾರ್​ ಒಂದು ಹಾಡು ಹೇಳಿದ್ದರು. ಆ ಗೀತೆ ರ‍್ಯಾಪ್ ಶೈಲಿಯಲ್ಲಿದೆ ಎಂಬುದು ವಿಶೇಷ. ವೃತ್ತಿಜೀವನದಲ್ಲಿ ಅಪ್ಪು ಈ ರೀತಿಯ ಹಾಡು ಹೇಳಿದ್ದು ಇದೇ ಮೊದಲು. ವಿಶೇಷವೇನೆಂದರೆ ಈ ಹಾಡು ಹೇಳಿದ್ದಕ್ಕಾಗಿ ಅವರು ಸಂಭಾವನೆ ಪಡೆದುಕೊಳ್ಳಲಿಲ್ಲ! ಅದಕ್ಕೊಂದು ವಿಶೇಷ ಕಾರಣ ಕೂಡ ಇದೆ. ಅದೇನು ಎಂಬುದನ್ನು ‘ಯೆಲ್ಲೋ ಬೋರ್ಡ್​’ ಚಿತ್ರತಂಡ ವಿವರಿಸಿದೆ. ಇತ್ತೀಚೆಗೆ ಈ ಹಾಡನ್ನು ಬಿಡುಗಡೆ ಮಾಡಲಾಯಿತು. ಈ ಸಿನಿಮಾದಲ್ಲಿ ಪ್ರದೀಪ್​ ನಾಯಕನಾಗಿ ನಟಿಸಿದ್ದಾರೆ. ಅಹಲ್ಯಾ ಸುರೇಶ್, ಸ್ನೇಹಾ ಖುಷಿ, ಸಾಧು ಕೋಕಿಲ ಮುಂತಾದವರು ಈ ಚಿತ್ರದಲ್ಲಿ ​ಅಭಿನಯಿಸಿದ್ದಾರೆ. ಮಾ.4ರಂದು ‘ಯೆಲ್ಲೋ ಬೋರ್ಡ್​’ ಸಿನಿಮಾ ಬಿಡುಗಡೆ ಆಗಲಿದೆ. ತ್ರಿಲೋಕ್​ ರೆಡ್ಡಿ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಈ ಸಿನಿಮಾದಲ್ಲಿ ಪ್ರದೀಪ್​ ಅವರು ಡ್ರೈವರ್​ ಪಾತ್ರ ಮಾಡಿದ್ದಾರೆ. ಟ್ಯಾಕ್ಸಿ ಚಾಲಕನ ಕನಸು ಮತ್ತು ಆಸೆಗಳ ಸುತ್ತ ಹೆಣೆದ ಕಥೆ ಈ ಸಿನಿಮಾದಲ್ಲಿ ಇದೆ. ಒಂದು ಕೊಲೆಯ ಆರೋಪ ಹೊತ್ತು ನಾಯಕ ಅದರಿಂದ ಹೇಗೆ ಹೊರಬರುತ್ತಾನೆ ಎಂಬ ಸಸ್ಪೆನ್ಸ್​ ಕಹಾನಿಯನ್ನು ತೆರೆಗೆ ತರಲು ತಂಡ ರೆಡಿಯಾಗಿದೆ. ಅದ್ವಿಕ್ ಅವರು ಸಂಗೀತ ನಿರ್ದೇಶನ ಮಾಡಿದ್ದು, ಪ್ರವೀಣ್ ಛಾಯಾಗ್ರಹಣ ಮಾಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಹಾಡಿರುವ ರ‍್ಯಾಪ್ ಸಾಂಗ್​ನಲ್ಲಿ ಡ್ರೈವರ್​ಗಳ ಬಗ್ಗೆ ವಿವರಿಸಲಾಗಿದೆ. ಈ ಹಾಡು ಅಪ್ಪು ಅವರಿಗೆ ಸಖತ್​ ಇಷ್ಟ ಆಗಿತ್ತು.

‘ಮೊದಲ ಬಾರಿಗೆ ಡ್ರೈವರ್​ಗಳ ಕುರಿತು ಸಿನಿಮಾ ಮಾಡಿದ್ದೀರಿ. ಒಳ್ಳೆಯದಾಗಲಿ. ಈ ಹಾಡು ಕೂಡ ಚೆನ್ನಾಗಿದೆ. ಡ್ರೈವರ್​ಗಳಿಗೆ ನನ್ನ ಕಡೆಯಿಂದಲೂ ಒಂದು ಕೊಡುಗೆ ಇರಲಿ’ ಎಂದು ಹೇಳಿದ್ದ ಪುನೀತ್​ ರಾಜ್​ಕುಮಾರ್​ ಈ ಹಾಡಿಗೆ ಸಂಭಾವನೆ ಪಡೆದಿರಲಿಲ್ಲ. ಆ ವಿಚಾರವನ್ನು ಪ್ರದೀಪ್​ ನೆನಪು ಮಾಡಿಕೊಂಡರು. ಹಲವು ವರ್ಷಗಳ ಹಿಂದೆ ಪ್ರದೀಪ್​ ನಟಿಸಿದ್ದ ‘ಜಾಲಿಡೇಸ್​’ ಸಿನಿಮಾದ ಆಡಿಯೋ ಬಿಡುಗಡೆಗೆ ಬಂದು ಪುನೀತ್​ ಹಾರೈಸಿದ್ದರು. ಈಗ ‘ಯೆಲ್ಲೋ ಬೋರ್ಡ್’​ ಹಾಡುಗಳನ್ನು ಕೂಡ ಅವರಿಂದಲೇ ಬಿಡುಗಡೆ ಮಾಡಿಸಬೇಕು ಎಂದು ಆಸೆ ಇಟ್ಟುಕೊಳ್ಳಲಾಗಿತ್ತು. ಆದರೆ ಅದಕ್ಕೆ ವಿಧಿ ಅವಕಾಶ ನೀಡಲಿಲ್ಲ.

ಡ್ರೈವರ್​ಗಳ ಕುರಿತಾದ ಈ ಹಾಡನ್ನು ಎಲ್ಲ ಡ್ರೈವರ್​ಗಳು ಇಷ್ಟಪಟ್ಟಿದ್ದಾರೆ. ಹಾಡಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿರುವುದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ. ಈ ಗೀತೆ ಸಾಹಿತ್ಯ ಬರೆದಿರುವುದು ‘ಜೇಮ್ಸ್​’ ನಿರ್ದೇಶಕ ಚೇತನ್​ ಕುಮಾರ್​. ವಿಂಟೇಜ್ ಫಿಲಂಸ್ ಮೂಲಕ ನವೀನ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಯಾವುದೇ ಹೀರೋಯಿಸಂ ಇಲ್ಲದ ಪಾತ್ರದಲ್ಲಿ ಪ್ರದೀಪ್​ ಅಭಿನಯಿಸಿದ್ದಾರೆ. ಸಾಮಾನ್ಯವಾಗಿ ಟ್ಯಾಕ್ಸಿ ಚಾಲಕರ ಮೇಲೆ ಕೆಲವು ಆರೋಪಗಳನ್ನು ಹೊರಿಸಲಾಗುತ್ತದೆ. ಯಾರೋ ಒಬ್ಬರು ಮಾಡುವ ತಪ್ಪಿಗೆ, ಎಲ್ಲ ಟ್ಯಾಕ್ಸಿ ಚಾಲಕರನ್ನೂ ದೂಷಿಸುವುದು ಸರಿಯಲ್ಲ ಎಂಬ ವಿಷಯವನ್ನು ಆಧರಿಸಿ ಈ ಚಿತ್ರ ಸಿದ್ಧವಾಗಿದೆ.

ಇದನ್ನೂ ಓದಿ:

‘ಪರಭಾಷೆಯ ಯಾವ ಚಿತ್ರಕ್ಕೂ ಕಮ್ಮಿ ಇಲ್ಲ ಜೇಮ್ಸ್​ ಟೀಸರ್​’; ಹಾಡಿ ಹೊಗಳಿದ ಪುನೀತ್​ ಫ್ಯಾನ್ಸ್​

ಈ ಶಾಲೆಯಲ್ಲಿ ಪುನೀತ್​ ಫೋಟೋಗೆ ದಿನವೂ ಪೂಜೆ! ಪ್ರತಿ ವರ್ಷ 15 ಮಕ್ಕಳ ದತ್ತು ಸ್ವೀಕಾರ

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?