AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಷ್ಪ, ಆರ್​ಆರ್​ಆರ್​ ಮೀರಿಸಿ ಟ್ರೆಂಡ್​ ಆದ ‘ಗಂಧದ ಗುಡಿ’; ಪುನೀತ್​ ಡಾಕ್ಯುಮೆಂಟರಿಗೆ ಬಹುಪರಾಕ್​

Gandhada Gudi Title Teaser: ಸೋಶಿಯಲ್​ ಮೀಡಿಯಾದಲ್ಲಿ ‘ಗಂಧದ ಗುಡಿ’ ಟೀಸರ್​ ಜೋರಾಗಿ ಸದ್ದು ಮಾಡುತ್ತಿದೆ. ಪುಷ್ಪ, ಆರ್​ಆರ್​ಆರ್​ ಮುಂತಾದ ಬಿಗ್​ ಬಜೆಟ್​ ಸಿನಿಮಾಗಳನ್ನೂ ಮೀರಿಸಿ ‘ಗಂಧದ ಗುಡಿ’ ಟ್ರೆಂಡ್​ ಆಗುತ್ತಿದೆ.

ಪುಷ್ಪ, ಆರ್​ಆರ್​ಆರ್​ ಮೀರಿಸಿ ಟ್ರೆಂಡ್​ ಆದ ‘ಗಂಧದ ಗುಡಿ’; ಪುನೀತ್​ ಡಾಕ್ಯುಮೆಂಟರಿಗೆ ಬಹುಪರಾಕ್​
ಜ್ಯೂ. ಎನ್​ಟಿಆರ್​, ಪುನೀತ್​ ರಾಜ್​ಕುಮಾರ್​, ಅಲ್ಲು ಅರ್ಜುನ್​
TV9 Web
| Edited By: |

Updated on: Dec 06, 2021 | 2:07 PM

Share

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ (Puneeth Rajkumar) ನಿರ್ಮಾಣದ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರದ ಮೇಲೆ ಅಭಿಮಾನಿಗಳಿಗೆ ಇರುವ ನಿರೀಕ್ಷೆ ಅಷ್ಟಿಷ್ಟಲ್ಲ. ಇದರ ಟೈಟಲ್​ ಟೀಸರ್​ (Gandhada Gudi Title Teaser) ಇಂದು (ಡಿ.6) ಬಿಡುಗಡೆ ಆಗಿದೆ. ‘ಪಿಆರ್​ಕೆ’ ಆಡಿಯೋ ಮೂಲಕ ರಿಲೀಸ್​ ಆಗಿರುವ ಈ ಟೀಸರ್​ ಅನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಅದರ ಪರಿಣಾಮವಾಗಿ ಸೋಶಿಯಲ್​ ಮೀಡಿಯಾದಲ್ಲಿ ‘ಗಂಧದ ಗುಡಿ’ ಹ್ಯಾಶ್​ಟ್ಯಾಗ್​ ಸಖತ್​ ಟ್ರೆಂಡ್​ ಆಗುತ್ತಿದೆ. ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ಅನೇಕ ಸೆಲೆಬ್ರಿಟಿಗಳು ಮತ್ತು ಅಪಾರ ಸಂಖ್ಯೆ ಅಭಿಮಾನಿಗಳು ಈ ಟೀಸರ್​ ಬಗ್ಗೆ ಟ್ವೀಟ್​ ಮಾಡುತ್ತಿದ್ದಾರೆ. ಟ್ವಿಟರ್​ನಲ್ಲಿ ಪುಷ್ಪ (Pushpa Movie) ಮತ್ತು ಆರ್​ಆರ್​ಆರ್​ (RRR Movie) ಸಿನಿಮಾಗಳನ್ನೂ ಮೀರಿಸಿ ‘ಗಂಧದ ಗುಡಿ’ ಟ್ರೆಂಡ್​ ಆಗುತ್ತಿದೆ. ಟೀಸರ್​ನಲ್ಲಿ ಇರುವ ದೃಶ್ಯ ವೈಭವ ಕಂಡ ಜನರು ಬೆರಗಾಗಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ಈ ಕನಸಿನ ಪ್ರಾಜೆಕ್ಟ್​ಗೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ಆದಷ್ಟು ಬೇಗ ‘ಗಂಧದ ಗುಡಿ’ ರಿಲೀಸ್​ ಆಗಲಿ ಎಂದು ಎಲ್ಲರೂ ಕಾಯುವಂತಾಗಿದೆ.

ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾದ ಟ್ರೇಲರ್​ ಇಂದು ಬಿಡುಗಡೆ ಆಗಲಿದೆ. ಸಂಜೆ 6 ಗಂಟೆಗೆ ಟ್ರೇಲರ್​ ಬಿಡುಗಡೆ ಆಗುತ್ತಿರುವುದರಿಂದ ಟಾಲಿವುಡ್​ ಸಿನಿಪ್ರಿಯರು ಆ ಬಗ್ಗೆ ಹೆಚ್ಚು ಹೆಚ್ಚು ಟ್ವೀಟ್​ ಮಾಡುತ್ತಿದ್ದಾರೆ. ಹಾಗಾಗಿ ಅದು ಟ್ರೆಂಡಿಂಗ್​ನಲ್ಲಿದೆ. ಅದನ್ನು ಮೀರಿಸಿ ‘ಗಂಧದ ಗುಡಿ’ ಸೌಂಡು ಮಾಡುತ್ತಿದೆ. ಅದೇ ರೀತಿ, ಬಹುನಿರೀಕ್ಷಿತ ‘ಆರ್​ಆರ್​ಆರ್​’ ಸಿನಿಮಾ ಕೂಡ ಟ್ರೇಲರ್​ ಬಿಡುಗಡೆ ದಿನಾಂಕವನ್ನು ಘೋಷಿಸಿಕೊಂಡಿದೆ. ಡಿ.9ರಂದು ಈ ಚಿತ್ರದ ಟ್ರೇಲರ್​ ರಿಲೀಸ್​ ಆಗಲಿದ್ದು, ಈಗಲೇ ಕ್ರೇಜ್​ ಹೆಚ್ಚಿಸಿದೆ. ಹಾಗಾಗಿ ‘ಆರ್​ಆರ್​ಆರ್​’ ಕೂಡ ಟ್ವಿಟರ್​ ಟ್ರೆಂಡ್​ನಲ್ಲಿದೆ. ಅದನ್ನು ಹಿಂದಿಕ್ಕಿ ‘ಗಂಧದ ಗುಡಿ’ ಮಿಂಚುತ್ತಿದೆ.

ನಟ ಯಶ್​, ಸಿಎಂ ಬಸವರಾಜ ಬೊಮ್ಮಾಯಿ, ‘ಕೆಜಿಎಫ್: ಚಾಪ್ಟರ್​ 2’ ನಿರ್ದೇಶಕ ಪ್ರಶಾಂತ್​ ನೀಲ್​, ರಿಷಬ್​ ಶೆಟ್ಟಿ, ನಿಖಿಲ್​ ಕುಮಾರಸ್ವಾಮಿ, ಶರಣ್​ ಸೇರಿದಂತೆ ಅನೇಕರು ​‘ಗಂಧದ ಗುಡಿ’ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಆ ಮೂಲಕ ಹೆಚ್ಚು ಜನರನ್ನು ಈ ಟೀಸರ್​ ತಲುಪುತ್ತಿದೆ.

‘ಗಂಧದ ಗುಡಿ’ ಡಾಕ್ಯುಮೆಂಟರಿ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರು ಅನೇಕ ಸೆಲೆಬ್ರಿಟಿಗಳ ಜತೆ ಚರ್ಚೆ ಮಾಡಿದ್ದರು. ನಟ ಯಶ್​ ಅದನ್ನೀಗ ನೆನಪು ಮಾಡಿಕೊಂಡಿದ್ದಾರೆ. ‘ನೀವು ಪ್ರತಿ ಬಾರಿ ಇದರ ಬಗ್ಗೆ ಮಾತನಾಡಿದಾಗಲೂ ನಿಮ್ಮ ಕಣ್ಣಲ್ಲಿ ಮೂಡುತ್ತಿದ್ದ ಹೊಳಪು ಈಗ ನೆನಪಾಗುತ್ತಿದೆ. ನಿಮಗೆ ಈ ಪ್ರಾಜೆಕ್ಟ್​ ಎಷ್ಟು ಆಪ್ತವಾಗಿತ್ತು ಎಂಬುದಕ್ಕೆ ನಿಮ್ಮ ಉತ್ಸಾಹವೇ ಸಾಕ್ಷಿ ಆಗಿತ್ತು. ನಮ್ಮ ಗಂಧದ ಗುಡಿಯನ್ನು ನಿಮ್ಮ ನೋಟದ ಮೂಲಕ ನಮಗೆ ತೋರಿಸುತ್ತಿರುವುದಕ್ಕೆ ಧನ್ಯವಾದಗಳು ಅಪ್ಪು ಸರ್​. ಇದು ನಿಜಕ್ಕೂ ಸ್ವರ್ಗ’ ಎಂದು ಯಶ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

‘ಗಂಧದ ಗುಡಿ’ ನೋಡಿ ಸೆಲೆಬ್ರಿಟಿಗಳು ಫಿದಾ; ಪುನೀತ್​ ಕಾರ್ಯಕ್ಕೆ ಉಘೇ ಉಘೇ ಎಂದಿದ್ದು ಯಾರೆಲ್ಲ?

Gandhada Gudi Title Teaser: ‘ಗಂಧದ ಗುಡಿ’ ಟೈಟಲ್ ಟೀಸರ್​ ಬಿಡುಗಡೆ; ಬೆರಗು ಮೂಡಿಸಿದ ಪುನೀತ್​ ಡ್ರೀಮ್​ ಪ್ರಾಜೆಕ್ಟ್​

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ