AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಧದ ಗುಡಿ’ ನೋಡಿ ಸೆಲೆಬ್ರಿಟಿಗಳು ಫಿದಾ; ಪುನೀತ್​ ಕಾರ್ಯಕ್ಕೆ ಉಘೇ ಉಘೇ ಎಂದಿದ್ದು ಯಾರೆಲ್ಲ?

Gandhada Gudi Title Teaser: ಯಶ್​, ಬಸವರಾಜ ಬೊಮ್ಮಾಯಿ, ಪ್ರಶಾಂತ್​ ನೀಲ್​, ನಿಖಿಲ್​ ಕುಮಾರ್​ ಮುಂತಾದವರು ‘ಗಂಧದ ಗುಡಿ’ ಟೀಸರ್​ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಟೀಸರ್​ ಸಖತ್​ ವೈರಲ್​ ಆಗಿದೆ.

‘ಗಂಧದ ಗುಡಿ’ ನೋಡಿ ಸೆಲೆಬ್ರಿಟಿಗಳು ಫಿದಾ; ಪುನೀತ್​ ಕಾರ್ಯಕ್ಕೆ ಉಘೇ ಉಘೇ ಎಂದಿದ್ದು ಯಾರೆಲ್ಲ?
ಗಂಧದ ಗುಡಿ ಟೀಸರ್​ಗೆ ಮೆಚ್ಚುಗೆ ಸೂಚಿಸುತ್ತಿರುವ ಸೆಲೆಬ್ರಿಟಿಗಳು
TV9 Web
| Edited By: |

Updated on:Dec 06, 2021 | 1:24 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ನಿರ್ಮಾಣ ಮಾಡಿರುವ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರದ ಟೈಟಲ್​ ಟೀಸರ್​ ಬಿಡುಗಡೆ ಆಗಿದೆ. ಪಿಆರ್​ಕೆ ಆಡಿಯೋ ಮೂಲಕ ರಿಲೀಸ್​ ಆಗಿರುವ ಈ ಟೀಸರ್​ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಸೆಲೆಬ್ರಿಟಿಗಳು ಕೂಡ ಇದನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ. ಎಲ್ಲರಿಂದಲೂ ಪ್ರಶಂಸೆಯ ಸುರಿಮಳೆ ಆಗುತ್ತಿದೆ. ಕರುನಾಡಿನ ಪ್ರಕೃತಿ ಸೌಂದರ್ಯವನ್ನು ಮನಮೋಹಕವಾಗಿ ಸೆರೆ ಹಿಡಿದಿರುವ ಈ ಡಾಕ್ಯುಮೆಂಟರಿ 2022ರಲ್ಲಿ ಥಿಯೇಟರ್​ನಲ್ಲಿ ಬಿಡುಗಡೆ ಆಗಲಿದೆ. ನಟ ಯಶ್​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ‘ಗಂಧದ ಗುಡಿ’ ಟೈಟಲ್​​ ಟೀಸರ್​ (Gandhada Gudi Title Teaser) ನೋಡಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಎಲ್ಲರೂ ಕೂಡ ಇದನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ಈ ಟೀಸರ್​ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

‘ಗಂಧದ ಗುಡಿ’ ಡಾಕ್ಯುಮೆಂಟರಿ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರು ಅನೇಕ ಸೆಲೆಬ್ರಿಟಿಗಳ ಜತೆ ಚರ್ಚೆ ಮಾಡಿದ್ದರು. ನಟ ಯಶ್​ ಅದನ್ನೀಗ ನೆನಪು ಮಾಡಿಕೊಂಡಿದ್ದಾರೆ. ‘ನೀವು ಪ್ರತಿ ಬಾರಿ ಇದರ ಬಗ್ಗೆ ಮಾತನಾಡಿದಾಗಲೂ ನಿಮ್ಮ ಕಣ್ಣಲ್ಲಿ ಮೂಡುತ್ತಿದ್ದ ಹೊಳಪು ಈಗ ನೆನಪಾಗುತ್ತಿದೆ. ನಿಮಗೆ ಈ ಪ್ರಾಜೆಕ್ಟ್​ ಎಷ್ಟು ಆಪ್ತವಾಗಿತ್ತು ಎಂಬುದಕ್ಕೆ ನಿಮ್ಮ ಉತ್ಸಾಹವೇ ಸಾಕ್ಷಿ ಆಗಿತ್ತು. ನಮ್ಮ ಗಂಧದ ಗುಡಿಯನ್ನು ನಿಮ್ಮ ನೋಟದ ಮೂಲಕ ನಮಗೆ ತೋರಿಸುತ್ತಿರುವುದಕ್ಕೆ ಧನ್ಯವಾದಗಳು ಅಪ್ಪು ಸರ್​. ಇದು ನಿಜಕ್ಕೂ ಸ್ವರ್ಗ’ ಎಂದು ಯಶ್​ ಟ್ವೀಟ್​ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಈ ಟೀಸರ್​ ಸಖತ್​ ಇಷ್ಟವಾಗಿದೆ. ಅವರು ಕೂಡ ‘ಗಂಧದ ಗುಡಿ’ ಬಗ್ಗೆ ಟ್ವೀಟ್​ ಮಾಡಿದ್ದಾರೆ. ನಮ್ಮೆಲ್ಲರ ಪ್ರೀತಿಯ ಅಪ್ಪು ದಿ. ಪುನೀತ್ ರಾಜಕುಮಾರ್ ಅವರ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ. ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಅಂತ ಹಾರೈಸುತ್ತೇನೆ’ ಎಂದು ಬೊಮ್ಮಾಯಿ ಪೋಸ್ಟ್​ ಮಾಡಿದ್ದಾರೆ.

‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​ ಸಹ ಇದನ್ನು ಹೊಗಳಿದ್ದಾರೆ. ‘ಅಪ್ಪು ಸರ್​ ಕನಸು ಮತ್ತು ದೂರದೃಷ್ಟಿ ಜಾಗತಿಕ ಮಟ್ಟದಲ್ಲಿದೆ. ಅವರ ರೀತಿಯೇ ಇದು ಕೂಡ ಅತ್ಯಮೂಲ್ಯವಾಗಿದೆ. ಇಡೀ ಗಂಧದ ಗುಡಿ ತಂಡಕ್ಕೆ ಶುಭ ಹಾರೈಕೆಗಳು’ ಎಂದು ಪ್ರಶಾಂತ್​ ನೀಲ್​ ಟ್ವೀಟ್​ ಮಾಡಿದ್ದಾರೆ.

‘ಇದು ಅದ್ಭುತವಾಗಿದೆ’ ಎಂದು ನಿಖಿಲ್​ ಕುಮಾರ್​ ಹೇಳಿದ್ದಾರೆ. ಎಲ್ಲರೂ ಸೋಶಿಯಲ್​ ಮೀಡಿಯಾದಲ್ಲಿ ಈ ಟೀಸರ್​ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

Gandhada Gudi Title Teaser: ‘ಗಂಧದ ಗುಡಿ’ ಟೈಟಲ್ ಟೀಸರ್​ ಬಿಡುಗಡೆ; ಬೆರಗು ಮೂಡಿಸಿದ ಪುನೀತ್​ ಡ್ರೀಮ್​ ಪ್ರಾಜೆಕ್ಟ್​

ಪಾರ್ವತಮ್ಮ ರಾಜ್​ಕುಮಾರ್​ ಹುಟ್ಟುಹಬ್ಬ: ವಿಶೇಷ ದಿನವೇ ಅಪ್ಪು ಕನಸಿನ ಪ್ರಾಜೆಕ್ಟ್​ ಶೀರ್ಷಿಕೆ ಟೀಸರ್​ ಬಿಡುಗಡೆ

Published On - 1:00 pm, Mon, 6 December 21

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ