AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್​ ಆಸ್ಪತ್ರೆಗೆ ಹೊರಟಾಗ ಮನೆಯಲ್ಲಿ ಮೂಡಿತ್ತು ಆತಂಕದ ವಾತಾವರಣ; ಇಲ್ಲಿದೆ ಸಿಸಿಟಿವಿ ದೃಶ್ಯಾವಳಿ

Puneeth Rajkumar House CCTV Footage: ಸಿಸಿಟಿವಿ ದೃಶ್ಯವಾಳಿಗಳಲ್ಲಿ ಪುನೀತ್​ ರಾಜ್​ಕುಮಾರ್​ ಅವರು ಮೊದಲು ಮನೆಯಿಂದ ಹೊರ ಬಂದು ಕಾಯುತ್ತಿರುತ್ತಾರೆ. ಇದಾದ ಬೆನ್ನಲ್ಲೇ ಅವರ ಪತ್ನಿ ಮನೆಯಿಂದ ಹೊರ ಬರುತ್ತಾರೆ.

Puneeth Rajkumar: ಪುನೀತ್​ ಆಸ್ಪತ್ರೆಗೆ ಹೊರಟಾಗ ಮನೆಯಲ್ಲಿ ಮೂಡಿತ್ತು ಆತಂಕದ ವಾತಾವರಣ; ಇಲ್ಲಿದೆ ಸಿಸಿಟಿವಿ ದೃಶ್ಯಾವಳಿ
ಪುನೀತ್​
TV9 Web
| Edited By: |

Updated on:Nov 02, 2021 | 3:15 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar)​ ಮೃತಪಟ್ಟು ಐದು ದಿನಗಳು ಕಳೆದಿವೆ. ಇಂದು (ನವೆಂಬರ್​ 2) ಅವರ ಸಮಾಧಿಗೆ ಹಾಲುತುಪ್ಪ ಬಿಡುವ ಕಾರ್ಯ ಕೂಡ ನಡೆದಿದೆ. ಅವರನ್ನು ಕಳೆದುಕೊಂಡು ಇಷ್ಟು ದಿನವಾದರೂ ಅಭಿಮಾನಿಗಳ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ. ಅವರು ಕಂಡಿದ್ದ ಕನಸು ಅವರ ಜತೆಗೆ ಮಣ್ಣಾಗಿದೆ. ಇದು ಸಾಕಷ್ಟು ನೋವು ತರಿಸಿದೆ. ಪುನೀತ್​ (Puneeth) ಮೃತಪಡುವ ದಿನ ಬೆಳಗ್ಗೆ ಜಿಮ್​ ಮಾಡಿದ್ದರು ಎಂದು ಕೆಲವರು ಹೇಳುತ್ತಾರೆ. ಇನ್ನೂ ಕೆಲವರು ಅವರು ಜಿಮ್​ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಈ ಗೊಂದಲಕ್ಕೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಈ ಮಧ್ಯೆ ಅವರು ಆಸ್ಪತ್ರೆಗೆ ತೆರಳುವುದಕ್ಕೂ ಮೊದಲು ಮನೆಯಿಂದ ಕಾರು ಹತ್ತಿ ಹೊರಡುತ್ತಿರುವ ಸಿಸಿಟಿವಿ ದೃಶ್ಯಾವಳಿಗಳು ಈಗ ಟಿವಿ9ಗೆ ಲಭ್ಯವಾಗಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪುನೀತ್​ ರಾಜ್​ಕುಮಾರ್ (Puneeth Rajkumar House CCTV Footage)​ ಅವರು ಮೊದಲು ಮನೆಯಿಂದ ಹೊರ ಬಂದು ಕಾಯುತ್ತಿರುತ್ತಾರೆ. ಇದಾದ ಬೆನ್ನಲ್ಲೇ ಅವರ ಪತ್ನಿ ಮನೆಯಿಂದ ಹೊರ ಬರುತ್ತಾರೆ. ಇಬ್ಬರೂ ಕಾರು ಏರಿ ಮನೆಯಿಂದ ಹೊರಡುತ್ತಾರೆ. ಕಾರು ಹೊರಡುತ್ತಿದ್ದಂತೆ ಸೆಕ್ಯುರಿಟಿ ಸಿಬ್ಬಂದಿ ಮನೆಯ ಗೇಟ್​ ತೆರೆಯುತ್ತಾರೆ. ಇದಿಷ್ಟು ಸಿಸಿಟಿವಿ ದೃಶ್ಯಗಳಲ್ಲಿ ಕಂಡು ಬಂದಿದೆ. ಈ ದೃಶ್ಯಗಳಲ್ಲಿ ಎಲ್ಲರೂ ಆತಂಕ ಗೊಂಡಿದ್ದು ಸ್ಪಷ್ಟವಾಗಿ ಕಾಣುತ್ತಿತ್ತು.

ಇತ್ತೀಚೆಗೆ ಟಿವಿ9 ಕನ್ನಡದ ಜತೆ ಮಾತನಾಡಿದ್ದ ಪುನೀತ್​ ಅಂಗರಕ್ಷಕ ಛಲಪತಿ ಅವರು ಇದೇ ಘಟನೆಯನ್ನು ವಿವರಿಸಿದ್ದರು. ‘ಅಕ್ಕ (ಪುನೀತ್​ ಪತ್ನಿ ಅಶ್ವಿನಿ) ಮತ್ತು ಪುನೀತ್​ ಹೊರಹೋಗುತ್ತಿದ್ದೇವೆ ಎಂದರು. ನಾನು ಕಾರು ಹತ್ತಿಸಿ ನಾನೂ ಹತ್ತೋಕೆ ಹೋದೆ. ನೀವು ಇಲ್ಲೇ ಇರಿ ನಾವು ಬರುತ್ತೇವೆ ಎಂದು ಬಾಸ್​ ಹೇಳಿದರು. ಹಾಗಾಗಿ ನಾನು ಮನೆಯಲ್ಲೇ ಇದ್ದೆ. ನಂತರ ಅವರು ಬರಲೇ ಇಲ್ಲ’ ಎಂದು ಕಣ್ಣೀರು ಹಾಕಿದ್ದರು. ಸಿಸಿಟಿವಿ ದೃಶ್ಯಾವಳಿಗಳಿಗೂ ಛಲಪತಿ ಹೇಳಿದ ಮಾತಿಗೂ ತಾಳೆ ಆಗಿದೆ.

ಇನ್ನು, ಪುನೀತ್​ ಆಸ್ಪತ್ರೆಗೆ ಬಂದಾಗ ಸಹಜವಾಗಿದ್ದರು ಎಂದು ವೈದ್ಯರು ತಿಳಿಸಿದ್ದರು. ಸಿಸಿಟಿವಿ ದೃಶ್ಯಗಳಲ್ಲೂ ಅವರು ಸಹಜವಾಗಿದ್ದಿದ್ದು ಕಂಡು ಬಂದಿತ್ತು. ಆದರೆ ಎಲ್ಲರೂ ತರಾತುರಿಯಲ್ಲಿದ್ದರು. ‘ಪುನೀತ್ ಅವರು ತಮ್ಮ ನಿಯಮಿತ ಜಿಮ್ ಸೆಷನ್ ಅನ್ನು ಪೂರ್ಣಗೊಳಿಸಿ, ನಂತರ ಬಾಕ್ಸಿಂಗ್ ಮತ್ತು ಸ್ಟೀಮ್ ಸೆಷನ್​ ಪೂರ್ಣಗೊಳಿಸಿದರು. ಇದಾದ ನಂತರ ಅವರಿಗೆ ತುಂಬಾನೇ ದಣಿವಾದಂತೆ ಭಾಸವಾಗಿತ್ತು. ತೀವ್ರ ಹೃದಯ ಸ್ತಂಭನದಿಂದ ಅವರು ಮೃತಪಟ್ಟಿರಬಹುದು. ಏಕಾಏಕಿ ಈ ರೀತಿ ಸಾವು ಸಂಭವಿಸುವ ಸಾಧ್ಯತೆ ದೈಹಿಕ ಚಟುವಟಿಕೆಯ ಸಮಯದಲ್ಲಿ, ಆಟ ಆಡುವ ಸಂದರ್ಭದಲ್ಲಿ ಅಥವಾ ದೈಹಿಕವಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಹೆಚ್ಚಿರುತ್ತದೆ’ ಎಂದು ಡಾ. ರಮಣ್ ರಾವ್​ ಹೇಳಿದ್ದರು​.

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

Published On - 2:36 pm, Tue, 2 November 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್