AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಕಲಾವಿದನ ಕಲ್ಪನೆಯಲ್ಲಿ ಪುನೀತ್​-ಗಣಪ; ‘ನಮ್ಮ ಪಾಲಿಗೆ ದೇವರು ಇಲ್ಲ’ ಎಂದ ಫ್ಯಾನ್ಸ್​

Puneeth Rajkumar | Ganesha Idol: ‘ಪ್ರಕೃತಿ ಆರ್ಟ್​ ಸೆಂಟರ್​’ ಕಲಾವಿದರ ಕಲ್ಪನೆಯಲ್ಲಿ ಈ ವಿಶೇಷವಾದ ಮೂರ್ತಿ ಮೂಡಿಬಂದಿದೆ. ರಾಘವೇಂದ್ರ ರಾಜ್​ಕುಮಾರ್​ ಅವರಿಗೆ ಇದು ತುಂಬ ಇಷ್ಟವಾಗಿದೆ.

Puneeth Rajkumar: ಕಲಾವಿದನ ಕಲ್ಪನೆಯಲ್ಲಿ ಪುನೀತ್​-ಗಣಪ; ‘ನಮ್ಮ ಪಾಲಿಗೆ ದೇವರು ಇಲ್ಲ’ ಎಂದ ಫ್ಯಾನ್ಸ್​
ಪುನೀತ್-ಗಣಪ
TV9 Web
| Updated By: Digi Tech Desk|

Updated on:Oct 21, 2022 | 12:43 PM

Share

ಪ್ರತಿ ಬಾರಿ ಗಣೇಶ ಚತುರ್ಥಿಗೆ ಬಗೆಬಗೆಯ ಗಣಪನ ವಿಗ್ರಹಗಳು (Ganesha Idol) ರಾರಾಜಿಸುತ್ತವೆ. ನೂರಾರು ಪರಿಕಲ್ಪನೆಯಲ್ಲಿ ಗಣೇಶನ ಮೂರ್ತಿಗಳನ್ನು ತಯಾರಿಸಲಾಗುತ್ತದೆ. ಒಂದಕ್ಕಿಂತ ಒಂದು ಭಿನ್ನವಾಗಿರುವ ವಿನಾಯಕನ ಮೂರ್ತಿಗಳನ್ನು ನೋಡುವುದೇ ಚಂದ. ಆಯಾ ವರ್ಷದಲ್ಲಿ ಫೇಮಸ್​ ಆದ ಸಿನಿಮಾಗಳ ರೀತಿಯಲ್ಲೂ ಗಣಪ ಮೂಡಿಬರುವುದುಂಟು. ಈಗ ವರ್ಷ ಕೂಡ ಕೆಲವು ಪ್ರಯೋಗಗಳು ಆಗುತ್ತಿವೆ. ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಕೆಲವು ಕಲಾವಿದರು ವಿಶೇಷವಾದ ಗಣೇಶನ ವಿಗ್ರಹಗಳನ್ನು ತಯಾರಿಸುತ್ತಿದ್ದಾರೆ. ಆ ಪೈಕಿ ಒಂದು ಕಲಾಕೃತಿ ಗಮನ ಸೆಳೆಯುತ್ತಿದೆ. ಅದನ್ನು ರಾಘವೇಂದ್ರ ರಾಜ್​ಕುಮಾರ್ (Raghavendra Rajkumar)​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅನೇಕರಿಗೆ ಇದು ತುಂಬ ಇಷ್ಟ ಆಗಿದೆ. ಆದರೆ ಕೆಲವು ಅಭಿಮಾನಿಗಳು ದೇವರ ಬಗ್ಗೆ ಕೋಪ ವ್ಯಕ್ತಪಡಿಸಿದ್ದಾರೆ. ಪುನೀತ್​ ರಾಜ್​ಕುಮಾರ್ ಅವರನ್ನು ಕಸಿದುಕೊಂಡ ದೇವರ ಬಗ್ಗೆ ಫ್ಯಾನ್ಸ್​ ಗರಂ ಆಗಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ನಮ್ಮ ನಡುವೆ ಇಲ್ಲ ಎಂಬುದನ್ನು ಒಪ್ಪಿಕೊಳ್ಳಲು ಕಷ್ಟ ಆಗುತ್ತಿದೆ. ಫಿಟ್ನೆಸ್​ಗೆ ಹೆಚ್ಚು ಮಹತ್ವ ನೀಡುತ್ತಿದ್ದ ಅವರು ಏಕಾಏಕಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ತೀವ್ರ ನೋವಿನ ಸಂಗತಿ. ಆ ನೋವು ಎಂದಿಗೂ ಮಾಸುವಂಥದ್ದಲ್ಲ. ಅಭಿಮಾನಿಗಳು ಪ್ರತಿ ದಿನವೂ ಪುನೀತ್​ ರಾಜ್​ಕುಮಾರ್ ಅವರನ್ನು ನೆನಪು ಮಾಡಿಕೊಳ್ಳುತ್ತಾರೆ. ಒಂದಿಲ್ಲೊಂದು ರೂಪದಲ್ಲಿ ಫ್ಯಾನ್ಸ್​ ಎದುರು ಅಪ್ಪು ಬರುತ್ತಾರೆ.

‘ಪ್ರಕೃತಿ ಆರ್ಟ್​ ಸೆಂಟರ್​’ ಕಲಾವಿದರ ಕಲ್ಪನೆಯಲ್ಲಿ ಈ ವಿಶೇಷವಾದ ಮೂರ್ತಿ ಮೂಡಿಬಂದಿದೆ. ರಾಘವೇಂದ್ರ ರಾಜ್​ಕುಮಾರ್​ ಅವರಿಗೆ ಇದು ತುಂಬ ಇಷ್ಟವಾಗಿದೆ. ಫೇಸ್​ಬುಕ್​ನಲ್ಲಿ ಫೋಟೋ ಹಂಚಿಕೊಂಡಿರುವ ಅವರು, ‘ಎಂಥಾ ಅದ್ಭುತ ಯೋಚನೆ’ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಅಭಿಮಾನಿಗಳು ಈ ಪೋಸ್ಟ್​ಗೆ ಹಲವು ಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Puneeth Rajkumar Twitter: ಮರಳಿ ಬಂತು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯ ಬ್ಲೂ ಟಿಕ್​; ಸಂಭ್ರಮಿಸಿದ ಅಪ್ಪು ಫ್ಯಾನ್ಸ್​
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​
Image
Ashwini Puneeth Rajkumar: ಪುನೀತ್​ ರಾಜ್​ಕುಮಾರ್​ ಹಾಡಿದ ‘ಅಪರೂಪ’ದ ಸಾಂಗ್​ ರಿಲೀಸ್​ ಮಾಡಿದ ಪತ್ನಿ ಅಶ್ವಿನಿ
Image
ಪುನೀತ್​ ಪುತ್ಥಳಿ ಅನಾವರಣದ ವೇಳೆ ಬಿಕ್ಕಿ ಬಿಕ್ಕಿ ಅತ್ತ ರಾಘವೇಂದ್ರ ರಾಜ್​ಕುಮಾರ್​ ಪತ್ನಿ ಮಂಗಳಾ

ಪುನೀತ್​ ಅವರನ್ನು ಇಷ್ಟು ಬೇಗ ಕರೆಸಿಕೊಂಡಿದ್ದಕ್ಕಾಗಿ ಅನೇಕ ಅಭಿಮಾನಿಗಳು ದೇವರನ್ನು ದೂಷಿಸುತ್ತಿದ್ದಾರೆ. ‘ದೇವರು ನಮ್ಮ ಪಾಲಿಗೆ ಇಲ್ಲ. ಅವನು ಕ್ರೂರಿ. ನಮ್ಮ ಅಪ್ಪುವನ್ನು ನಮ್ಮಿಂದ ಕಿತ್ತುಕೊಂಡ. ಅಪ್ಪು ಇಲ್ಲದೇ ಯಾವ ಹಬ್ಬನೂ ಮಾಡಲ್ಲ. ಮಾರ್ಚ್​ 17 ಮಾತ್ರ ನಮಗೆ ಹಬ್ಬ’ ಎಂದು ಅಭಿಮಾನಿಯೊಬ್ಬರು ಕಮೆಂಟ್​ ಮಾಡಿದ್ದಾರೆ. ಇನ್ನೂ ಕೆಲವರು, ‘ಈ ಕಲಾವಿದರ ನಂಬರ್​ ಕೊಡಿ, ನಮ್ಮ ಏರಿಯಾದಲ್ಲಿ ಈ ಸಲ ಇದೇ ಗಣಪನನ್ನು ಕೂರಿಸುತ್ತೇವೆ’ ಎಂದು ಮನವಿ ಮಾಡಿಕೊಂಡಿದ್ದಾರೆ.

Published On - 9:19 pm, Thu, 21 July 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು