AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆದ ಪವರ್​ಸ್ಟಾರ್​ ಪುನೀತ್​; ಅಭಿಮಾನಿಗಳಿಗೆ ಬಂತು ಹೊಸ ಸ್ಫೂರ್ತಿ

ಬುಧವಾರ (ಏ.7) ನಟ ಪುನೀತ್​ ರಾಜ್​​ಕುಮಾರ್​ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕೆ.ಸಿ. ಜನರಲ್ ಆಸ್ಪತ್ರೆಗೆ ತೆರಳಿ ಕೊರೊನಾ ಬಾರದಂತೆ ನೀಡುವ ಔಷಧವನ್ನು ಸ್ವೀಕರಿಸಿದ್ದಾರೆ.

ಕೊರೊನಾ ಲಸಿಕೆ ಪಡೆದ ಪವರ್​ಸ್ಟಾರ್​ ಪುನೀತ್​; ಅಭಿಮಾನಿಗಳಿಗೆ ಬಂತು ಹೊಸ ಸ್ಫೂರ್ತಿ
ಕೊರೊನಾ ಲಸಿಕೆ ಪಡೆದ ಪುನೀತ್​ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Apr 07, 2021 | 4:11 PM

Share

ಭಾರತದಲ್ಲಿ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮ ಭರದಿಂದ ಸಾಗುತ್ತಿದೆ. ಸಾಕಷ್ಟು ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಕೊರೊನಾ ಲಸಿಕೆ ಪಡೆಯುತ್ತಿದ್ದಾರೆ. ಈಗ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಕೂಡ ಕೊವಿಡ್​ ಲಸಿಕೆ ಪಡೆದಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಕೂಡ ಅವರು ಮಾಡಿದ್ದಾರೆ. ಇಂದು (ಏಪ್ರಿಲ್​ 7) ನಟ ಪುನೀತ್​ ರಾಜ್​​ಕುಮಾರ್​ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕೆ.ಸಿ. ಜನರಲ್ ಆಸ್ಪತ್ರೆಗೆ ತೆರಳಿ ಕೊರೊನಾ ಬಾರದಂತೆ ನೀಡುವ ಔಷಧವನ್ನು ಸ್ವೀಕರಿಸಿದ್ದಾರೆ. ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ನಾನು ಇಂದು ಕೊರೊನಾ ಲಸಿಕೆ ಪಡೆದಿದ್ದೇನೆ. 45 ವರ್ಷ ಮೇಲ್ಪಟ್ಟವರು ಹೋಗಿ ಕೊವಿಡ್​ ಲಸಿಕೆ ಸ್ವೀಕರಿಸಿ ಎಂದು ಮನವಿ ಮಾಡಿದ್ದಾರೆ.

ಈ ಟ್ವೀಟ್​ ನೋಡಿದ ಅನೇಕರು ಸ್ಫೂರ್ತಿ ಪಡೆದುಕೊಂಡಿದ್ದಾರೆ. ಕೆಲವರು ನಮ್ಮ ಕುಟುಂಬದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಕೊಡಿಸುತ್ತೇವೆ ಎನ್ನುವ ಭರವಸೆಯನ್ನು ನೀಡಿದ್ದಾರೆ. ಇನ್ನೂ ಕೆಲವರು ಪುನೀತ್ ಫಿಟ್​ನೆಸ್​ಗೆ ಹೊಗಳಿದ್ದಾರೆ. ನಿಮಗೆ 45 ವರ್ಷ ಆಯಿತು ಎಂದು ಹೇಳೋಕೆ ಸಾಧ್ಯವಿಲ್ಲ ಎಂದಿದ್ದಾರೆ.

ಏಪ್ರಿಲ್​ 1ರಂದು ಯುವರತ್ನ ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತಾದರೂ ರಾಜ್ಯ ಸರ್ಕಾರ ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರಿತ್ತು. ನಂತರ ಪುನೀತ್​ ಮನವಿ ಮೇರೆಗೆ ಏಪ್ರಿಲ್​ 6ರವರೆಗೆ ಹೌಸ್​ಫುಲ್​ ಪ್ರದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇಂದಿನಿಂದ, ಅರ್ಧದಷ್ಟು ಪ್ರೇಕ್ಷಕರಿಗೆ ಮಾತ್ರ ಕೂರಲು ಅವಕಾಶ ನೀಡಲಾಗುತ್ತಿದೆ.

ಇದನ್ನೂ ಓದಿ: ಸಿನಿಮಾ ಕೆಲಸಕ್ಕೆ ಬ್ರೇಕ್​ ನೀಡಿ ಮಂತ್ರಾಲಯದ ರಾಯರ ದರ್ಶನ ಪಡೆದ ಪುನೀತ್​-ಜಗ್ಗೇಶ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ