AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಇಂದು ಪುನೀತ್ ಹಾಲು- ತುಪ್ಪ ಕಾರ್ಯ; ಕಂಠೀರವ ಸ್ಟುಡಿಯೋ ಸುತ್ತ ಬಿಗಿ ಭದ್ರತೆ

Puneeth Rajkumar 5th day rituals: ಇಂದು (ನವೆಂಬರ್ 02) ಪುನೀತ್ ಸಮಾಧಿಗೆ ಹಾಲು- ತುಪ್ಪ ಬಿಡುವ ಕಾರ್ಯ ನಡೆಯಲಿದೆ. ಡಾ. ರಾಜ್ ಕುಟುಂಬ ಹಾಗೂ ಆಪ್ತವರ್ಗವಷ್ಟೇ ಇದರಲ್ಲಿ ಭಾಗಿಯಾಗಲಿದೆ.

Puneeth Rajkumar: ಇಂದು ಪುನೀತ್ ಹಾಲು- ತುಪ್ಪ ಕಾರ್ಯ; ಕಂಠೀರವ ಸ್ಟುಡಿಯೋ ಸುತ್ತ ಬಿಗಿ ಭದ್ರತೆ
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on:Nov 02, 2021 | 11:32 AM

Share

ಬೆಂಗಳೂರು: ನಟ ಪುನೀತ್ ರಾಜಕುಮಾರ್ ನಿಧನರಾಗಿ ಇಂದಿಗೆ 5 ದಿನಗಳಾಗಿವೆ. ಸಂಪ್ರದಾಯದ ಪ್ರಕಾರ ಪುನೀತ್ ಸಮಾಧಿಗೆ ಹಾಲು- ತುಪ್ಪ ಬಿಡುವ ಕಾರ್ಯ ಇಂದು ನಡೆಯಲಿದೆ. ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಶಿವರಾಜ್‌ಕುಮಾರ್,ರಾಘವೇಂದ್ರ ರಾಜ್ ಕುಮಾರ್ ಕುಟುಂಬ ಸೇರಿದಂತೆ ಆಪ್ತ ಬಳಗ ಭಾಗಿಯಾಗಲಿದೆ. ಇಂದು ಹಾಲು- ತುಪ್ಪ ಕಾರ್ಯದ ಹಿನ್ನೆಲೆಯಲ್ಲಿ ಅಪ್ಪು ಅಭಿಮಾನಿಗಳು ಸ್ಟುಡಿಯೋ ಮುಂದೆ ಜಮಾಯಿಸುತ್ತಿದ್ದು, ಪೊಲೀಸರು ವಾಪಸ್ಸು ಕಳಿಸುತ್ತಿದ್ದಾರೆ. ಸ್ಟುಡಿಯೋದ ಸುತ್ತಮುತ್ತ ಬಿಗಿಭದ್ರತೆ ಏರ್ಪಡಿಸಲಾಗಿದ್ದು, ಭದ್ರತೆಗಾಗಿ ಸ್ಥಳೀಯ ಪೊಲೀಸರು,ಕೆಎಸ್​ಆರ್​ಪಿ ತುಕಡಿ, ಆರ್​ಎಎಫ್ ಪೊಲೀಸರನ್ನು ನಿಯೋಜಿಸಲಾಗಿದೆ. ಇಂದಿನ ಕಾರ್ಯಕ್ರಮದ ನಂತರ ಅಭಿಮಾನಿಗಳಿಗೆ ಪುನೀತ್ ದರ್ಶನದ ಭಾಗ್ಯ ದೊರೆಯಲಿದೆ.

ನಟ ಶಿವರಾಜ್ ಕುಮಾರ್ ಈ ಕುರಿತು ಹೇಳಿಕೆ ನೀಡಿದ್ದು, ‘‘ಅಭಿಮಾನಿಗಳು ಸಹಕರಿಸಬೇಕು, ಅಪ್ಪುವನ್ನ ನೀವು ನೋಡಲೇ ಬೇಕು. ಆದರೆ ಒಂದೆರಡು ದಿನ, ಆಮೇಲೆ ಎಲ್ಲರೂ ಬಂದು ನೋಡಬಹುದು. ಇವತ್ತು ಕುಟುಂಬಸ್ಥರು ಮಾತ್ರ ಹಾಲು ತುಪ್ಪ ಕಾರ್ಯದಲ್ಲಿ ಭಾಗಿಯಾಗುತ್ತಿದ್ದೇವೆ. ಎಲ್ಲರೂ ಕುಟುಂಬಸ್ಥರೇ ಆದರೆ ಅಲ್ಲಿ ಎಷ್ಟು ಸ್ಥಳಾವಕಾಶ ಇದೆ ಅಷ್ಟೇ ಜನ ಹೋಗಬೇಕಿದೆ. ಅಭಿಮಾನಿಗಳಿಗೆ ಆದ ದುಃಖ ಯಾರು ಭರಿಸೋಕ್ಕೆ ಸಾಧ್ಯವಿಲ್ಲ. ಅಭಿಮಾನಿಗಳು ಬಂದು ನೋಡಲಿ, ಆದರೆ ಒಂದೆರಡು ದಿನ ಆದಮೇಲೆ ಬರಲಿ.’’ ಎಂದು ಮನವಿ ಮಾಡಿದ್ದಾರೆ.

ನಾಲ್ವರಿಗೆ ಬೆಳಕಾದ ಪುನೀತ್: ಸಾವಿನಲ್ಲೂ ಸಾರ್ಥಕತೆ ಮೆರೆದ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನೇತ್ರದಾನ ಮಾಡಿದ್ದರು. ಅಪ್ಪು ಕಣ್ಣನ್ನು ನಾಲ್ವರಿಗೆ ಅಳವಡಿಕೆ ಮಾಡಲಾಗಿದೆ ಅಂತ ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪುನೀತ್​​ರವರ 2 ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ ಬಂದಿದೆ. ಸಾಮಾನ್ಯವಾಗಿ 2 ಕಣ್ಣು ಇಬ್ಬರಿಗೆ ಅಳವಡಿಸುವುದು ಸಾಮಾನ್ಯ. ಆದರೆ ಪುನೀತ್‌ರ 2 ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ ಬಂದಿದೆ. ಹೊಸ ತಂತ್ರಜ್ಞಾನದ ಮೂಲಕ ನಾಲ್ವರಿಗೆ ದೃಷ್ಟಿ ನೀಡಲಾಗಿದೆ.

ಕಾರ್ನಿಯಾಗಳನ್ನ ಎರಡು ಭಾಗ ಮಾಡಲಾಗಿದೆ. ಮುಂಭಾಗದ ಕಣ್ಣು ಹಾಗೂ ಹಿಂಭಾಗದ ಆಳದ ಪದರಗಳನ್ನ ಭಾಗ ಮಾಡಲಾಗಿತ್ತು. ಯಾರಿಗೆ ಮುಂಭಾಗದ ಕಾರ್ನಿಯಾ ಹಾನಿಯಾಗಿತ್ತೋ ಅವರಿಗೆ ಮುಂಭಾಗದ ಕಾರ್ನಿಯಾ ನೀಡಲಾಗಿದೆ. ಹಿಂಭಾಗದ ಆಳದ ಪದರವನ್ನ ಬೇರೆಯವರಿಗೆ ನೀಡಲಾಗಿದೆ. ಒಟ್ಟು ನಾಲ್ಕು ಜನರಿಗೆ ಒಂದೇ ದಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಎಲ್ಲರೂ ಕರ್ನಾಟಕದವರಾಗಿದ್ದು, ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಓರ್ವ ಯುವತಿ ಹಾಗೂ ಮೂವರು ಪುರುಷರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಡಾ.ಭುಜಂಗಶೆಟ್ಟಿ ಹೇಳಿದ್ದಾರೆ. ಡಾ. ರಾಜ್ ಕೂಡ ನೇತ್ರದಾನ ಮಾಡಿದ್ದರು. ಅವರಂತೆಯೇ ಪುನೀತ್ ಕೂಡ ನೇತ್ರದಾನ ಮಾಡಿದ್ದಾರೆ.

ಇದನ್ನೂ ಓದಿ:

‘ಪುನೀತ್​ಗೆ ಪದ್ಮಶ್ರೀ ಪ್ರಶಸ್ತಿ ನೀಡಿ’; ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಪುನೀತ್​ ಅವರ 2 ಕಣ್ಣನ್ನು 4 ಜನರಿಗೆ ಜೋಡಿಸಿದ್ದು ಹೇಗೆ? ವೈದ್ಯರು ತೆರೆದಿಟ್ಟ ಅಚ್ಚರಿ ಮಾಹಿತಿ ಇಲ್ಲಿದೆ

Published On - 7:39 am, Tue, 2 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?