AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ 10 ಗಂಟೆಗೆ ಪುನೀತ್​ ಕನಸಿನ ‘ಗಂಧದ ಗುಡಿ’ ಟೈಟಲ್ ಟೀಸರ್​ ಅನಾವರಣ

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದಾರೆ. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿದೆ.

ಬೆಳಗ್ಗೆ 10 ಗಂಟೆಗೆ ಪುನೀತ್​ ಕನಸಿನ ‘ಗಂಧದ ಗುಡಿ’ ಟೈಟಲ್ ಟೀಸರ್​ ಅನಾವರಣ
ಪುನೀತ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on:Dec 06, 2021 | 8:50 AM

Share

ಪುನೀತ್​ ರಾಜ್​ಕುಮಾರ್​ ಅವರು ‘ಗಂಧದ ಗುಡಿ’ ಡಾಕ್ಯುಮೆಂಟರಿ ಬಗ್ಗೆ ಸಾಕಷ್ಟು ಕನಸು ಕಂಡಿದ್ದರು. ಸ್ವತಃ ತಾವೇ ಕರ್ನಾಟಕ ಸುತ್ತಿ ​ ಡಾಕ್ಯುಮೆಂಟರಿ ಕೆಲಸದಲ್ಲಿ ಭಾಗಿಯಾಗಿದ್ದರು. ಇದರ ಟೈಟಲ್​ ಟೀಸರ್​ಅನ್ನು ನವೆಂಬರ್​ 1ಕ್ಕೆ ರಿಲೀಸ್​ ಮಾಡಬೇಕು ಎಂದು ಅವರು ಅಂದುಕೊಂಡಿದ್ದರು. ಅದಕ್ಕೂ ಮೊದಲೇ ಪುನೀತ್​ ನಿಧನ ಹೊಂದಿದರು. ಈಗ ಪುನೀತ್ ಕಂಡ ಕನಸು ಅನಾವರಣವಾಗುವ ಸಮಯ ಬಂದಿದೆ. ಇಂದು (ಡಿಸೆಂಬರ್​ 6) ಬೆಳಗ್ಗೆ 10 ಗಂಟೆಗೆ ‘ಗಂಧದ ಗುಡಿ’ ಟೈಟಲ್ ಟೀಸರ್ ರಿಲೀಸ್​ ಆಗಲಿದೆ.

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದಾರೆ. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿದೆ. ಇದಕ್ಕೆ ‘ಗಂಧದ ಗುಡಿ’ ಎಂದು ಹೆಸರಿಡಲಾಗಿದೆ. ಪುನೀತ್​ ಕೂಡ ಇದರಲ್ಲಿ ಕಾಣಿಸಿಕೊಳ್ಳುತ್ತಾರೆ. ಇದರ ಟೀಸರ್​ ಇಂದು ಮುಂಜಾನೆ 10 ಗಂಟೆಗೆ ಲಾಂಚ್​ ಆಗುತ್ತಿದೆ. ಈ ಬಗ್ಗೆ ಬರೆದುಕೊಂಡಿರುವ ಅಶ್ವಿನಿ ಪುನೀತ್​ ರಾಜ್​ಕುಮಾರ್. ‘ಹಿಂದೆಂದೂ ಕಾಣದ ಸಿನಿಮಾ ಅನುಭವ. PRK ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ನಿಮ್ಮ ಮುಂದೆ’ ಎಂದು ಬರೆದುಕೊಂಡಿದ್ದಾರೆ ಅವರು.

ನವೆಂಬರ್​ 1 ಕನ್ನಡ ರಾಜ್ಯೋತ್ಸವ. ಈ ಕಾರಣಕ್ಕೆ ಅಂದೇ ಆ ಟೀಸರ್ ರಿಲೀಸ್​ ಮಾಡಬೇಕು ಎಂದು ಪುನೀತ್​ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಈ ಕಾರಣಕ್ಕೆ ಆ ಟೀಸರ್​ ರಿಲೀಸ್​ ಆಗಿಲ್ಲ. ಇಂದು ಆ ಟೀಸರ್ ರಿಲೀಸ್​ ಆಗುತ್ತಿದೆ.

‘ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್​ ಪೋಸ್ಟ್ ಮಾಡಿದ್ದರು. ಅಲ್ಲದೆ, ನವೆಂಬರ್​ 1ಕ್ಕಾಗಿ ಕಾಯಿರಿ ಎಂದು ಹೇಳಿದ್ದರು. ಈಗ ಅವರಿಲ್ಲದೆ ಈ ಟೀಸರ್​ ರಿಲೀಸ್​ ಆಗುತ್ತಿರುವುದಕ್ಕೆ ಅಭಿಮಾನಿಗಳು ಬೇಸರಗೊಂಡಿದ್ದಾರೆ.

ಇದನ್ನೂ ಓದಿ: ಪುನೀತ್​ ಕಂಡ ಕನಸಿನ ಟೈಟಲ್​ ಟೀಸರ್ ರಿಲೀಸ್​​ ದಿನಾಂಕ ಘೋಷಣೆ ಮಾಡಿದ ಅಶ್ವಿನಿ

Published On - 6:30 am, Mon, 6 December 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು