ನಟ ಪುನೀತ್ ರಾಜ್​​ಕುಮಾರ್​ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ

ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಈ ಬಗ್ಗೆ ಘೋಷಣೆ ಆಗಿದೆ. ಬಸವಶ್ರೀ ಪ್ರಶಸ್ತಿ ಐದು ಲಕ್ಷ ರೂ. ನಗದನ್ನು ಒಳಗೊಂಡಿದೆ. ಬರುವ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.

ನಟ ಪುನೀತ್ ರಾಜ್​​ಕುಮಾರ್​ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ
ಪುನೀತ್​ ರಾಜ್​ಕುಮಾರ್
Follow us
| Updated By: ರಾಜೇಶ್ ದುಗ್ಗುಮನೆ

Updated on:Nov 04, 2021 | 2:36 PM

ನಟ ಪುನೀತ್​ ರಾಜ್​ಕುಮಾರ್​ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಷ್ಟಿಷ್ಟಲ್ಲ. ಚಿಕ್ಕ ವಯಸ್ಸಿನಿಂದಲೇ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದ ಅವರು ನಂತರ ಹೀರೋ ಆಗಿ ಸ್ಯಾಂಡಲ್​ವುಡ್​ನಲ್ಲಿ ಮೆರೆದರು. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದರು. ಈಗ ಚಿತ್ರದುರ್ಗದ ಮುರುಘಾಮಠ ಕೊಡುವ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ ಮರಣೋತ್ತರವಾಗಿ ಪುನೀತ್​ಗೆ ಸಿಗುತ್ತಿದೆ. ಮುರುಘಾಶ್ರೀಗಳು ಇಂದು (ನವೆಂಬರ್​ 4) ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಈ ಬಗ್ಗೆ ಘೋಷಣೆ ಆಗಿದೆ. ಬಸವಶ್ರೀ ಪ್ರಶಸ್ತಿ ಐದು ಲಕ್ಷ ರೂ. ನಗದನ್ನು ಒಳಗೊಂಡಿದೆ. ಬರುವ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಮುರುಘಾಮಠದ ಅನುಭವ ಮಂಟಪದಲ್ಲಿ ಈ ಸಮಾರಂಭ ನಡೆಯಲಿದ್ದು, ಪುನೀತ್ ಪರವಾಗಿ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ.  ನಟ ಶಿವರಾಜಕುಮಾರ್ ಅವರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ನವೆಂಬರ್ 10ರಂದು ಪುನೀತ್ ಮನೆಗೆ ಮುರುಘಾಶ್ರೀ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.

ಅದ್ಭುತ ನಟನೆ ಮೂಲಕ ಗಮನ ಸೆಳೆದ ಪುನೀತ್​ ರಾಜ್​ಕುಮಾರ್​ ಅವರಿಗೆ ಸಾಕಷ್ಟು ಪ್ರಶಸ್ತಿಗಳು ಒಲಿದಿವೆ. ಡ್ಯಾನ್ಸ್​ನಲ್ಲಿ ಅವರಿಗೆ ಸರಿಸಾಟಿಯಾಗಿ ನಿಲ್ಲುವ ಮತ್ತೊಬ್ಬರು ಸಿಗೋಕೆ ಸಾಧ್ಯವಿಲ್ಲ. ಪುನೀತ್​ ಅವರದ್ದು ನಟನೆಯಲ್ಲೂ ಎತ್ತಿದ ಕೈ. ಅವರಿಗೆ ಶ್ರೇಷ್ಠ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂಬುದು ಅನೇಕರ ಒತ್ತಾಯವಾಗಿತ್ತು. ಅವರ ಮರಣಾ ನಂತರ ಈ ಕೂಗು ಮತ್ತಷ್ಟು ಹೆಚ್ಚಿದೆ. ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಈ ಬಗ್ಗೆ ಆಗ್ರಹಿಸಿದ್ದರು.

ಈ ಬಗ್ಗೆ ಟ್ವೀಟ್​ ಮಾಡಿದ್ದ ಸಿದ್ದರಾಮಯ್ಯ, ‘ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ’ ಎಂದಿದ್ದರು.

ಇದನ್ನೂ ಓದಿ: ‘ಪುನೀತ್​ಗೆ ಪದ್ಮಶ್ರೀ ಪ್ರಶಸ್ತಿ ನೀಡಿ’; ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಪುನೀತ್​ ರಾಜ್​ಕುಮಾರ್​ ಸಾವಿನಲ್ಲೂ ಲಾಭ ಪಡೆದ ರಣಹದ್ದುಗಳು; ಆಕ್ರೋಶ ಹೊರ ಹಾಕಿದ ಅಭಿಮಾನಿಗಳು

Published On - 2:30 pm, Thu, 4 November 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ