AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರು ಸರ್ಜಾ ಸಾವನ್ನು ನೆನಪಿಸಿದ ಪುನೀತ್​ ಹೃದಯಾಘಾತ; ಹೃದಯದ ಆರೋಗ್ಯದ ಬಗ್ಗೆಯೂ ಇರಲಿ ಗಮನ

ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಚಿರು ಸರ್ಜಾ ಸಾವನ್ನು ನೆನಪಿಸಿದ ಪುನೀತ್​ ಹೃದಯಾಘಾತ; ಹೃದಯದ ಆರೋಗ್ಯದ ಬಗ್ಗೆಯೂ ಇರಲಿ ಗಮನ
ಪುನೀತ್​-ಚಿರಂಜೀವಿ ಸರ್ಜಾ
TV9 Web
| Edited By: |

Updated on: Oct 29, 2021 | 5:28 PM

Share

ಪುನೀತ್​ ರಾಜ್​ಕುಮಾರ್​ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯಾಘಾತವಾಗುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಫಿಟ್​ನೆಸ್​ ಬಗ್ಗೆ ಇಷ್ಟೊಂದು ಗಮನ ಹರಿಸುತ್ತಿದ್ದ ಪುನೀತ್​ ಏಕಾಏಕಿ ಮೃತಪಟ್ಟಿದ್ದು ಅಭಿಮಾನಿಗಳ ಪಾಲಿಗೆ ನಿಜಕ್ಕೂ ಶಾಕಿಂಗ್​ ವಿಚಾರ. ಪುನೀತ್​ ಅವರ ಸಾವು ಚಿರಂಜೀವಿ ಸರ್ಜಾ ಹೃದಯಾಘಾತದ ಘಟನೆಯನ್ನು ನೆನಪಿಸಿದೆ.

ಅದು 2020ರ ಜೂನ್​ 7. ತುಂಬಾನೇ ಆರೋಗ್ಯವಾಗಿದ್ದ ಚಿರಂಜೀವಿ ಸರ್ಜಾ ಅವರಿಗೆ ಹೃದಾಯಾಘಾತ ಸಂಭವಿಸಿತ್ತು. ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಯಾವುದೇ ಪ್ರಯೋಜನವಾಗಲೇ ಇಲ್ಲ. ಅವರು ಮೃತಪಟ್ಟಿದ್ದರು. ಈ ವಿಚಾರ ಶಾಕಿಂಗ್​ ಆಗಿತ್ತು. ಯಾವುದೇ ಹೃದಯದ ಸಮಸ್ಯೆ ಇಲ್ಲದೆ ಇದ್ದ ಚಿರು ಅವರು ಹೀಗೆ ಮೃತಪಟ್ಟಿದ್ದು ನಿಜಕ್ಕೂ ಶಾಕಿಂಗ್​ ಆಗಿತ್ತು. ಈಗ ಪುನೀತ್​ ನಿಧನ ಕೂಡ ಜೂನ್​ 7ರ ಘಟನೆಯನ್ನು ನೆನಪಿಸಿದೆ.

ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅವರು ಆಸ್ಪತ್ರೆಯಿಂದ ಹೊರಬರಲೆ ಇಲ್ಲ.

ಫಿಟ್ನೆಸ್​ ಬಗ್ಗೆ ಪುನೀತ್​ ಹೆಚ್ಚು ಗಮನ ನೀಡುತ್ತಾರೆ. ಪ್ರತಿದಿನ ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಾರೆ. ಆರೋಗ್ಯದ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಿದ್ದರೂ ಕೂಡ ಅವರು ಏಕಾಏಕಿ ಮೃತಪಟ್ಟಿದ್ದರು. ಪುನೀತ್​ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸಿದ್ದರು. ಆದರೆ, ಅದು ಸಾಧ್ಯವಾಗಲೇ ಇಲ್ಲ.

ಪುನೀತ್​ ಸಾವಿನ ನಂತರದಲ್ಲಿ ಹೃದಯದ ಆರೋಗ್ಯದ ಬಗ್ಗೆಯೂ ಹೆಚ್ಚು ಗಮನ ಹರಿಸುವಂತೆ ಜಾಗೃತಿ ಮೂಡಿಸುವ ಕೆಲಸ ಸೋಶಿಯಲ್​ ಮೀಡಿಯಾದಲ್ಲಿ ಆಗುತ್ತಿದೆ. ಪುನೀತ್ ಈ ಬಗ್ಗೆ ಹೆಚ್ಚು ಗಮನ ಹರಿಸಿಲ್ಲವೇ ಎನ್ನುವ ಪ್ರಶ್ನೆ ಮೂಡುತ್ತಿದೆ.

ಇದನ್ನೂ ಓದಿ: ಪಿಆರ್​ಕೆ ಪ್ರೊಡಕ್ಷನ್​ ಬಗ್ಗೆ ಪುನೀತ್​ ಕಂಡ ಆ ಕನಸು ಕೊನೆಗೂ ಈಡೇರಲೇ ಇಲ್ಲ

Puneeth Rajkumar: ನವೆಂಬರ್​ 1ಕ್ಕಾಗಿ ಕಾದಿದ್ದ ಪುನೀತ್; ಮಹತ್ವದ ದಿನ ಬರೋದಕ್ಕೂ ಮುನ್ನವೇ ವಿಧಿವಶ: ಸಿಎಂ ಹೇಳಿದ್ದೇನು?

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ