AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ 10 ಗಂಟೆಗೆ ಪುನೀತ್​ ಕನಸಿನ ‘ಗಂಧದ ಗುಡಿ’ ಟೈಟಲ್ ಟೀಸರ್​ ಅನಾವರಣ

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದಾರೆ. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿದೆ.

ಬೆಳಗ್ಗೆ 10 ಗಂಟೆಗೆ ಪುನೀತ್​ ಕನಸಿನ ‘ಗಂಧದ ಗುಡಿ’ ಟೈಟಲ್ ಟೀಸರ್​ ಅನಾವರಣ
ಪುನೀತ್​
ರಾಜೇಶ್ ದುಗ್ಗುಮನೆ
| Edited By: |

Updated on:Dec 06, 2021 | 8:50 AM

Share

ಪುನೀತ್​ ರಾಜ್​ಕುಮಾರ್​ ಅವರು ‘ಗಂಧದ ಗುಡಿ’ ಡಾಕ್ಯುಮೆಂಟರಿ ಬಗ್ಗೆ ಸಾಕಷ್ಟು ಕನಸು ಕಂಡಿದ್ದರು. ಸ್ವತಃ ತಾವೇ ಕರ್ನಾಟಕ ಸುತ್ತಿ ​ ಡಾಕ್ಯುಮೆಂಟರಿ ಕೆಲಸದಲ್ಲಿ ಭಾಗಿಯಾಗಿದ್ದರು. ಇದರ ಟೈಟಲ್​ ಟೀಸರ್​ಅನ್ನು ನವೆಂಬರ್​ 1ಕ್ಕೆ ರಿಲೀಸ್​ ಮಾಡಬೇಕು ಎಂದು ಅವರು ಅಂದುಕೊಂಡಿದ್ದರು. ಅದಕ್ಕೂ ಮೊದಲೇ ಪುನೀತ್​ ನಿಧನ ಹೊಂದಿದರು. ಈಗ ಪುನೀತ್ ಕಂಡ ಕನಸು ಅನಾವರಣವಾಗುವ ಸಮಯ ಬಂದಿದೆ. ಇಂದು (ಡಿಸೆಂಬರ್​ 6) ಬೆಳಗ್ಗೆ 10 ಗಂಟೆಗೆ ‘ಗಂಧದ ಗುಡಿ’ ಟೈಟಲ್ ಟೀಸರ್ ರಿಲೀಸ್​ ಆಗಲಿದೆ.

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದಾರೆ. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿದೆ. ಇದಕ್ಕೆ ‘ಗಂಧದ ಗುಡಿ’ ಎಂದು ಹೆಸರಿಡಲಾಗಿದೆ. ಪುನೀತ್​ ಕೂಡ ಇದರಲ್ಲಿ ಕಾಣಿಸಿಕೊಳ್ಳುತ್ತಾರೆ. ಇದರ ಟೀಸರ್​ ಇಂದು ಮುಂಜಾನೆ 10 ಗಂಟೆಗೆ ಲಾಂಚ್​ ಆಗುತ್ತಿದೆ. ಈ ಬಗ್ಗೆ ಬರೆದುಕೊಂಡಿರುವ ಅಶ್ವಿನಿ ಪುನೀತ್​ ರಾಜ್​ಕುಮಾರ್. ‘ಹಿಂದೆಂದೂ ಕಾಣದ ಸಿನಿಮಾ ಅನುಭವ. PRK ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ನಿಮ್ಮ ಮುಂದೆ’ ಎಂದು ಬರೆದುಕೊಂಡಿದ್ದಾರೆ ಅವರು.

ನವೆಂಬರ್​ 1 ಕನ್ನಡ ರಾಜ್ಯೋತ್ಸವ. ಈ ಕಾರಣಕ್ಕೆ ಅಂದೇ ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಈ ಕಾರಣಕ್ಕೆ ಆ ಟೀಸರ್​ ರಿಲೀಸ್​ ಆಗಿಲ್ಲ. ಇಂದು ಆ ಟೀಸರ್ ರಿಲೀಸ್​ ಆಗುತ್ತಿದೆ.

‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್​ ಪೋಸ್ಟ್ ಮಾಡಿದ್ದರು. ಅಲ್ಲದೆ, ನವೆಂಬರ್​ 1ಕ್ಕಾಗಿ ಕಾಯಿರಿ ಎಂದು ಹೇಳಿದ್ದರು. ಈಗ ಅವರಿಲ್ಲದೆ ಈ ಟೀಸರ್​ ರಿಲೀಸ್​ ಆಗುತ್ತಿರುವುದಕ್ಕೆ ಅಭಿಮಾನಿಗಳು ಬೇಸರಗೊಂಡಿದ್ದಾರೆ.

ಇದನ್ನೂ ಓದಿ: ಪುನೀತ್​ ಕಂಡ ಕನಸಿನ ಟೈಟಲ್​ ಟೀಸರ್ ರಿಲೀಸ್​​ ದಿನಾಂಕ ಘೋಷಣೆ ಮಾಡಿದ ಅಶ್ವಿನಿ

Published On - 6:30 am, Mon, 6 December 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ