ಚಿರು ಸರ್ಜಾ ಸಾವನ್ನು ನೆನಪಿಸಿದ ಪುನೀತ್​ ಹೃದಯಾಘಾತ; ಹೃದಯದ ಆರೋಗ್ಯದ ಬಗ್ಗೆಯೂ ಇರಲಿ ಗಮನ

ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಚಿರು ಸರ್ಜಾ ಸಾವನ್ನು ನೆನಪಿಸಿದ ಪುನೀತ್​ ಹೃದಯಾಘಾತ; ಹೃದಯದ ಆರೋಗ್ಯದ ಬಗ್ಗೆಯೂ ಇರಲಿ ಗಮನ
ಪುನೀತ್​-ಚಿರಂಜೀವಿ ಸರ್ಜಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 29, 2021 | 5:28 PM

ಪುನೀತ್​ ರಾಜ್​ಕುಮಾರ್​ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯಾಘಾತವಾಗುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಫಿಟ್​ನೆಸ್​ ಬಗ್ಗೆ ಇಷ್ಟೊಂದು ಗಮನ ಹರಿಸುತ್ತಿದ್ದ ಪುನೀತ್​ ಏಕಾಏಕಿ ಮೃತಪಟ್ಟಿದ್ದು ಅಭಿಮಾನಿಗಳ ಪಾಲಿಗೆ ನಿಜಕ್ಕೂ ಶಾಕಿಂಗ್​ ವಿಚಾರ. ಪುನೀತ್​ ಅವರ ಸಾವು ಚಿರಂಜೀವಿ ಸರ್ಜಾ ಹೃದಯಾಘಾತದ ಘಟನೆಯನ್ನು ನೆನಪಿಸಿದೆ.

ಅದು 2020ರ ಜೂನ್​ 7. ತುಂಬಾನೇ ಆರೋಗ್ಯವಾಗಿದ್ದ ಚಿರಂಜೀವಿ ಸರ್ಜಾ ಅವರಿಗೆ ಹೃದಾಯಾಘಾತ ಸಂಭವಿಸಿತ್ತು. ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಯಾವುದೇ ಪ್ರಯೋಜನವಾಗಲೇ ಇಲ್ಲ. ಅವರು ಮೃತಪಟ್ಟಿದ್ದರು. ಈ ವಿಚಾರ ಶಾಕಿಂಗ್​ ಆಗಿತ್ತು. ಯಾವುದೇ ಹೃದಯದ ಸಮಸ್ಯೆ ಇಲ್ಲದೆ ಇದ್ದ ಚಿರು ಅವರು ಹೀಗೆ ಮೃತಪಟ್ಟಿದ್ದು ನಿಜಕ್ಕೂ ಶಾಕಿಂಗ್​ ಆಗಿತ್ತು. ಈಗ ಪುನೀತ್​ ನಿಧನ ಕೂಡ ಜೂನ್​ 7ರ ಘಟನೆಯನ್ನು ನೆನಪಿಸಿದೆ.

ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅವರು ಆಸ್ಪತ್ರೆಯಿಂದ ಹೊರಬರಲೆ ಇಲ್ಲ.

ಫಿಟ್ನೆಸ್​ ಬಗ್ಗೆ ಪುನೀತ್​ ಹೆಚ್ಚು ಗಮನ ನೀಡುತ್ತಾರೆ. ಪ್ರತಿದಿನ ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಾರೆ. ಆರೋಗ್ಯದ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಿದ್ದರೂ ಕೂಡ ಅವರು ಏಕಾಏಕಿ ಮೃತಪಟ್ಟಿದ್ದರು. ಪುನೀತ್​ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸಿದ್ದರು. ಆದರೆ, ಅದು ಸಾಧ್ಯವಾಗಲೇ ಇಲ್ಲ.

ಪುನೀತ್​ ಸಾವಿನ ನಂತರದಲ್ಲಿ ಹೃದಯದ ಆರೋಗ್ಯದ ಬಗ್ಗೆಯೂ ಹೆಚ್ಚು ಗಮನ ಹರಿಸುವಂತೆ ಜಾಗೃತಿ ಮೂಡಿಸುವ ಕೆಲಸ ಸೋಶಿಯಲ್​ ಮೀಡಿಯಾದಲ್ಲಿ ಆಗುತ್ತಿದೆ. ಪುನೀತ್ ಈ ಬಗ್ಗೆ ಹೆಚ್ಚು ಗಮನ ಹರಿಸಿಲ್ಲವೇ ಎನ್ನುವ ಪ್ರಶ್ನೆ ಮೂಡುತ್ತಿದೆ.

ಇದನ್ನೂ ಓದಿ: ಪಿಆರ್​ಕೆ ಪ್ರೊಡಕ್ಷನ್​ ಬಗ್ಗೆ ಪುನೀತ್​ ಕಂಡ ಆ ಕನಸು ಕೊನೆಗೂ ಈಡೇರಲೇ ಇಲ್ಲ

Puneeth Rajkumar: ನವೆಂಬರ್​ 1ಕ್ಕಾಗಿ ಕಾದಿದ್ದ ಪುನೀತ್; ಮಹತ್ವದ ದಿನ ಬರೋದಕ್ಕೂ ಮುನ್ನವೇ ವಿಧಿವಶ: ಸಿಎಂ ಹೇಳಿದ್ದೇನು?

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ