AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ 10 ಗಂಟೆಗೆ ಪುನೀತ್​ ಕನಸಿನ ‘ಗಂಧದ ಗುಡಿ’ ಟೈಟಲ್ ಟೀಸರ್​ ಅನಾವರಣ

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದಾರೆ. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿದೆ.

ಬೆಳಗ್ಗೆ 10 ಗಂಟೆಗೆ ಪುನೀತ್​ ಕನಸಿನ ‘ಗಂಧದ ಗುಡಿ’ ಟೈಟಲ್ ಟೀಸರ್​ ಅನಾವರಣ
ಪುನೀತ್​
ರಾಜೇಶ್ ದುಗ್ಗುಮನೆ
| Edited By: |

Updated on:Dec 06, 2021 | 8:50 AM

Share

ಪುನೀತ್​ ರಾಜ್​ಕುಮಾರ್​ ಅವರು ‘ಗಂಧದ ಗುಡಿ’ ಡಾಕ್ಯುಮೆಂಟರಿ ಬಗ್ಗೆ ಸಾಕಷ್ಟು ಕನಸು ಕಂಡಿದ್ದರು. ಸ್ವತಃ ತಾವೇ ಕರ್ನಾಟಕ ಸುತ್ತಿ ​ ಡಾಕ್ಯುಮೆಂಟರಿ ಕೆಲಸದಲ್ಲಿ ಭಾಗಿಯಾಗಿದ್ದರು. ಇದರ ಟೈಟಲ್​ ಟೀಸರ್​ಅನ್ನು ನವೆಂಬರ್​ 1ಕ್ಕೆ ರಿಲೀಸ್​ ಮಾಡಬೇಕು ಎಂದು ಅವರು ಅಂದುಕೊಂಡಿದ್ದರು. ಅದಕ್ಕೂ ಮೊದಲೇ ಪುನೀತ್​ ನಿಧನ ಹೊಂದಿದರು. ಈಗ ಪುನೀತ್ ಕಂಡ ಕನಸು ಅನಾವರಣವಾಗುವ ಸಮಯ ಬಂದಿದೆ. ಇಂದು (ಡಿಸೆಂಬರ್​ 6) ಬೆಳಗ್ಗೆ 10 ಗಂಟೆಗೆ ‘ಗಂಧದ ಗುಡಿ’ ಟೈಟಲ್ ಟೀಸರ್ ರಿಲೀಸ್​ ಆಗಲಿದೆ.

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದಾರೆ. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿದೆ. ಇದಕ್ಕೆ ‘ಗಂಧದ ಗುಡಿ’ ಎಂದು ಹೆಸರಿಡಲಾಗಿದೆ. ಪುನೀತ್​ ಕೂಡ ಇದರಲ್ಲಿ ಕಾಣಿಸಿಕೊಳ್ಳುತ್ತಾರೆ. ಇದರ ಟೀಸರ್​ ಇಂದು ಮುಂಜಾನೆ 10 ಗಂಟೆಗೆ ಲಾಂಚ್​ ಆಗುತ್ತಿದೆ. ಈ ಬಗ್ಗೆ ಬರೆದುಕೊಂಡಿರುವ ಅಶ್ವಿನಿ ಪುನೀತ್​ ರಾಜ್​ಕುಮಾರ್. ‘ಹಿಂದೆಂದೂ ಕಾಣದ ಸಿನಿಮಾ ಅನುಭವ. PRK ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ನಿಮ್ಮ ಮುಂದೆ’ ಎಂದು ಬರೆದುಕೊಂಡಿದ್ದಾರೆ ಅವರು.

ನವೆಂಬರ್​ 1 ಕನ್ನಡ ರಾಜ್ಯೋತ್ಸವ. ಈ ಕಾರಣಕ್ಕೆ ಅಂದೇ ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಈ ಕಾರಣಕ್ಕೆ ಆ ಟೀಸರ್​ ರಿಲೀಸ್​ ಆಗಿಲ್ಲ. ಇಂದು ಆ ಟೀಸರ್ ರಿಲೀಸ್​ ಆಗುತ್ತಿದೆ.

‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್​ ಪೋಸ್ಟ್ ಮಾಡಿದ್ದರು. ಅಲ್ಲದೆ, ನವೆಂಬರ್​ 1ಕ್ಕಾಗಿ ಕಾಯಿರಿ ಎಂದು ಹೇಳಿದ್ದರು. ಈಗ ಅವರಿಲ್ಲದೆ ಈ ಟೀಸರ್​ ರಿಲೀಸ್​ ಆಗುತ್ತಿರುವುದಕ್ಕೆ ಅಭಿಮಾನಿಗಳು ಬೇಸರಗೊಂಡಿದ್ದಾರೆ.

ಇದನ್ನೂ ಓದಿ: ಪುನೀತ್​ ಕಂಡ ಕನಸಿನ ಟೈಟಲ್​ ಟೀಸರ್ ರಿಲೀಸ್​​ ದಿನಾಂಕ ಘೋಷಣೆ ಮಾಡಿದ ಅಶ್ವಿನಿ

Published On - 6:30 am, Mon, 6 December 21

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!