AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth rajkumar: ಇಂದು ಸಂಜೆಯೇ ಪುನೀತ್ ಅಂತ್ಯಕ್ರಿಯೆ; ರಾಕ್​ಲೈನ್ ವೆಂಕಟೇಶ್ ಮಾಹಿತಿ

Puneeth Rajkumar funeral: ಇಂದು ಸಂಜೆಯೇ ಪುನೀತ್ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಕ್​ಲೈನ್ ವೆಂಕಟೇಶ್ ಮಾಹಿತಿ ನೀಡಿದ್ದಾರೆ.

Puneeth rajkumar: ಇಂದು ಸಂಜೆಯೇ ಪುನೀತ್ ಅಂತ್ಯಕ್ರಿಯೆ; ರಾಕ್​ಲೈನ್ ವೆಂಕಟೇಶ್ ಮಾಹಿತಿ
ಪುನೀತ್ ಅಂತಿಮ ದರ್ಶನ ಪಡೆಯುತ್ತಿರುವ ಸಿಎಂ ಬೊಮ್ಮಾಯಿ, ಸಚಿವ ಆರ್ ಅಶೋಕ್ (Credits: PTI)
TV9 Web
| Edited By: |

Updated on:Oct 30, 2021 | 11:24 AM

Share

ಇಂದು ಸಂಜೆಯೇ ನಟ ಪುನೀತ್ ರಾಜ್​​ಕುಮಾರ್ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಟಿವಿ9ಗೆ ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್​ ಹೇಳಿಕೆ ನೀಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಪಾರ್ಥಿವ ಶರೀರದ ಮೆರವಣಿಗೆ ಪ್ರಾರಂಭಿಸಲಾಗುತ್ತದೆ. ಸಂಜೆ 5-5.30ರ ವೇಳೆಗೆ ಕಂಠೀರವ ಸ್ಟುಡಿಯೋಗೆ ಬರಲಿದೆ. ಮಧ್ಯಾಹ್ನ 1.30ರ ವೇಳೆಗೆ ಪುನೀತ್ ಪುತ್ರಿ ದೆಹಲಿಗೆ ಬರುತ್ತಾರೆ. ಅಲ್ಲಿಂದ ಸಂಜೆ 4ರಿಂದ 5 ಗಂಟೆ ವೇಳೆಗೆ ಬೆಂಗಳೂರಿಗೆ ಬರ್ತಾರೆ. ಅವರು ಬರುವವರೆಗೆ ಪೂಜೆಗಳನ್ನು ಮಾಡಲಾಗುತ್ತದೆ. ಪುತ್ರಿ ದ್ರಿತಿ ಬಂದ ಬಳಿಕ ಅಂತಿಮ ವಿಧಿವಿಧಾನ ಮಾಡಲಾಗುತ್ತದೆ. ಪಾರ್ವತಮ್ಮ ಸಮಾಧಿ ಪಕ್ಕದಲ್ಲಿಯೇ ಪುನೀತ್ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಟಿವಿ9ಗೆ ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್​ ಹೇಳಿಕೆ ನೀಡಿದ್ದಾರೆ.

ಪುನೀತ್ ಅಂತ್ಯಕ್ರಿಯೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ; ಪುತ್ರಿ ತಲುಪಿದ ನಂತರ ಸಮಯ ನಿಗದಿ: ಸಿಎಂ ಪುನೀತ್ ಅಂತ್ಯಕ್ರಿಯೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರು, ಗಣ್ಯರಿಗೆ ಅವಕಾಶವಿದ್ದು, ಸಾರ್ವಜನಿಕರಿಗೆ ಅವಕಾಶ ಇಲ್ಲ, ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಪುನೀತ್ ಪುತ್ರಿ ದೆಹಲಿ ತಲುಪಿದ ಬಳಿಕ ಅಂತ್ಯಕ್ರಿಯೆ, ಮೆರವಣಿಗೆಯ ಬಗ್ಗೆ ಸಮಯ ನಿಗದಿ ಮಾಡಲಾಗುವುದು. ಮೆರವಣಿಗೆ, ಅಂತ್ಯಕ್ರಿಯೆಗೆ ಎಲ್ಲ ವ್ಯವಸ್ಥೆ ಮಾಡಿದ್ದೇವೆ. ನಟ ಪುನೀತ್ ಅಗಲಿಕೆ ನಮಗೆ ತುಂಬಾ ದುಃಖವಾಗಿದೆ. ಗೌರವ, ಶಾಂತಿಯಿಂದ ಅವರನ್ನು ಕಳಿಸಿಕೊಡಬೇಕು. ಅಭಿಮಾನಿಗಳು ಸಂಯಮದಿಂದ ವರ್ತಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

ಇಂದು ಸಂಜೆ ಅಂತ್ಯ ಸಂಸ್ಕಾರ; ಕುಟುಂಬಸ್ಥರ ತೀರ್ಮಾನ ಅಂತಿಮ: ಕಮಲ್​ಪಂತ್ ಪುನೀತ್ ರಾಜ್ ಕುಮಾರ್ ದಿವಂಗತರಾದಮೇಲೆ ಅವರ ಅಭಿಮಾನಿಗಳು ನಿರಂತರವಾಗಿ ಬರುತ್ತಿದ್ದಾರೆ. ಭದ್ರತಾ ವ್ಯವಸ್ಥೆ ಒದಗಿಸಿದ್ದೇವೆ. ಜನರು ಇದೇ ರೀತಿ ಸಹಕಾರ ಕೊಡಲಿ ಎಂದು ಭಾವಿಸಿದ್ದೇನೆ. ಇಂದು ಕುಟುಂಬದವರ ತೀರ್ಮಾನದಂತೆ ಮುಂದಿನ ವ್ಯವಸ್ಥೆ ಮಾಡುತ್ತೇವೆ. ಅಂತ್ಯಸಂಸ್ಕಾರಕ್ಕೆ ಆಗಬೇಕಾದ ವ್ಯವಸ್ಥೆ ಮಾಡುತ್ತೇವೆ. ಅಂತ್ಯಸಂಸ್ಕಾರ ಸಂಜೆ ನಡೆಯುವ ಸಾಧ್ಯತೆ ಇದೆ. ಕುಟುಂಬದ ನಿರ್ಧಾರದ ಮೇಲೆ ನಿಂತಿದೆ. ಸೂಕ್ತವಾದ ಭದ್ರತೆ ಸಿದ್ಧತೆ ಇದೆ. ಪಾರ್ಥೀವ ಶರೀರ ಕಂಠೀರವ ಸ್ಟೇಡಿಯಂನಿಂದ ಸ್ಟುಡಿಯೋದವರೆಗೆ ಹೋಗುವ ಸಂದರ್ಭದಲ್ಲಿ ರಸ್ತೆ ಬದಲಾವಣೆ ಮಾಡಲಾಗುತ್ತದೆ. ನಿನ್ನೆ ರಾತ್ರಿ ನೂಕುನುಗ್ಗಲಾದ ಸಮಯದಲ್ಲಿ ಗಾಯಗೊಂಡ ಪೊಲೀಸರು ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿಕೆ ನೀಡಿದ್ದಾರೆ.

ಅಂತ್ಯಕ್ರಿಯೆ ವೇಳೆ ಅಭಿಮಾನಿಗಳಿಗೆ ಅವಕಾಶವಿಲ್ಲ; ಶಾಸಕ ಎಸ್​.ಆರ್.ವಿಶ್ವನಾಥ್ ಹೇಳಿಕೆ ಇಂದು ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಸರ್ಕಾರ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಂಡಿದೆ. ಸಂಜೆ 4.30ರ ವೇಳೆಗೆ ಪುನೀತ್ ಪುತ್ರಿ ಆಗಮಿಸಲಿದ್ದಾರೆ. ಅಂತ್ಯಕ್ರಿಯೆ ವೇಳೆ ಅಭಿಮಾನಿಗಳಿಗೆ ಅವಕಾಶವಿಲ್ಲ ಎಂದು ಬೆಂಗಳೂರಿನಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

ಪುನೀತ್ ಅಂತಿಮ ದರ್ಶನದ ಲೈವ್ ಇಲ್ಲಿ ಲಭ್ಯವಿದೆ:

Puneeth Rajkumar Death Live: ಇಂದು ಸಂಜೆಯೇ ನಟ ಪುನೀತ್​ ರಾಜ್​ಕುಮಾರ್​ ಅಂತ್ಯಕ್ರಿಯೆ- ರಾಕ್​ಲೈನ್​ ವೆಂಕಟೇಶ್​

ಇದನ್ನೂ ಓದಿ:

Puneeth Rajkumar: ಪುನೀತ್ ದರ್ಶನಕ್ಕೆ ಅಭಿಮಾನಿಗಳು, ಗಣ್ಯರ ಶೋಕ; ಅಂತಿಮ ದರ್ಶನದ ಚಿತ್ರಗಳು ಇಲ್ಲಿವೆ

Puneeth Rajkumar Death: ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಹಿರಿಯ ಛಾಯಗ್ರಾಹಕ

Published On - 11:21 am, Sat, 30 October 21

Follow Us
TV9 Web
TV9 Web

TV9 Kannada

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!