AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಡಾ. ರಾಜ್​ ಸಮಾಧಿ ಮಣ್ಣನ್ನು ಫ್ಯಾನ್ಸ್​ ತೋಡಿದ್ದರು; ಅಂಥ ಸ್ಥಿತಿ ಪುನೀತ್​ಗೆ ಬರಬಾರದು’; ರಾಘಣ್ಣ ಮನವಿ

Puneeth Rajkumar Funeral: ಈ ಹಿಂದೆ ಡಾ.ರಾಜ್​ ಅಂತ್ಯಕ್ರಿಯೆ ಬಳಿಕ ಕುಟುಂಬದವರು ಸಮಾಧಿ ಸ್ಥಳಕ್ಕೆ ಬರುವುದಕ್ಕೂ ಮುನ್ನವೇ ಅನೇಕ ಅಭಿಮಾನಿಗಳು ಅವರ ಸಮಾಧಿಗೆ ಹಾಲು ತುಪ್ಪ ಹಾಕಿ ಬಿಟ್ಟಿದ್ದರು. ಇನ್ನೂ ಕೆಲವರು ಸಮಾಧಿಯ ಮಣ್ಣನ್ನೇ ತೋಡಿದ್ದರು!

Puneeth Rajkumar: ‘ಡಾ. ರಾಜ್​ ಸಮಾಧಿ ಮಣ್ಣನ್ನು ಫ್ಯಾನ್ಸ್​ ತೋಡಿದ್ದರು; ಅಂಥ ಸ್ಥಿತಿ ಪುನೀತ್​ಗೆ ಬರಬಾರದು’; ರಾಘಣ್ಣ ಮನವಿ
ಪುನೀತ್​ ರಾಜ್​ಕುಮಾರ್​ ಅಂತ್ಯಕ್ರಿಯೆ ಬಳಿಕ ಮಾತನಾಡಿದ ರಾಘಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on:Oct 31, 2021 | 10:02 AM

ಇಡೀ ಕನ್ನಡ ಚಿತ್ರರಂಗಕ್ಕೆ ಕತ್ತಲು ಆವರಿಸಿದೆ. ಪುನೀತ್​ ರಾಜ್​ಕುಮಾರ್​ ನಿಧನದಿಂದ ಅವರ ಇಡೀ ಕುಟುಂಬ ಮತ್ತು ಅಭಿಮಾನಿ ಬಳಗ ಶೋಕ ಸಾಗರದಲ್ಲಿ ಮುಳುಗಿದೆ. ಇಂದು (ಅ.31) ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್​ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಇದರಲ್ಲಿ ಪಾಲ್ಗೊಳ್ಳಲು ಲಕ್ಷಾಂತರ ಅಭಿಮಾನಿಗಳು ಬಂದಿದ್ದರು. ಆದರೆ ಯಾರಿಗೂ ಕಂಠೀರವ ಸ್ಟುಡಿಯೋ ಆವರಣದ ಒಳಗೆ ಬರಲು ಅವಕಾಶ ನೀಡಿಲ್ಲ. ಕೇವಲ ಕುಟುಂಬದವರು ಮತ್ತು ಗಣ್ಯರು ಮಾತ್ರ ಭಾಗಿ ಆಗಿದ್ದರು. ಇನ್ನೂ ಮೂರು ದಿನಗಳ ಕಾಲ ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ರಾಘವೇಂದ್ರ ರಾಜ್​ಕುಮಾರ್ ಹೇಳಿದ್ದಾರೆ.

ರಾಘಣ್ಣ ಹೀಗೆ ಹೇಳುತ್ತಿರುವುದಕ್ಕೂ ಕಾರಣ ಇದೆ. ‘ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಲೇ ಇದ್ದಾರೆ. ಆದರೆ ಸಮಾಧಿ ನೋಡಲು ಯಾರಿಗೂ ಈಗ ಅವಕಾಶ ಇಲ್ಲ. ಇನ್ನೂ ಮೂರು ದಿನ ಕಳೆದ ಬಳಿಕ ಅವಕಾಶ ಮಾಡಿಕೊಡುತ್ತೇವೆ. ಮಂಗಳವಾರ (ನ.2) ಹಾಲು-ತುಪ್ಪ ಕಾರ್ಯ ಇದೆ. ಮಕ್ಕಳು ಮತ್ತು ಮನೆಯವರಿಂದ ಅದನ್ನು ಮಾಡಿಸಬೇಕು. ಅದೊಂದು ಕಾರ್ಯ ಮುಗಿಸಿದ ಬಳಿಕವೇ ಬೇರೆಯವರಿಗೆ ಅನುಮತಿ ನೀಡೋಣ ಅಂತ ತೀರ್ಮಾನಿಸಿದ್ದೇವೆ’ ಎಂದು ರಾಘಣ್ಣ ಹೇಳಿದ್ದಾರೆ.

‘ಈ ಹಿಂದೆ ಅಪ್ಪಾಜಿ (ಡಾ.ರಾಜ್​) ನಿಧನರಾದಾಗ ನಾವು ಬರುವುದಕ್ಕೂ ಮುನ್ನವೇ ಸುಮಾರು ಜನ ಅವರ ಸಮಾಧಿಗೆ ಹಾಲು ತುಪ್ಪ ಹಾಕಿ ಬಿಟ್ಟಿದ್ದರು. ಇನ್ನೂ ಕೆಲವರು ಸಮಾಧಿಯ ಮಣ್ಣನ್ನೇ ತೋಡಿದ್ದರು! ಈಗ ಅಂಥದ್ದಕ್ಕೆಲ್ಲ ಅವಕಾಶ ಆಗಬಾರದು. ಕೆಲವು ಅಭಿಮಾನಿಗಳು ಆ ರೀತಿ ಇರುತ್ತಾರೆ. ತಾವು ಮೊದಲು ಮಾಡೋಣ ಎಂಬ ಆತುರ ಅವರಿಗೆ ಇರುತ್ತದೆ. ಹಾಗೆ ಆಗೋದು ಬೇಡ. ಮೊದಲು ಕುಟುಂಬದವರು ಹಾಲು-ತುಪ್ಪ ಹಾಕಿದ ಬಳಿಕ ಸಾರ್ವಜನಿಕರು ಬಂದು ನೋಡಲು ಅವಕಾಶ ಕೊಡುತ್ತೇವೆ’ ಎಂದಿದ್ದಾರೆ ರಾಘವೇಂದ್ರ ರಾಜ್​ಕುಮಾರ್​.

‘ಇಷ್ಟು ದಿನ ಈ ಸ್ಥಳಕ್ಕೆ ಬಂದಾಗ ಅಪ್ಪಾಜಿ-ಅಮ್ಮನನ್ನು ನೋಡುತ್ತಿದ್ವಿ. ಇನ್ಮೇಲೆ ಅವನನ್ನೂ (ಪುನೀತ್​) ನೋಡಿಕೊಂಡು, ನಮಸ್ಕಾರ ಮಾಡಿ ಹೋಗುತ್ತೇವೆ’ ಎಂದು ರಾಘಣ್ಣ ಭಾವುಕವಾಗಿ ಮಾತನಾಡಿದ್ದಾರೆ.

ಇದನ್ನೂ ಓದಿ:

Puneeth Rajkumar Funeral: ಅಪ್ಪನ ಸಮಾಧಿಗೆ ಪುನೀತ್ ಪುತ್ರಿಯರಿಂದ ಪೂಜೆ; ಕಂಠೀರವ ಸ್ಟುಡಿಯೋದಲ್ಲಿ ಕಣ್ಣೀರ ವಿದಾಯ

Puneeth Rajkumar Last Rites: ಪುನೀತ್ ಅಂತ್ಯಕ್ರಿಯೆ ವೇಳೆ ಶಿವಣ್ಣ ಆಕ್ರಂದನ; ಅಭಿಮಾನಿಗಳ ಕರುಳು ಹಿಂಡುವಂತಿತ್ತು ಆ ನೋವಿನ ಕ್ಷಣ

Published On - 9:59 am, Sun, 31 October 21

ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ